Homeಆರೋಗ್ಯಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

ಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

- Advertisement -
- Advertisement -

ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಮಕ್ಕಳಲ್ಲಿ ಕೇವಲ 6.4% ರಷ್ಟು ಮಕ್ಕಳು ಮಾತ್ರ “ಕನಿಷ್ಠ ಸ್ವೀಕಾರಾರ್ಹ ಆಹಾರ” ಪಡೆಯುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ಮೊದಲ ಸಮಗ್ರ ರಾಷ್ಟ್ರೀಯ ಪೌಷ್ಟಿಕಾಂಶ ಸಮೀಕ್ಷೆ (ಸಿಎನ್‌ಎನ್‌ಎಸ್)ಯ ವರದಿ ಹೊರಹಾಕಿದೆ.

ಈ ಪ್ರಮಾಣವು ಪಟ್ಟಿಯ ಅತ್ಯಂತ ತುದಿಯಲ್ಲಿ, ಆಂಧ್ರಪ್ರದೇಶದಲ್ಲಿ ಕೇವಲ 1.3% ಇದ್ದರೆ ಸಿಕ್ಕಿಂನಲ್ಲಿ 35.9% ಇದೆ. ಉಳಿದಂತೆ ಮಹಾರಾಷ್ಟ್ರ (2.2%), ಗುಜರಾತ್, ತೆಲಂಗಾಣ ಮತ್ತು ಕರ್ನಾಟಕ (ಮೂರರಲ್ಲಿಯೂ 3.6%) ಮತ್ತು ತಮಿಳುನಾಡುನಲ್ಲಿ (4.2%) ನಷ್ಟಿದೆ.

ಕೇರಳ ಎರಡನೇ ಸ್ಥಾನದಲ್ಲಿರುವುದು (32.6%), ಆಶ್ಚರ್ಯವಲ್ಲದಿದ್ದರೂ, ಒಡಿಶಾ, ಛತ್ತೀಶ್‌ಘಡ್ ಜಾರ್ಖಂಡ್ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ‘ಹಿಂದುಳಿದವರು’ ಇದ್ದಾರೆ ಎಂದು ಪರಿಗಣಿಸಲ್ಪಟ್ಟಿದ್ದರೂ ಸಹ ಅಲ್ಲಿನ ಅಂಕಿಅಂಶಗಳು ರಾಷ್ಟ್ರೀಯ ಸರಾಸರಿಗಿಂತ ಮೇಲಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ 35% ರಷ್ಟು ಕುಂಠಿತ ಬೆಳವಣಿಗೆ ಹೊಂದಿದ್ದಾರೆ. (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ಎತ್ತರ). ಈ ವಯಸ್ಸಿನವರಲ್ಲಿ, 17% (ಎತ್ತರಕ್ಕೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಮತ್ತು 33% ಕಡಿಮೆ ತೂಕ (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಇದ್ದಾರೆ ಎಂದು ತಿಳಿಸಿದೆ. ಇದಕ್ಕೆ ವಿರುದ್ಧವಾಗಿ, ಸುಮಾರು 2% ರಷ್ಟು ಅಧಿಕ ತೂಕ ಅಥವಾ ಬೊಜ್ಜು ಹೊಂದಿದ್ದಾರೆ. ಇದನ್ನು  ಬಿಟ್ಟರೆ 6 ತಿಂಗಳು ಮತ್ತು 59 ತಿಂಗಳ ನಡುವಿನ ವಯಸ್ಸಿನವರಲ್ಲಿ, 11% ನಷ್ಟು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದಿದೆ.

ಸಂಶೋಧನೆಗಳು ಭಾರತದ ಮಕ್ಕಳ ಪೋಷಣೆಯ ವಿಷಯದಲ್ಲಿ ಆತಂಕಕಾರಿಯಾದ ಅಂಕಿ ಅಂಶಗಳನ್ನು ನೀಡಿದೆ. ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದರೂ, ಇದಕ್ಕೆ ಬಡತನವು ಪ್ರಮುಖ ಕಾರಣವಾಗಿದ್ದರೆ ಆಹಾರದ ನಿರ್ಬಂಧಗಳು ಸಹ ಕೆಲವು ಸಂದರ್ಭಗಳಲ್ಲಿ ಕಾರಣವಾಗಿದೆ ಎಂದಿದ್ದಾರೆ.

ಬಡ ಕುಟುಂಬಗಳಿಂದ ಕೇವಲ 1% ಹದಿಹರೆಯದವರು ಅಧಿಕ ತೂಕ ಹೊಂದಿದ್ದರೆ, ಶ್ರೀಮಂತ ಮನೆಗಳಲ್ಲಿ ಈ ಪ್ರಮಾಣವು 12% ಇದೆ. ಅಂದರೆ ಅತಿ ತೂಕ ಹೊಂದಿರುವ ಸರಿಸುಮಾರು ಎಂಟು ಮಕ್ಕಳಲ್ಲಿ ಒಬ್ಬರು ಶ್ರೀಮಂತ ಆರ್ಥಿಕ ವರ್ಗದಿಂದ ಬಂದಿರುತ್ತಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ 10% ಶಾಲಾ-ವಯಸ್ಸಿನ ಮಕ್ಕಳು ಮತ್ತು ಹದಿಹರೆಯದವರು ಮಧುಮೇಹ ಆವರಿಸುವ ಮುಂಚಿನ ಸ್ಥಿತಿಯಲ್ಲಿದ್ದಾರೆ ಎಂದು ಸಮೀಕ್ಷೆಯು ಕಂಡುಹಿಡಿದಿದೆ.

ಸಿಎನ್‌ಎನ್‌ಎಸ್ ಭಾರತದಲ್ಲಿ ಇದುವರೆಗೆ ನಡೆಸಿದ ಅತಿದೊಡ್ಡ ಸೂಕ್ಷ್ಮ ಪೋಷಕಾಂಶಗಳ ಸಮೀಕ್ಷೆಯಾಗಿದೆ. ಇದು 1.1 ಲಕ್ಷ ಮಕ್ಕಳು ಮತ್ತು ಹದಿಹರೆಯದವರನ್ನು ಸಂದರ್ಶಿಸಿದೆ ಮತ್ತು ಅವರಿಂದ ಆಂಥ್ರೊಪೊಮೆಟ್ರಿಕ್ ಅಳತೆಗಳನ್ನು ಸಂಗ್ರಹಿಸಿದೆ. ಸಮೀಕ್ಷೆಗಾಗಿ 51,000 ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರಿಂದ ರಕ್ತ, ಮೂತ್ರ ಮತ್ತು ಮಲ ಮಾದರಿಗಳನ್ನು ಸಹ ತೆಗೆದುಕೊಳ್ಳಲಾಗಿದೆ. ಇದು ಅವರ ತಾಯಂದಿರ ಆಹಾರ ಮತ್ತು ಶಿಕ್ಷಣ, ಸಮುದಾಯ, ಜಾತಿ ಮತ್ತು  ಅವರಿಗಿದ್ದ ಆದಾಯವನ್ನು ಒಳಗೊಂಡಂತೆ ಸಮೀಕ್ಷೆ ನಡೆಸಿದವರ ಹಿನ್ನೆಲೆ ಗುಣಲಕ್ಷಣಗಳನ್ನು ಸಹ ಅಧ್ಯಯನ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...