Homeಕರ್ನಾಟಕನಗರ್ತಪೇಟೆ ಗಲಾಟೆಗೆ ಕೋಮುಬಣ್ಣ: 'ಜಾಗೃತ ನಾಗರಿಕರು ಕರ್ನಾಟಕ' ವೇದಿಕೆಯಿಂದ ಚುನಾವಣಾ ಆಯೋಗಕ್ಕೆ ದೂರು

ನಗರ್ತಪೇಟೆ ಗಲಾಟೆಗೆ ಕೋಮುಬಣ್ಣ: ‘ಜಾಗೃತ ನಾಗರಿಕರು ಕರ್ನಾಟಕ’ ವೇದಿಕೆಯಿಂದ ಚುನಾವಣಾ ಆಯೋಗಕ್ಕೆ ದೂರು

- Advertisement -
- Advertisement -

ನಗರ್ತಪೇಟೆ ಮೊಬೈಲ್ ಅಂಗಡಿ ಗಲಾಟೆ ಪ್ರಕರಣಕ್ಕೆ ಕೋಮುಬಣ್ಣ ನೀಡಿಲು ಯತ್ನಿಸಿದ ಬಿಜೆಪಿ ನಾಯಕರ ವಿರುದ್ಧ ‘ಜಾಗೃತ ನಾಗರಿಕರು ಕರ್ನಾಟಕ’ ವೇದಿಕೆ ನಿಯೋಗವು ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಯವರನ್ನು ಭೇಟಿಯಾಗಿ ದೂರು ಸಲ್ಲಿಸಿದೆ.

ಲೋಕಸಭಾ ಚುನಾವಣೆಯ ಈ ಅವಧಿಯಲ್ಲಿ ಕೋಮುದ್ವೇಷ, ಧರ್ಮದ್ವೇಷ ಪ್ರಚೋದಿಸುವ ಯಾವುದೇ ಘಟನೆ ಮಾತುಗಳಿಗೆ ಅವಕಾಶ ನೀಡಬಾರದು. ನಗರ್ತಪೇಟೆಯಲ್ಲಿ ಭಾರತೀಯ ಜನತಾ ಪಕ್ಷದ ಹಾಲಿ ಸಂಸದರು, ಸಚಿವರು, ಸಂಭಾವ್ಯ ಅಭ್ಯರ್ಥಿಗಳು, ಶಾಸಕರು ಕಾನೂನು ಬಾಹಿರ ಪ್ರತಿಭಟನೆ ನಡೆಸಿದ್ದಾರೆ. ದ್ವೇಶ ಭಾಷಣ ಮಾಡಿದ ಸಂಸದರಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸುರೇಶ್ ಕುಮಾರ್ ಮತ್ತಿತರರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ‌ ಮತ್ತು ಧಾರ್ಮಿಕ ನೆಲೆಯ ಗಲಭೆ‌ ಪ್ರಚೋದನೆಯ ಕೃತ್ಯದ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ತಮ್ಮ ಮನವಿಯಲ್ಲಿ ಆಗ್ರಹಿಸಿದ್ದಾರೆ.

‘ಮನವಿ ಸ್ವೀಕರಿಸಿದ ಮುಖ್ಯ ಚುನಾವಣಾ ಅಧಿಕಾರಿಗಳು, ಘಟನೆ ತಮ್ಮ ಗಮನಕ್ಕೆ ಬಂದಿದ್ದು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಸಂಘಟನೆ ಮುಖಂಡತು ತಿಳಿಸಿದ್ದಾರೆ.

ಮನವಿ ಪತ್ರದಲ್ಲಿ ಏನಿದೆ?

ದೇಶದ ಸಂವಿಧಾನವನ್ನು ಗೌರವಿಸುವ ಕರ್ನಾಟಕದ ಸಮಾನ ಮನಸ್ಕರನ್ನೊಳಗೊ೦ಡಿರುವ ಜಾಗೃತ ನಾಗರಿಕರು ಕರ್ನಾಟಕ ವೇದಿಕೆಯ ಮೂಲಕ ಈ ಪತ್ರವನ್ನು ತಮಗೆ ಸಲ್ಲಿಸ ಬಯಸುತ್ತೇವೆ; ಮತ್ತು ಸೂಕ್ತ ಕ್ರಮಕ್ಕಾಗಿ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ದಿನಾ೦ಕ 17.03.2024ರಂದು ಬೆ೦ಗಳೂರಿನ ನಗರ್ತಪೇಟೆಯಲ್ಲಿ ನಡೆಯಿತೆನ್ನಲಾದ ಒಂದು ಘಟನೆಯನ್ನಾಧರಿಸಿ, ಬೆ೦ಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಹಾಲಿ ಸಂಸದರು ಮತ್ತು ಸಂಭಾವ್ಯ ಅಭ್ಯರ್ಥಿಯಾದ ತೇಜಸ್ವಿ ಸೂರ್ಯ, ಕೇಂದ್ರದ ಸಚಿವರಾದ ಹಾಗೂ ಬೆ೦ಗಳೂರು ಉತ್ತರ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾದ ಶೋಭಾ ಕರಂದ್ಲಾಜೆಯವರು, ಬೆಂಗಳೂರು ರಾಜಾಜಿನಗರದ ಶಾಸಕರೂ ಆಗಿರುವ ಸುರೇಶ್‌ ಕುಮಾರ್‌ ರವರು ನಗರ್ತಪೇಟೆಯಲ್ಲಿ ಸಾವಿರಾರು ಜನರನ್ನು ಸೇರಿಸಿ ಪ್ರತಿಭಟನೆ ನಡೆಸಿದ್ದಾರೆ೦ದು ಮಾಧ್ಯಮಗಳಲ್ಲಿ ನೋಡಿ ಆತಂಕಿತರಾಗಿದ್ದೇವೆ ಎಂದು ಹೇಳಿದ್ದಾರೆ.

ಅಂಗಡಿಯೊಂದರಲ್ಲಿ ಜಗಳ ನಡದಿದ್ದು; ಅದರ ಮಾಲೀಕರು ಕೊಟ್ಟ ದೂರಿನನ್ವಯ ಹಲಸೂರು ಗೇಟ್‌ ಪೋಲಿಸ್‌ ಸ್ಟೇಷನ್‌ ನಲ್ಲಿ ಎಫ್‌.ಐ.ಆರ್‌. ಕೂಡಾ ದಾಖಲಾಗಿದೆ. ಅದರಲ್ಲಿ ಯಾವುದೇ ಧಾರ್ಮಿಕ ನೆಲೆಯ ಗಲಾಟೆಗಳ ಕುರಿತ ಅಂಶಗಳಿಲ್ಲ; ಅಂತಹ ಯಾವ ಘಟನೆಗಳು ನಡೆದಿಲ್ಲ ಎ೦ಬ ಪೋಲೀಸರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲಿ ಯಾವುದೇ ಘಟನೆ ನಡೆದಿದ್ದರೂ, ಅದರ ಗಹನತೆಯನ್ನಾದಧರಿಸಿ ಪೋಲೀಸರು ಕ್ರಮ ಕೈಗೊಳ್ಳುವುದು ನೆಲದ ಕಾನೂನಿನ ಪ್ರಕಾರ ನಡೆಯಬೇಕು. ಆದರೆ, ನಡೆದ ಘಟನೆಗೆ ಕೋಮುವಾದದ ಬಣ್ಣ ಬಳಿದು, ಅದನ್ನು ಕೋಮುದ್ವೇಷ ಹರಡಲು ಬೆ೦ಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯರವರು ಪ್ರಯತ್ನ ನಡೆಸಿದ್ದಾರೆ. ಅವರ ಸಾಮಾಜಿಕ ಮಾಧ್ಯಮಗಳ ಮೂಲಕ ಅವರು ಹಾಕಿರುವ ಹೇಳಿಕಯಲ್ಲಿ ಇದು ಸ್ಪಷ್ಟವಾಗುತ್ತದೆ. ತೇಜಸ್ಟಿ ಸೂರ್ಯ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿ ಮಾತನಾಡಿದ ವಿಡಿಯೋ ಯೂಟ್ಯೂಬ್‌ ನಲ್ಲಿ ಪ್ರಸಾರವಾಗಿದೆ. ಅವರ ಮಾತುಗಳು ಅತ್ಯ೦ತ ಪ್ರಚೋದನಕಾರಿಯಾಗಿದ್ದು ಅನಗತ್ಯ ದೋಷಾರೋಪಣೆಯನ್ನೂ ಮಾಡುತ್ತಿರುವುದು ಕೇಳಿಬರುತ್ತಿದೆ ಎಂದು ವಿವರಿಸಿದ್ದಾರೆ.

ದಿನಾಂಕ 19.03.2024ರಂದು ನಗರ್ತಪೇಟೆಯ ಬೀದಿಗಳಲ್ಲಿ ಹಿಂದೂ ಜಾಗರಣ ಹಾಗೂ ಬಜರಂಗ ದಳದ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ನಾರೆ. ಆ ಪ್ರತಿಭಟನೆಯಲ್ಲಿ ಕೇಂದ್ರ ಸಚಿವೆ ಮತ್ತು ಬೆ೦ಗಳೂರು ಉತ್ತರ ಲೋಕಸಭಾ ಕ್ವೇತ್ರದ ಸಂಭಾವ್ಯ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು, ರಾಜಾಜಿನಗರದ ಶಾಸಕ ಸುರೇಶ್‌ ಕುಮಾರ್‌, ಸಂಸದ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರವರು ಭಾಗವಹಿಸಿದ್ದರು. ಪ್ರತಿಭಟನಾಕಾರರು ರಸ್ತೆಯ ಮೇಲೆ ಹನುಮಾನ್‌ ಚಾಲೀಸಾ ಪಠಣ ಮಾಡಲು ಕುಳಿತರೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಇಡೀ ದೇಶದಲ್ಲೀಗ ಚುನಾವಣಾ ನೀತಿ ಸಂಹಿತ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಗಳಾಗಿದ್ದವರು ಅತ್ಯ೦ತ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ, ಭಾರತದ ಸಂವಿಧಾನದ ಪ್ರತಿ ಕಲಮುಗಳನ್ನು ಎತ್ತಿ ಹಿಡಿಯಬೇಕು. ದೇಶದ ಸರ್ವೋಚ್ಚ ನ್ಯಾಯಾಲಯವೂ ಕೂಡ ದ್ವೇಷ ಪ್ರಚೋದನೆಯ ಮಾತುಗಳನ್ನಾಡುವುದನ್ನು ನಿಗ್ರಹಿಸಬೇಕೆಂದು ಹಲವು ಬಾರಿ ಹೇಳಿದೆ. ಆದರೆ, ಈ ಮೇಲೆ ಉಲ್ಲೇಖಿಸಿದ ಪ್ರಮುಖರು ಕೇಂದ್ರದಲ್ಲಿ ಸರ್ಕಾರವನ್ನು ನಡೆಸುತ್ತಿರುವ, ರಾಷ್ಟ್ರೀಯ ಪಕ್ಷವೊಂದರ ಜನ ಪ್ರತಿನಿಧಿಗಳು. ದೇಶದ ಸಂವಿಧಾನವನ್ನು ಗೌರವಿಸಿ ಕಾಪಾಡುವ ಕೆಲಸದಲ್ಲಿ ತೊಡಗುವ ಬದಲು, ಕೋಮುದ್ವೇಷವನ್ನು ಹೆಚ್ಚಿಸುವ ರೀತಿ ಪ್ರಚೋದನಕಾರಿಯಾಗಿ ಮಾತನಾಡುತ್ತಿದ್ದಾರೆ. ಜನರನ್ನು ದೊಂಬಿ ಗಲಭೆಗಳಿಗೆ ಪ್ರಚೋದಿಸುತ್ತಿರುವುದು, ಧರ್ಮ ದ್ವೇಷಕ್ಕೆ ಪುಷ್ಠಿಕೊಡುತ್ತಿರುವುದು ಭಾರತೀಯ ದಂಡ ಸಂಹಿತೆಯ ಪ್ರಕಾರ ಕೂಡ ಶಿಕ್ಟಾರ್ಹ ಅಪರಾಧವಾಗಿದೆ ಎಂದು ಹೇಳಿದ್ದಾರೆ.

ಚುನಾವಣೆ ಘೋಷಣೆಯಾದ ಮರುಕ್ಷಣವೇ ನಡೆದ ಈ ಫಟನೆ ಮು೦ದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ಹಲವು ರೂಪಾ೦ತರಗಳ ಸೂಚನೆಯಾಗಿದೆ. ಸಂವಿಧಾನ ಪ್ರೇಮಿಗಳಾದ ನಾವು ಈ ಘಟನೆಯಿಂದ ಆತಂಕಿತರಾಗಿದ್ದೇವೆ. ಚುನಾವಣಾ ಆಯೋಗವು ಈ ದಿಸೆಯಲ್ಲಿ ಗಂಭೀರವಾಗಿ ಚಿ೦ತಿಸಬೇಕು. ದೇಶದ ಜಾತ್ಯತೀತ, ಮತ ನಿರಪೇಕ್ಷ ಗುಣಗಳಿಗೆ ಮಸಿ ಬಳಿಯುವ ಪ್ರಯತ್ನವನ್ನು ಯಾರೇ ಮಾಡಿದರೂ, ಧರ್ಮ ಜಾತಿಗಳ ಹೆಸರಿನಲ್ಲಿ ದ್ವೇಷ, ಹಿ೦ಸೆ ಗಲಭೆ ಪ್ರಚೋದಿಸುವ ಕೆಲಸ ಎಲ್ಲೇ ನಡದರೂ, ಅಂತಹ ಶಕ್ತಿಗಳಿಗೆ ಯಾವುದೇ ಆಸ್ಪದ ನೀಡದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸದರಿ ಪ್ರಕರಣದಲ್ಲಿ ಭಾಗಿಗಳಾದ ಮೂವರು ಸಂಸದರು ಮತ್ತು ಒಬ್ಬರು ಶಾಸಕರ ಮೇಲೆ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳಬೇಕೆ೦ದು ಒತ್ತಾಯಿಸುತ್ತೇವೆ ಎಂದು ಜಾಗೃತ ನಾಗರಿಕರು ಕರ್ನಾಟಕ ವೇದಿಕೆ ಆಗ್ರಹಿಸಿದೆ.

ಚುನಾವಣಾ ಆಯುಕ್ತರನ್ನು ಭೇಟಿಯಾದ ನಿಯೋಗದಲ್ಲಿ ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್, ಪತ್ರಕರ್ತ ದಿನೇಶ್ ಅಮಿನಮಟ್ಟು, ವಿಮಲಾ.ಕೆ.ಎಸ್, ಬಿ.ಶ್ರೀಪಾದ‌ ಭಟ್, ಜಾಣಗೆರೆ ವೆಂಕಟರಾಮಯ್ಯ, ಕಾ.ತ.ಚಿಕ್ಕಣ್ಣ, ಡಾ.ಬಂಜಗೆರೆ ಜಯಪ್ರಕಾಶ್, ಟಿ.ಸುರೇಂದ್ರ ರಾವ್, ರವಿ ಕುಮಾರ್ ಬಾಗಿ, ಎಚ್.ದಂಡಪ್ಪ ಇದ್ದರು.

ಇದನ್ನೂ ಓದಿ; ಹಲ್ಲೆ ಪ್ರಕರಣವನ್ನು ದೊಡ್ಡದಾಗಿಸುವ ಅಗತ್ಯ ಇರಲಿಲ್ಲ: ಬಿಜೆಪಿ ಶಾಸಕ ಗರುಡಾಚಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...