Homeಮುಖಪುಟ'ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..'; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

‘ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..’; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

- Advertisement -
- Advertisement -

‘ಜನತಾದಳದ ವರಿಷ್ಠರಾದ ಹೆಚ್.​ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.​ಡಿ. ಕುಮಾರಸ್ವಾಮಿ ಅವರು ನಮ್ಮ ನಡುವಿನ ಕೆಲವು ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲಿಲ್ಲ; ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣೆಸುತ್ತಿದ್ದಾರೆ’ ಎಂದು ಜೆಡಿಎಸ್ ಹಿರಿಯ ಮುಖಂಡ ಮರಿತಿಬ್ಬೇಗೌಡ ಆರೋಪ ಮಾಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿ ನಿವಾಸದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ  ನೀಡಿದ ಅವರು, ಜೆಡಿಎಸ್ ವರಿಷ್ಠರಾದ ದೇವೇಗೌಡ ಮತ್ತು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಜೆಡಿಎಸ್ ತೊರೆಯುವ ಸೂಚನೆಯನ್ನೂ ನೀಡಿದ್ದಾರೆ.

ರಾಜೀನಾಮೆ ಅಂಗೀಕಾರವಾದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಬವಾರದು ಎಂದು ಆಗಾಗ ನಮ್ಮ ಪಕ್ಷದ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೆ, ನಮ್ಮ ಸಲಹೆಗಳು ವರಿಷ್ಠರಿಗೆ ಹಿಡಿಸಲಿಲ್ಲ. ದಕ್ಷಿಣ ಪಧವೀಧರ ಕ್ಷೇತ್ರದ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ಕೇಳಿದ್ದೆವು. ಆ ಸಂದರ್ಭದಲ್ಲಿ ಅವರು ರಾಜಕಾರಣದಲ್ಲೇ ಇಲ್ಲದ ವ್ಯಕ್ತಿಗೆ ಟಿಕೆಟ್ ಕೊಟ್ಟರು. ಪಕ್ಷದ ಕಾರ್ಯಕರ್ತರಿಗೆ ಕೊಟ್ಟರೆ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದ್ದೆವು. ಆದರೆ, ಅವರು ಟಿಕೆಟ್ ಕೊಡಲಿಲ್ಲ’ ಎಂದು ಬೇಸರ ಹೊರಹಾಕಿದರು.

‘ವಯಕ್ತಿಕ ಕಾರಣದಿಂದ ನಾನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನಾನು ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದ್ದೇನೆ. ಈ ಅವಧಿಯಲ್ಲಿ ಮೂರು ವರ್ಷಗಳ ಕಾಲ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು 1985ರಿಂದ ಜನತಾ ದಳದ ಮೂಲಕ; ಕೆಲವು ಸಲ ನನಗೆ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ಪಕ್ಷದಿಂದ ಸಿಗಲಿಲ್ಲ’ ಎಂದರು.

‘2000ನೇ ಇಸವಿಯಲ್ಲಿ ನಾನು ​ನಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದೆ. ಎರಡನೇ ಬಾರಿ ಪಕ್ಷೇತರವಾಗಿ ಗೆದ್ದು ಬಂದಿದ್ದೆ; ಮೂರು ನಾಲ್ಕನೇ ಬಾರಿ ನಾನು ಜನತಾದಳದಿಂದ ಗೆದ್ದು ಬಂದಿದ್ದೇನೆ. ಪಕ್ಷದ ನಿಷ್ಠಾವಂತ ಸದಸ್ಯನಾಗಿ ಕೆಲಸ ಮಾಡಿದ್ದೇನೆ’ ಎಂದರು.

‘ನಾನು ನನಗೆ ಮತ ನೀಡಿದ ಶಿಕ್ಷಕ ಬಂಧುಗಳ ಜೊತೆ ಸಮಾಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ಎಲ್ಲರೂ ಪಕ್ಷ ಬಿಡಿ ಎಂದು ಅಭಿಪ್ರಾಯ ಸೂಚಿಸಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಡೆ ತಿಳಿಸಲಾಗುವುದು’ ಎಂದು ಹೇಳುವ ಮೂಲಕ ಅವರು ಜೆಡಿಎಸ್ ತೊರೆಯುವ ಸುಳಿವು ನೀಡಿದ್ದಾರೆ.

ಜೆಡಿಎಸ್ ನಾಯಕರು ಮೊಸಳೆ ಸವಾರಿ ಮಾಡುತ್ತಿದ್ದಾರೆ:

ಸಭಾಪತಿ ಬಸವರಾಜ ಹೊರಟ್ಟಿಯವರ ಬಗ್ಗೆ ಮಾತನಾಡಿ, ‘ಹೊರಟ್ಟಿ ನನ್ನ ರಾಜಕೀಯ ಗುರುಗುಳು; ಇವತ್ತು ನಾನು ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದೇನೆ. ನಮ್ಮ ಪಕ್ಷದ ನಾಯಕರು ಮೊಸಳೆ ಮೇಲೆ ಸವಾರಿ ಮಾಡುತ್ತಿದ್ದಾರೆ. ಮೊಸಳೆ ಅಂದರೆ ಬಿಜೆಪಿ; ಮೊಸಳೆ ಸವಾರಿ ಅವರಿಗೆ ಒಳ್ಳೆದಲ್ಲ’ ಎಂದು ಹೇಳುವ ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಅಂಗೀಕಾರವಾಗಿದೆ: ಹೊರಟ್ಟಿ

ಮಾಧ್ಯಮಗಳ ಮುಂದೆಯೇ ರಾಜೀನಾಮೆ ಪತ್ರ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ನಿಮ್ಮ ರಾಜೀನಾಮೆ ಅಂಗೀಕಾರವಾಗಿದೆ’ ಎಂದು ಹೇಳಿದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿದ ಗೌಡರು, ರಾಜೀನಾಮೆ ಪತ್ರ ಸಲ್ಲಿಸಿದರು. ‘ಮರಿತಿಬ್ಬೇಗೌಡ ಸ್ವಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನು ಮುಂದೆ ಅವರು ಪರಿಷತ್ತಿನ ಸದಸ್ಯರಲ್ಲ; ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ’ ಎಂದು ಮಾಧ್ಯಮಗಳಿಗೆ ಬಸವರಾಜ ಹೊರಟ್ಟಿಯವರು ಮಾಹಿತಿ ನೀಡಿದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...