Homeಮುಖಪುಟಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಪ್ಯಾರಿಸ್ ಮೂಲದ ವಿಶ್ವ ಅಸಮಾನತೆಯ ಪ್ರಯೋಗಾಲಯವು(World Inequality Lab) ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ, 1922-2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆಯಡಿ ವರದಿಯನ್ನು ಬಹಿರಂಗಪಡಿಸಿದ್ದು, ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕವಾಗಿ ಹೆಚ್ಚಳವಾಗಿದೆ ಎಂದು ಹೇಳಿದೆ.

ಭಾರತದ ಜನಸಂಖ್ಯೆಯ ಅಗ್ರ ಶೇ.1ರಷ್ಟು ಜನರು ದೇಶದ ಆದಾಯದ ಹೆಚ್ಚಿನ ಪಾಲು ಹೊಂದಿದ್ದಾರೆ ಎಂದು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್ (ಡಬ್ಲ್ಯುಐಎಲ್)ನ ಅಧ್ಯಯನ ವರದಿಯು ಹೇಳಿದ್ದು, ಒಟ್ಟು ಆದಾಯ ಮತ್ತು ಸಂಪತ್ತಿನಲ್ಲಿ ಅಗ್ರ 1% ಭಾರತೀಯರ ಪಾಲು 2022-23ರಲ್ಲಿ ಅದರ ಅತ್ಯಧಿಕ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

World Inequality Lab 1922 ಮತ್ತು 2022ರ ನಡುವಿನ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಸಂಪತ್ತಿನ ಅಸಮಾನತೆಯು ಐತಿಹಾಸಿಕ ಮಟ್ಟದಲ್ಲಿವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬ್ರಿಟಿಷರ್ ವಶಾಹತು ಶಾಹಿ ಆಡಳಿತಕ್ಕಿಂತ ಹೆಚ್ಚು ಅಸಮಾನವಾಗಿದೆ ಎಂದು ಹೇಳಿದೆ.

2000 ವಿಷವಿಯ ಆರಂಭದಿಂದಲೂ ಭಾರತದಲ್ಲಿ ಸಂಪತ್ತಿನ ಅಸಮಾನತೆ ಗಗನಕ್ಕೇರಿದೆ, 2022-23ರಲ್ಲಿ ಅಗ್ರ 1 ಶೇಕಡಾ ಜನಸಂಖ್ಯೆಯ ಆದಾಯ ಮತ್ತು ಸಂಪತ್ತಿನ ಪಾಲು ಅನುಕ್ರಮವಾಗಿ ಶೇಕಡಾ 22.6 ಮತ್ತು ಶೇಕಡಾ 40.1ಕ್ಕೆ ಏರಿದೆ. 1980ರ ದಶಕದಿಂದ ಭಾರತದಲ್ಲಿ ಅಸಮಾನತೆಯು ತೀವ್ರವಾಗಿ ಹೆಚ್ಚುತ್ತಿದೆ ಮುಖ್ಯವಾಗಿ 2014-15 ಮತ್ತು 2022-23ರ ನಡುವೆ ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಅಸಮಾನತೆಯ ಹೆಚ್ಚಳವನ್ನು ಗಮನಿಸಿದೆ.

ಈ ಕುರಿತು ಪ್ರಬಂಧವನ್ನು ಥಾಮಸ್ ಪಿಕೆಟ್ಟಿ (ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್), ಲ್ಯೂಕಾಸ್ ಚಾನ್ಸೆಲ್ (ಹಾರ್ವರ್ಡ್ ಕೆನಡಿ ಸ್ಕೂಲ್ ಮತ್ತು ವರ್ಲ್ಡ್‌ ಇನ್ಈಕ್ವಾಲಿಟಿ ಲ್ಯಾಬ್) ಮತ್ತು ನಿತಿನ್ ಕುಮಾರ್ ಭಾರ್ತಿ (ನ್ಯೂಯಾರ್ಕ್ ವಿಶ್ವವಿದ್ಯಾಲಯ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್) ಸಿದ್ದಪಡಿಸಿದ್ದಾರೆ.

1980ರ ದಶಕದ ಆರಂಭದಲ್ಲಿ, ಭಾರತ ಸರ್ಕಾರವು 1991ರಲ್ಲಿ ಉದಾರೀಕರಣಕ್ಕೆ ಕಾರಣವಾದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದಾಗ, ಅಗ್ರ 1 ಶೇಕಡಾ ಆದಾಯದ ಷೇರುಗಳಲ್ಲಿನ ಕುಸಿತವು ಸ್ಥಗಿತಗೊಂಡಿತ್ತು. 1990ರ ದಶಕದ ಆರಂಭದಲ್ಲಿ, ಅಗ್ರ 1 ಶೇಕಡಾ ಆದಾಯದ ಷೇರುಗಳು ಮುಂದಿನ 30 ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚಿದ್ದು, 2022ರಲ್ಲಿ ಸಾರ್ವಕಾಲಿಕ ಗರಿಷ್ಠ 22.6 ಶೇಕಡಾವನ್ನು ತಲುಪಿದೆ. ಅಸಮಾನತೆಯು ಸ್ವಾತಂತ್ರ್ಯದ ನಂತರ 1980ರ ದಶಕದ ಆರಂಭದವರೆಗೆ ಕಡಿಮೆಯಾಯಿತು, ನಂತರ ಅದು ಏರಲು ಪ್ರಾರಂಭಿಸಿತು ಮತ್ತು 2000 ವಿಷವಿಯ ಆರಂಭದಿಂದ ಗಗನಕ್ಕೇರಿದೆ.

ಆದಾಯಗಳು ಮತ್ತು ಸಂಪತ್ತಿನ ಅತಿಯಾದ ಕೇಂದ್ರೀಕರಣವು ಸಮಾಜ ಮತ್ತು ಸರಕಾರದ ಮೇಲೆ ಅಸಮಾನ ಪ್ರಭಾವಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದ್ದು,ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿಯ ವಿವಿಧ ಪ್ರಮುಖ ಸಂಸ್ಥೆಗಳ ಋಜುತ್ವವು ರಾಜಿ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಇದು ಭಾರತವು ಶ್ರೀಮಂತ ಪ್ರಭುತ್ವದತ್ತ ಜಾರುವ ಸಾಧ್ಯತೆಯನ್ನು ಇನ್ನಷ್ಟು ಸ್ಪಷ್ಟಗೊಳಿಸಿದೆ ಎಂದು ಹೇಳಿದೆ. ಆದಾಯ ಮತ್ತು ಸಂಪತ್ತು ಎರಡನ್ನೂ  ಲೆಕ್ಕ ಹಾಕಲು ತೆರಿಗೆ ಸಂಹಿತೆಯ ಪುನರ್ರಚನೆ ಅಗತ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಪತ್ರಿಕೆಯ ಸಂಶೋಧನೆ ಪ್ರಬಂಧ ಪ್ರಕಟದ ಬೆನ್ನಲ್ಲಿ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರವನ್ನು ಟೀಕಿಸಿದ ಕಾಂಗ್ರೆಸ್, ಕೇಂದ್ರದ ತನ್ನ ಸರ್ಕಾರವು ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರಿಗೆ ಆದಾಯ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಅವಿರತವಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ಸುಳ್ಳು ಹೇಳಿದೆ ಎಂದು ಟೀಕಿಸಿದೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...