Homeಫ್ಯಾಕ್ಟ್‌ಚೆಕ್Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

- Advertisement -
- Advertisement -

ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಹಸಿರು ಧ್ವಜಗಳೊಂದಿಗೆ ಚುನಾವಣೆ ಪ್ರಚಾರ ನಡೆಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು, ‘ಪಾಕಿಸ್ತಾನದ ಧ್ವಜಗಳೊಂದಿಗೆ ಮುರಳೀಧರನ್ ಚುನಾವಣೆ ಪ್ರಚಾರ ನಡೆಸಿದ್ದಾರೆ’ ಎಂಬರ್ಥದಲ್ಲಿ ಸುದ್ದಿ ಹಬ್ಬಿದ್ದಾರೆ.

ಬಿಜೆಪಿ ತೆಲಂಗಾಣ ರಾಜ್ಯದ ಕೋಶಾಧಿಕಾರಿ ಶಾಂತಿ ಕುಮಾರ್ ಅವರು ವಿಡಿಯೋ ಹಂಚಿಕೊಂಡಿದ್ದು, “ಇಲ್ಲ! ಇದು ಪಾಕಿಸ್ತಾನವಲ್ಲ. ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಕೇರಳದ ತಮ್ಮ ತ್ರಿಶೂರ್ ಕ್ಷೇತ್ರದ ಒಂದು ಭಾಗದಲ್ಲಿ ಪ್ರಚಾರ ಮಾಡುತ್ತಿರುವುದು. ಇದರಲ್ಲಿ ಒಂದಾದರು ಭಾರತದ ರಾಷ್ಟ್ರ ಧ್ವಜ ತೋರಿಸಬಹುದೇ? ಇದು ‘ಭಾರತ್ ಜೋಡೋ’ ಸಿದ್ಧಾಂತವೇ? ರಾಹುಲ್ ಗಾಂಧಿಯವರೇ. ಅದು, ಕಾಂಗ್ರೆಸ್‌ನಲ್ಲಿ ಹರಿಯುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮತ್ತೊಬ್ಬ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ᏙᏦ (@_VK86) ಎಂಬವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇದೇ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇನ್ನೋರ್ವ ಬಲಪಂಥೀಯ ಎಕ್ಸ್ ಬಳಕೆದಾರ ‘@SharwanKumarBi7’ಎಂಬವರು ಕೂಡ ವಿಡಿಯೋ ಹಂಚಿಕೊಂಡು, ಈಗಾಗಲೇ ಇಬ್ಬರು ಹೇಳಿದಂತೆ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ. ಕಾಂ ಮೊದಲು ವಿಡಿಯೋದಲ್ಲಿ ಬರೆಯಲಾದ ಮಲಯಾಳಂ ವಾಕ್ಯದ ಅರ್ಥ ತಿಳಿಯುವ ಪ್ರಯತ್ನ ಮಾಡಿದೆ. https://newschecker.in/ಎಂಬ ವೆಬ್‌ಸೈಟ್‌ ಹೇಳಿರುವಂತೆ ವಿಡಿಯೋ ಮೇಲೆ ‘ಕೊಂಡೊಟ್ಟಿ ಪಚ್ಚಪಡ’ (ಕೊಂಡೊಟ್ಟಿ ಹಸಿರುಮಯ) ಎಂದು ಬರೆಯಲಾಗಿದೆ.

ಈ ಅಂಶವನ್ನು ಇಟ್ಟುಕೊಂಡು ನಾವು ಇನ್ನಷ್ಟು ಹುಡುಕಾಟ ನಡೆಸಿದಾಗ ‘ಕೊಂಡೊಟ್ಟಿ ಪಚ್ಚಪಡ’ ಎಂಬ ಫೇಸ್‌ಬುಕ್ ಪೇಜ್ ನಮಗೆ ಸಿಕ್ಕಿದೆ. ಆ ಪೇಜ್ ಪರಿಶೀಲಿಸಿ ನೋಡಿದಾಗ ಏಪ್ರಿಲ್ 19, 2019ರಂದು ವೈರಲ್ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಜೊತೆಗೆ ಮಲಯಾಳಂನಲ್ಲಿ ವಿವರಣೆ ಬರೆಯಲಾಗಿದೆ. ಅದರ ಅರ್ಥ ಹೀಗಿದೆ… “ಕೋಲರಾಜನ್ ಜೈಲಿಗೆ ಹೋಗಲಿದ್ದಾರೆ, ಮುರಳೀಧರನ್ ವಡಗರದಿಂದ ಸಂಸತ್ತಿಗೆ ಹೋಗಲಿದ್ದಾರೆ. ಕೆ ಮುರಳೀಧರನ್ ಅವರ ಪ್ರಚಾರ ಕಾರ್ಯದಲ್ಲಿ ಯೂತ್ ಲೀಗ್‌ನ ಮಕ್ಕಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ”. ಇಲ್ಲಿ ‘ಕೋಲರಾಜನ್’ ಎಂಬುವುದು ಚುನಾವಣೆಯಲ್ಲಿ ಮುರಳೀಧರನ್ ಅವರ ಎದುರಾಳಿಯಾಗಿದ್ದ ಪಿ ಜಯರಾಜನ್ ಅವರ ಹೆಸರನ್ನು ವ್ಯಂಗ್ಯವಾಗಿ ಬರೆದಿರುವುದಾಗಿದೆ.

ಇದೇ ರೀತಿಯ ಮತ್ತೊಂದು ಪೋಸ್ಟ್ ಅನ್ನು ಏಪ್ರಿಲ್ 19,2019 ರಂದು ಎಂ.ಕೆ ಸವಾದ್ ಎಂಬ ಫೇಸ್‌ಬುಕ್‌ ಖಾತೆಯಲ್ಲೂ ಹಂಚಿಕೊಂಡಿರುವುದು ಕಂಡು ಬಂದಿದೆ. ‘ಕೊಂಡೊಟ್ಟಿ ಪಚ್ಚಪಡ’ ಪೇಜ್‌ನಲ್ಲಿ ಬರೆದುಕೊಂಡಂತೆ ಇಲ್ಲೂ ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಅಂದ ಹಾಗೆ, ವೈರಲ್ ವಿಡಿಯೋ 2019 ರಲ್ಲಿ ಮುರಳೀಧರನ್ ಅವರು ವಡಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ನಡೆಸಿದ ಪ್ರಚಾರ ಜಾಥದ್ದಾಗಿದೆ. ಈ ಚುನಾವಣೆಯಲ್ಲಿ ಮುರಳೀಧರನ್ ಗೆಲುವು ದಾಖಲಿಸಿದ್ದರು.

ಮೇಲೆ ನಾವು ಉಲ್ಲೇಖಿಸಿದ ಮಾಹಿತಿಗಳ ಪ್ರಕಾರ, ಈಗ ವೈರಲ್ ಆಗುತ್ತಿರುವ ವಿಡಿಯೋ 2019ರದ್ದು ಎಂಬುವುದು ಖಚಿತವಾಗಿದೆ.

ಪಾಕಿಸ್ತಾನದ ಧ್ವಜ ಬಳಸಿದ್ದು ನಿಜಾನ?:

ವೈರಲ್ ವಿಡಿಯೋದಲ್ಲಿರುವ ಹಸರು ಬಣ್ಣದ ಧ್ವಜವನ್ನು ಬಲಪಂಥೀಯರು ಪಾಕಿಸ್ತಾನದ ಧ್ವಜ ಎಂಬಂತೆ ಬಿಂಬಿಸಿದ್ದಾರೆ. ಆದರೆ, ಅದು ಪಾಕಿಸ್ತಾನದ ಧ್ವಜವಲ್ಲ. ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ್ದಾಗಿದೆ. ಈ ಧ್ವಜವು ಭಾರತೀಯ ಚುನಾವಣಾ ಆಯೋಗ ಅಂಗೀಕರಿಸಲ್ಪಟ್ಟ ಧ್ವಜವಾಗಿದೆ.

ಈ ಸುದ್ದಿಯಲ್ಲಿ ನಾವು ಉಲ್ಲೇಖಿಸಿದ್ದು ಮಾತ್ರವಲ್ಲದೆ, ಅನೇಕ ಬಾರಿ ಹಸಿರು ಧ್ವಜ ಹಿಡಿದರೆ ಅದು ಪಾಕಿಸ್ತಾನದ್ದು ಎಂದು ಬಿಂಬಿಸುವ ಪರಿಪಾಠವಿದೆ. ಮುಸ್ಲಿಂ ಲೀಗ್ ಪಕ್ಷದ ಧ್ವಜ, ಮುಸಲ್ಮಾನರು ವಿಶೇಷ ಕಾರ್ಯಕ್ರಮಗಳಲ್ಲಿ ಬಳಸುವ ಧಾರ್ಮಿಕ ಧ್ವಜ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಧ್ವಜಕ್ಕೆ ವ್ಯತ್ಯಾಸವಿದೆ.

ಎರಡೂ ಧ್ವಜಗಳ ಫೋಟೋಗಳ ಕೆಳಗಡೆ ಕೊಡಲಾಗಿದೆ. ವ್ಯತ್ಯಾಸ ಗಮನಿಸಬಹುದು.
ಕೊನೆಯದಾಗಿ, ಬಲಪಂಥೀಯರು ಪಾಕಿಸ್ತಾನದಂತೆ ಬಿಂಬಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಅವರ ಚುನಾವಣಾ ಪ್ರಚಾರದಲ್ಲಿ ಕಂಡು ಬಂದಿರುವ ಧ್ವಜ ಪಾಕಿಸ್ತಾನದ್ದಲ್ಲ. ಅದು ಮುಸ್ಲಿಂ ಲೀಗ್‌ ಪಕ್ಷದ ಧ್ವಜ. ಕೇರಳದಲ್ಲಿ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಯುಡಿಎಫ್ ಮೈತ್ರಿಕೂಟದ ಪಕ್ಷಗಳಾಗಿವೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಪರ ಪ್ರಚಾರಕ್ಕೆ ಮುಸ್ಲಿಂ ಲೀಗ್‌ನ ಕಾರ್ಯಕರ್ತರು ತಮ್ಮ ಧ್ವಜದೊಂದಿಗೆ ಬೆಂಬಲ ವ್ಯಕ್ತಪಡಿಸಿರುವುದಾಗಿದೆ ವಿಡಿಯೋದಲ್ಲಿರುವುದು. ಅಲ್ಲದೆ, ಅದು ಹಳೆಯ ವಿಡಿಯೋ ಕೂಡ ಹೌದು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...