Homeಮುಖಪುಟ'ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..'; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

‘ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..’; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

- Advertisement -
- Advertisement -

‘ಜನತಾದಳದ ವರಿಷ್ಠರಾದ ಹೆಚ್.​ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.​ಡಿ. ಕುಮಾರಸ್ವಾಮಿ ಅವರು ನಮ್ಮ ನಡುವಿನ ಕೆಲವು ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲಿಲ್ಲ; ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣೆಸುತ್ತಿದ್ದಾರೆ’ ಎಂದು ಜೆಡಿಎಸ್ ಹಿರಿಯ ಮುಖಂಡ ಮರಿತಿಬ್ಬೇಗೌಡ ಆರೋಪ ಮಾಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿ ನಿವಾಸದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ  ನೀಡಿದ ಅವರು, ಜೆಡಿಎಸ್ ವರಿಷ್ಠರಾದ ದೇವೇಗೌಡ ಮತ್ತು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಜೆಡಿಎಸ್ ತೊರೆಯುವ ಸೂಚನೆಯನ್ನೂ ನೀಡಿದ್ದಾರೆ.

ರಾಜೀನಾಮೆ ಅಂಗೀಕಾರವಾದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಬವಾರದು ಎಂದು ಆಗಾಗ ನಮ್ಮ ಪಕ್ಷದ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೆ, ನಮ್ಮ ಸಲಹೆಗಳು ವರಿಷ್ಠರಿಗೆ ಹಿಡಿಸಲಿಲ್ಲ. ದಕ್ಷಿಣ ಪಧವೀಧರ ಕ್ಷೇತ್ರದ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ಕೇಳಿದ್ದೆವು. ಆ ಸಂದರ್ಭದಲ್ಲಿ ಅವರು ರಾಜಕಾರಣದಲ್ಲೇ ಇಲ್ಲದ ವ್ಯಕ್ತಿಗೆ ಟಿಕೆಟ್ ಕೊಟ್ಟರು. ಪಕ್ಷದ ಕಾರ್ಯಕರ್ತರಿಗೆ ಕೊಟ್ಟರೆ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದ್ದೆವು. ಆದರೆ, ಅವರು ಟಿಕೆಟ್ ಕೊಡಲಿಲ್ಲ’ ಎಂದು ಬೇಸರ ಹೊರಹಾಕಿದರು.

‘ವಯಕ್ತಿಕ ಕಾರಣದಿಂದ ನಾನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನಾನು ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದ್ದೇನೆ. ಈ ಅವಧಿಯಲ್ಲಿ ಮೂರು ವರ್ಷಗಳ ಕಾಲ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು 1985ರಿಂದ ಜನತಾ ದಳದ ಮೂಲಕ; ಕೆಲವು ಸಲ ನನಗೆ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ಪಕ್ಷದಿಂದ ಸಿಗಲಿಲ್ಲ’ ಎಂದರು.

‘2000ನೇ ಇಸವಿಯಲ್ಲಿ ನಾನು ​ನಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದೆ. ಎರಡನೇ ಬಾರಿ ಪಕ್ಷೇತರವಾಗಿ ಗೆದ್ದು ಬಂದಿದ್ದೆ; ಮೂರು ನಾಲ್ಕನೇ ಬಾರಿ ನಾನು ಜನತಾದಳದಿಂದ ಗೆದ್ದು ಬಂದಿದ್ದೇನೆ. ಪಕ್ಷದ ನಿಷ್ಠಾವಂತ ಸದಸ್ಯನಾಗಿ ಕೆಲಸ ಮಾಡಿದ್ದೇನೆ’ ಎಂದರು.

‘ನಾನು ನನಗೆ ಮತ ನೀಡಿದ ಶಿಕ್ಷಕ ಬಂಧುಗಳ ಜೊತೆ ಸಮಾಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ಎಲ್ಲರೂ ಪಕ್ಷ ಬಿಡಿ ಎಂದು ಅಭಿಪ್ರಾಯ ಸೂಚಿಸಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಡೆ ತಿಳಿಸಲಾಗುವುದು’ ಎಂದು ಹೇಳುವ ಮೂಲಕ ಅವರು ಜೆಡಿಎಸ್ ತೊರೆಯುವ ಸುಳಿವು ನೀಡಿದ್ದಾರೆ.

ಜೆಡಿಎಸ್ ನಾಯಕರು ಮೊಸಳೆ ಸವಾರಿ ಮಾಡುತ್ತಿದ್ದಾರೆ:

ಸಭಾಪತಿ ಬಸವರಾಜ ಹೊರಟ್ಟಿಯವರ ಬಗ್ಗೆ ಮಾತನಾಡಿ, ‘ಹೊರಟ್ಟಿ ನನ್ನ ರಾಜಕೀಯ ಗುರುಗುಳು; ಇವತ್ತು ನಾನು ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದೇನೆ. ನಮ್ಮ ಪಕ್ಷದ ನಾಯಕರು ಮೊಸಳೆ ಮೇಲೆ ಸವಾರಿ ಮಾಡುತ್ತಿದ್ದಾರೆ. ಮೊಸಳೆ ಅಂದರೆ ಬಿಜೆಪಿ; ಮೊಸಳೆ ಸವಾರಿ ಅವರಿಗೆ ಒಳ್ಳೆದಲ್ಲ’ ಎಂದು ಹೇಳುವ ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಅಂಗೀಕಾರವಾಗಿದೆ: ಹೊರಟ್ಟಿ

ಮಾಧ್ಯಮಗಳ ಮುಂದೆಯೇ ರಾಜೀನಾಮೆ ಪತ್ರ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ನಿಮ್ಮ ರಾಜೀನಾಮೆ ಅಂಗೀಕಾರವಾಗಿದೆ’ ಎಂದು ಹೇಳಿದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿದ ಗೌಡರು, ರಾಜೀನಾಮೆ ಪತ್ರ ಸಲ್ಲಿಸಿದರು. ‘ಮರಿತಿಬ್ಬೇಗೌಡ ಸ್ವಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನು ಮುಂದೆ ಅವರು ಪರಿಷತ್ತಿನ ಸದಸ್ಯರಲ್ಲ; ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ’ ಎಂದು ಮಾಧ್ಯಮಗಳಿಗೆ ಬಸವರಾಜ ಹೊರಟ್ಟಿಯವರು ಮಾಹಿತಿ ನೀಡಿದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...