Homeಮುಖಪುಟ'ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..'; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

‘ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..’; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

- Advertisement -
- Advertisement -

‘ಜನತಾದಳದ ವರಿಷ್ಠರಾದ ಹೆಚ್.​ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.​ಡಿ. ಕುಮಾರಸ್ವಾಮಿ ಅವರು ನಮ್ಮ ನಡುವಿನ ಕೆಲವು ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲಿಲ್ಲ; ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣೆಸುತ್ತಿದ್ದಾರೆ’ ಎಂದು ಜೆಡಿಎಸ್ ಹಿರಿಯ ಮುಖಂಡ ಮರಿತಿಬ್ಬೇಗೌಡ ಆರೋಪ ಮಾಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿ ನಿವಾಸದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ  ನೀಡಿದ ಅವರು, ಜೆಡಿಎಸ್ ವರಿಷ್ಠರಾದ ದೇವೇಗೌಡ ಮತ್ತು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಜೆಡಿಎಸ್ ತೊರೆಯುವ ಸೂಚನೆಯನ್ನೂ ನೀಡಿದ್ದಾರೆ.

ರಾಜೀನಾಮೆ ಅಂಗೀಕಾರವಾದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಬವಾರದು ಎಂದು ಆಗಾಗ ನಮ್ಮ ಪಕ್ಷದ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೆ, ನಮ್ಮ ಸಲಹೆಗಳು ವರಿಷ್ಠರಿಗೆ ಹಿಡಿಸಲಿಲ್ಲ. ದಕ್ಷಿಣ ಪಧವೀಧರ ಕ್ಷೇತ್ರದ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ಕೇಳಿದ್ದೆವು. ಆ ಸಂದರ್ಭದಲ್ಲಿ ಅವರು ರಾಜಕಾರಣದಲ್ಲೇ ಇಲ್ಲದ ವ್ಯಕ್ತಿಗೆ ಟಿಕೆಟ್ ಕೊಟ್ಟರು. ಪಕ್ಷದ ಕಾರ್ಯಕರ್ತರಿಗೆ ಕೊಟ್ಟರೆ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದ್ದೆವು. ಆದರೆ, ಅವರು ಟಿಕೆಟ್ ಕೊಡಲಿಲ್ಲ’ ಎಂದು ಬೇಸರ ಹೊರಹಾಕಿದರು.

‘ವಯಕ್ತಿಕ ಕಾರಣದಿಂದ ನಾನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನಾನು ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದ್ದೇನೆ. ಈ ಅವಧಿಯಲ್ಲಿ ಮೂರು ವರ್ಷಗಳ ಕಾಲ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು 1985ರಿಂದ ಜನತಾ ದಳದ ಮೂಲಕ; ಕೆಲವು ಸಲ ನನಗೆ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ಪಕ್ಷದಿಂದ ಸಿಗಲಿಲ್ಲ’ ಎಂದರು.

‘2000ನೇ ಇಸವಿಯಲ್ಲಿ ನಾನು ​ನಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದೆ. ಎರಡನೇ ಬಾರಿ ಪಕ್ಷೇತರವಾಗಿ ಗೆದ್ದು ಬಂದಿದ್ದೆ; ಮೂರು ನಾಲ್ಕನೇ ಬಾರಿ ನಾನು ಜನತಾದಳದಿಂದ ಗೆದ್ದು ಬಂದಿದ್ದೇನೆ. ಪಕ್ಷದ ನಿಷ್ಠಾವಂತ ಸದಸ್ಯನಾಗಿ ಕೆಲಸ ಮಾಡಿದ್ದೇನೆ’ ಎಂದರು.

‘ನಾನು ನನಗೆ ಮತ ನೀಡಿದ ಶಿಕ್ಷಕ ಬಂಧುಗಳ ಜೊತೆ ಸಮಾಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ಎಲ್ಲರೂ ಪಕ್ಷ ಬಿಡಿ ಎಂದು ಅಭಿಪ್ರಾಯ ಸೂಚಿಸಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಡೆ ತಿಳಿಸಲಾಗುವುದು’ ಎಂದು ಹೇಳುವ ಮೂಲಕ ಅವರು ಜೆಡಿಎಸ್ ತೊರೆಯುವ ಸುಳಿವು ನೀಡಿದ್ದಾರೆ.

ಜೆಡಿಎಸ್ ನಾಯಕರು ಮೊಸಳೆ ಸವಾರಿ ಮಾಡುತ್ತಿದ್ದಾರೆ:

ಸಭಾಪತಿ ಬಸವರಾಜ ಹೊರಟ್ಟಿಯವರ ಬಗ್ಗೆ ಮಾತನಾಡಿ, ‘ಹೊರಟ್ಟಿ ನನ್ನ ರಾಜಕೀಯ ಗುರುಗುಳು; ಇವತ್ತು ನಾನು ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದೇನೆ. ನಮ್ಮ ಪಕ್ಷದ ನಾಯಕರು ಮೊಸಳೆ ಮೇಲೆ ಸವಾರಿ ಮಾಡುತ್ತಿದ್ದಾರೆ. ಮೊಸಳೆ ಅಂದರೆ ಬಿಜೆಪಿ; ಮೊಸಳೆ ಸವಾರಿ ಅವರಿಗೆ ಒಳ್ಳೆದಲ್ಲ’ ಎಂದು ಹೇಳುವ ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಅಂಗೀಕಾರವಾಗಿದೆ: ಹೊರಟ್ಟಿ

ಮಾಧ್ಯಮಗಳ ಮುಂದೆಯೇ ರಾಜೀನಾಮೆ ಪತ್ರ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ನಿಮ್ಮ ರಾಜೀನಾಮೆ ಅಂಗೀಕಾರವಾಗಿದೆ’ ಎಂದು ಹೇಳಿದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿದ ಗೌಡರು, ರಾಜೀನಾಮೆ ಪತ್ರ ಸಲ್ಲಿಸಿದರು. ‘ಮರಿತಿಬ್ಬೇಗೌಡ ಸ್ವಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನು ಮುಂದೆ ಅವರು ಪರಿಷತ್ತಿನ ಸದಸ್ಯರಲ್ಲ; ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ’ ಎಂದು ಮಾಧ್ಯಮಗಳಿಗೆ ಬಸವರಾಜ ಹೊರಟ್ಟಿಯವರು ಮಾಹಿತಿ ನೀಡಿದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...