Homeಮುಖಪುಟಗುಂಪು ಹಲ್ಲೆ ಎಂಬುದು ವಿದೇಶದಿಂದ ಎರವಲು ಬಂದಿದೆ: ಮೋಹನ್ ಭಾಗವತ್ ಹೇಳಿಕೆ

ಗುಂಪು ಹಲ್ಲೆ ಎಂಬುದು ವಿದೇಶದಿಂದ ಎರವಲು ಬಂದಿದೆ: ಮೋಹನ್ ಭಾಗವತ್ ಹೇಳಿಕೆ

- Advertisement -
- Advertisement -

ವಿಚಾರ ಹಾಗೂ ಅಭಿಪ್ರಾಯದ ವ್ಯತ್ಯಾಸ, ವೈರುಧ್ಯಗಳು ಏನೇ ಇರಲಿ, ಎಷ್ಟೇ ಪ್ರಚೋದನಕಾರಿ ಅಂಶಗಳು ನಡೆದಿರಲಿ, ಅವೆಲ್ಲವೂ ಸಂವಿಧಾನದ ಮಿತಿಯಲ್ಲಿ ಸಮಾಜ ವರ್ತಿಸಬೇಕು ಎಂದು ಆರ್‌ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.

ನಾಗ್ಪುರದಲ್ಲಿ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ಸಾಮೂಹಿಕ ಹಲ್ಲೆ ಎಂಬುದು ವಿದೇಶಿಗರು ಕಟ್ಟಿದ ಕಟ್ಟಡ. ಇದು ಇಡೀ ದೇಶವನ್ನು ಹಾಳು ಮಾಡದಿರಲಿ. ಎಲ್ಲಿಯೇ ಪ್ರಚೋದನಕಾರಿ ಕೃತ್ಯಗಳು ನಡೆಯಲಿ, ಎಷ್ಟೇ ವೈಚಾರಿಕ ವ್ಯತ್ಯಾಸಗಳಿರಲಿ ಅದೆಲ್ಲವೂ ಸಂವಿಧಾನದ ಮಿತಿಯಲ್ಲಿರಬೇಕು. ಸಮಾಜ ಕೂಡ ಹೀಗೆ ವರ್ತಿಸಬೇಕು. ಇದು ಕೇವಲ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಕೆಲಸವಲ್ಲ. ಕೆಲವೊಮ್ಮೆ ಇದಕ್ಕೆ ವ್ಯತಿರಿಕ್ತವಾಗಿಯೂ ದಾಳಿ, ಹಲ್ಲೆ ನಡೆಯುತ್ತವೆ. ಕೆಲ ಸಂದರ್ಭದಲ್ಲಿ ನಡೆದ ಘಟನೆಗಳನ್ನು ತಿರುಚಲಾಗಿದೆ. ನಿರ್ದಿಷ್ಟ ಸಮುದಾಯಗಳು, ಕೆಲ ಸಮುದಾಯವನ್ನು ಕೇಂದ್ರೀಕರಿಸಿ, ಪರಸ್ಪರರ ಮಧ್ಯೆ ಬೆಂಕಿ ಹಚ್ಚುತ್ತಿವೆ ಎಂದು ಸಾಮೂಹಿಕ ಹಲ್ಲೆ, ಗುಂಪು ದಾಳಿಗೆ ಬೇರೆಯದೆ ಬಣ್ಣ ಹಚ್ಚಿದ್ದಾರೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಷಯಗಳನ್ನಿಟ್ಟುಕೊಂಡು ಬ್ರ್ಯಾಂಡಿಂಗ್ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇದರಿಂದ ದೇಶ ಹಾಳಾಗಲಿದೆ. ಹಿಂದೂ ಸಮಾಜ ಮತ್ತು ಇತರೆ ಸಮುದಾಯಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಸಾಮೂಹಿಕ ಹಲ್ಲೆ ಎಂಬುದು ಭಾರತದ್ದಲ್ಲ. ಇದು ಏಲಿಯನ್‍ನಂತೆ ಕಲ್ಪನಾತೀತ. ಲಿಂಚಿಂಗ್‌ ಎಂಬುದು ಭಾರತೀಯ ಪದವಲ್ಲ. ಇದು ಕಥೆಯೊಂದರಲ್ಲಿ ಧರ್ಮವನ್ನು ಬೇರ್ಪಡಿಸಲು ಇರುವ ಪದ. ಭಾರತದಲ್ಲಿ ಇಂತಹವುಗಳನ್ನು ಬಿತ್ತಬೇಡಿ ಎಂದು ಹೇಳಿದರು.

ಇನ್ನು ಸಾಮೂಹಿಕ ಹಲ್ಲೆ ಪ್ರಕರಣದಲ್ಲಿ 49 ಸೆಲೆಬ್ರಿಟಿಗಳ ವಿರುದ್ಧ ದಾಖಲಿಸಿರುವ ಎಫ್‍ಐಆರ್ ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಇದೇ ವಿಚಾರವಾಗಿ ಮೋಹನ್ ಭಾಗವತ್ ಮಾತನಾಡಿದ್ದಾರೆ. ದೇಶದಲ್ಲಿ ನಡೆದಿರುವ ಸಾಮೂಹಿಕ ಹಲ್ಲೆ ಬಗ್ಗೆ ಇದೊಂದು ಭಾರತೀಯ ಪದವಲ್ಲ ಎಂದಿದ್ದಾರೆ.

ಇನ್ನು ಜಾರ್ಖಂಡ್‍ನಲ್ಲಿ ಜೈಶ್ರೀರಾಮ್ ಘೋಷಣೆ ಕೂಗದ್ದಕ್ಕೆ 24 ವರ್ಷದ ತಬ್ರೇಜ್ ಅನ್ಸಾರಿ ಎಂಬ ಯುವಕನನ್ನು ಗುಂಪೊಂದು ಥಳಿಸಿತ್ತು. ಇದೇ ವಿಷಯ ದೇಶದಾದ್ಯಂತ ಭಾರಿ ಸದ್ದು ಮಾಡಿತ್ತು. ಇನ್ನು ಅನೇಕ ರೀತಿಯ ಗುಂಪು ಘರ್ಷಣೆ ಹಾಗೂ ಸಾಮೂಹಿಕ ಹಲ್ಲೆ ಪ್ರಕರಣಗಳು ದಾಖಲಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪುರಾಣವನ್ನು ಇತಿಹಾಸವನ್ನಾಗಿ ಬಿಂಬಿಸಲು ಯತ್ನಿಸುತ್ತಿರುವ ಮನುವಾದಿಗಳು ಈಗ ದೇಶದಲ್ಲಿ ನಡೆದಿರುವ ನೈಜ ದುರ್ಘಟನೆಗಳನ್ನು ಕಪೋಲಕಲ್ಪಿತ ಪುರಾಣ ಕತೆಗಳನ್ನಾಗಿಸಲು ಶ್ರಮಿಸುತ್ತಿದ್ದಾರೆ. ವಾಹ್, ಇವರ ಪ್ರತಿಭೆಯನ್ನು ನಿಜಕ್ಕೂ ಮೆಚ್ಚಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...