Homeಮುಖಪುಟಇಡಿ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದ ನ್ಯಾಯಾಲಯ; ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ

ಇಡಿ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದ ನ್ಯಾಯಾಲಯ; ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಲವಂತದ ಕ್ರಮದಿಂದ ಯಾವುದೇ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದೆ.

“ನಾವು ಎರಡೂ ಕಡೆಯ ವಾದ ಆಲಿಸಿದ್ದೇವೆ; ಈ ಹಂತದಲ್ಲಿ ರಕ್ಷಣೆ ನೀಡಲು ನಾವು ಒಲವು ತೋರುತ್ತಿಲ್ಲ. ಪ್ರತಿವಾದಿಯು ಉತ್ತರವನ್ನು ಸಲ್ಲಿಸಲು ಸ್ವತಂತ್ರರು” ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠ ಹೇಳಿದೆ.

ಏಪ್ರಿಲ್ 22 ರಂದು ಸಮನ್ಸ್ ಅನ್ನು ಪ್ರಶ್ನಿಸಿ ಅವರ ಮುಖ್ಯ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಿದಾಗ ಹೆಚ್ಚಿನ ಪರಿಗಣನೆಗೆ ರಕ್ಷಣೆ ಕೋರಿ ಮುಖ್ಯಮಂತ್ರಿ ಮಾಡಿದ ಅರ್ಜಿಯನ್ನು ನ್ಯಾಯಾಲಯ ಪಟ್ಟಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ಅವರು ಇಂದು ಮುಂಜಾನೆ ಹೊಸ ಮನವಿಯನ್ನು ಸಲ್ಲಿಸಿದರು, ಅವರು ಅನೇಕ ಸಮನ್ಸ್‌ಗಳನ್ನು ಸ್ವೀಖರಿಸದ ಕಾರಣಕ್ಕೆ ಯಾವುದೇ ಬಂಧನವನ್ನು ಮಾಡಲಾಗುವುದಿಲ್ಲ ಎಂದು ಜಾರಿ ನಿರ್ದೇಶನಾಲಯದಿಂದ ಭರವಸೆ ನೀಡಬೇಕೆಂದು ಒತ್ತಾಯಿಸಿದರು.

“ನಾನು ಸಮನ್ಸ್ ಅನ್ನು ಅನುಸರಿಸಿದರೆ, ನನ್ನ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ ಎಂದು ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಮುಂದೆ ಭರವಸೆ ನೀಡಬೇಕು” ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇಡಿ ನೀಡಿದ ಒಂಬತ್ತನೇ ಸಮನ್ಸ್‌ನ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ದೆಹಲಿ ಮುಖ್ಯಮಂತ್ರಿ ಪದೇ ಪದೇ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ್ದಾರೆ, ಸಮನ್ಸ್ ಕಾನೂನುಬಾಹಿರ ಎಂದು ಕರೆದಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಜಾರಿ ನಿರ್ದೇಶನಾಲಯವು ರೋಸ್ ಅವೆನ್ಯೂ ಕೋರ್ಟ್‌ಗೆ ಎರಡು ದೂರುಗಳನ್ನು ಸಲ್ಲಿಸಿದ್ದು, ಕೇಜ್ರಿವಾಲ್ ಅವರಿಗೆ ನೀಡಲಾದ ಅನೇಕ ಸಮನ್ಸ್‌ಗಳನ್ನು ತಿರಸ್ಕರಿಸಿದ್ದಕ್ಕಾಗು ಅವರ ಪ್ರಾಸಿಕ್ಯೂಷನ್ ಅನ್ನು ಕೋರಿತ್ತು.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಾಗ ಮತ್ತು ಕಾರ್ಯಗತಗೊಳಿಸುವಾಗ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ವಿವಾದದ ನಂತರ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ; ಪೊನ್ಮುಡಿ ಸಂಪುಟ ಮರು ಸೇರ್ಪಡೆಗೆ ನಿರಾಕರಣೆ; ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...