Homeಮುಖಪುಟಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

ಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಮಾತು ಮರೆತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಜನಾಕ್ರೋಶ ಭುಗಿಲೆದ್ದಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಅಲ್ಲಿನ ಪರಿಸರವನ್ನು ಗಣಿ, ಕೈಗಾರಿಕೆ ಮಾಫಿಯಾಗಳಿಂದ ಕಾಪಾಡಬೇಕು, ಆರನೇ ಪರಿಚ್ಛೇದದ ಮಾನ್ಯತೆ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಡಿ ನಾಡಿನ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಮಾರ್ಚ್ 24 ರಂದು ಪರಿಸರ ಕಾರ್ಯಕರ್ತ ಮತ್ತು ರಾಮನ್ ಮ್ಯಾಗ್ಸಾಸೆ ಪ್ರಶಸ್ತಿ ವಿಜೇತ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ.

ಚೀನಾ ಜೊತೆಗಿನ ಗಡಿ ಸಂಘರ್ಷ ಶಮನಕ್ಕೆ ಸಂಬಂಧಪಟ್ಟಂತೆ ಕಳೆದ ಒಂದು ವರ್ಷದಿಂದ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಆರಂಭದಲ್ಲಿ ಮೂರನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಆ ನಂತರ ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಆಯಕಟ್ಟಿನ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಕೇಂದ್ರ ಗೃಹ ಸಚಿವಾಲಯವು 2019 ರಲ್ಲಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ಬಳಿಕ ಲಡಾಖ್‌ಗೆ ಸಾಂವಿಧಾನಿಕ ಸುರಕ್ಷತೆಗಳನ್ನು ನೀಡಬೇಕು ಎಂಬ ಅಲ್ಲಿನ ಜನರ ಬೇಡಿಕೆಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದೆ.

‘ದಿ ವೈರ್‌’ನೊಂದಿಗೆ ಮಾತನಾಡಿರುವ ಲಡಾಖ್‌ನಿಂದ 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೆಡಿಎ ಸದಸ್ಯ ಸಜ್ಜದ್ ಹುಸೇನ್, ಲಡಾಖ್‌ಗೆ ಸಂವಿಧಾನ 6ನೇ ಶೆಡ್ಯೂಲ್‌ ಸ್ಥಾನಮಾನ ನೀಡುವುದು ಮತ್ತು ರಾಜ್ಯದ ಸ್ಥಾನಮಾನ ನೀಡುವ ನಮ್ಮ ಬೇಡಿಕೆಗಳನ್ನು ಈಡೇರಿಸುವ ಕೇಂದ್ರದೊಂದಿಗಿನ ಮಾತುಕತೆಗಳು ವಿಫಲವಾದ ಕಾರಣ ಮಾರ್ಚ್ 24 ರಿಂದ ಮಾರ್ಚ್ 27 ರವರೆಗೆ ನಾವು ವಾಂಗ್‌ಚುಕ್‌ ಅವರ ಉಪವಾಸ ಸತ್ಯಾಗ್ರಹದ ಜೊತೆ ಸೇರಿಕೊಳ್ಳುತ್ತೇವೆ ಎಂದಿದ್ದಾರೆ.

“ರಾಜ್ಯದ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್ ಲಡಾಖಿಗಳ ಹೃದಯಕ್ಕೆ ಸಾಮಿಪ್ಯ ಇರುವ ವಿಷಯಗಳು. ಇದು ಕೇವಲ ನಮ್ಮ ಬೇಡಿಕೆಯಲ್ಲ. ಇದು ಲಡಾಖ್ ಜನರ ಭಾವನೆ ಮತ್ತು ಆಕಾಂಕ್ಷೆಯಾಗಿದೆ. ನಾವು ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ” ಎಂದು ಪ್ರಮುಖ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಹುಸೇನ್ ಹೇಳಿದ್ದಾರೆ.

ಕಳೆದ 15 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್‌ಚುಕ್‌ಗೆ ಬೆಂಬಲವಾಗಿ ಕೆಡಿಎ ಅರ್ಧ ದಿನದ ಬಂದ್ ಕರೆ ನೀಡಿದ ನಂತರ ಮಾರ್ಚ್ 20 ರಂದು ಬುಧವಾರ ಕಾರ್ಗಿಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಲಡಾಖ್‌ನ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾರ್ಗಿಲ್‌ನ ಮುಖ್ಯ ಮಾರುಕಟ್ಟೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್‌ ಅವರ ಪ್ರಮುಖ ಬೇಡಿಕೆಯಾಗಿತ್ತು. ಈ ಪ್ರತಿಭಟನೆಯನ್ನು ಪ್ರಜಾಪ್ರಭುತ್ವದ ಮರುಸ್ಥಾಪನೆ ಎಂದು ಅಲ್ಲಿನ ಜನರು ಹೇಳಿದ್ದಾರೆ.

ಕೆಡಿಎಯ ಸಹ ಸಂಚಾಲಕ ಮತ್ತು ಜಮ್ಮು ಕಾಶ್ಮೀರದ ಮಾಜಿ ಶಾಸಕ ಅಸ್ಗರ್ ಅಲಿ ಕರ್ಬಲೈ ಅವರು ಫಾತಿಮಾ ಚೌಕ್‌ನಿಂದ ಕಾರ್ಗಿಲ್‌ನ ಹುಸೇನಿ ಪಾರ್ಕ್‌ವರೆಗೆ ರ್‍ಯಾಲಿಯನ್ನು ಮುನ್ನಡೆಸಿದ್ದಾರೆ. ಕೇಂದ್ರ ಸರ್ಕಾರದೊಂದಿಗಿನ ಮಾತುಕತೆ ವಿಫಲಗೊಂಡ ಬಳಿಕ ಕರ್ಬಲೈ ಅವರು ಹೋರಾಟವನ್ನು ತೀವ್ರಗೊಳಿಸಿದ್ದಾರೆ.

“ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಕಡೆಗಣಿಸುತ್ತಿದೆ. ಲಡಾಖ್‌ ಜನರ ಧ್ವನಿಯನ್ನು ಬಲ ಪ್ರಯೋಗ ಮಾಡಿ ಹತ್ತಿಕ್ಕಬಹುದು ಎಂದು ಕೇಂದ್ರ ಸರ್ಕಾರ ಅಂದುಕೊಂಡಿದೆ. ಆದರೆ, ಲಡಾಖ್‌ನ ಜನರು ತಮ್ಮ ಹಕ್ಕುಗಳಿಗಾಗಿ ಹೋರಾಟದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದರಿದ್ದಾರೆ” ಎಂದು ಕರ್ಬಲೈ ಹೇಳಿದ್ದಾರೆ.

ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಯಾಕೆ? 

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ, ಅಲ್ಲಿ ಹೊರಗಿನವರಿಗೆ ಗಣಿಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಿಗೆ ಅನುಮತಿ ನೀಡಲಾಗುತ್ತಿದೆ. ಇದರಿಂದ ಸಂಭವಿಸಬಹುದಾದ ಪರಿಸರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಪರಿಸರ ಹೋರಾಟಗಾರ ವಾಂಗ್‌ಚುಕ್ ಅವರು ಮಾರ್ಚ್ 6ರಿಂದ ಕೇವಲ ನೀರು ಮತ್ತು ಉಪ್ಪು ಸೇವಿಸುತ್ತಾ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಮುಂದೆ ಲಡಾಖ್‌ನಲ್ಲಿ ಗಣಿಗಾರಿಕೆ, ಕೈಗಾರಿಕೆ ಸ್ಥಾಪನೆಯಾದೆ ಪರಿಸರಕ್ಕೆ ಉಂಟಾಗಲಿರುವ ಅತೀವ ಹಾನಿಯ ಕುರಿತು ವಾಂಗ್‌ಚುಕ್ ಕಳವಳ ವ್ಯಕ್ತಪಡಿಸಿದ್ದಾರೆ. ಸಾವಿರಾರು ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

2019ರ ಸಂಸತ್ತಿನ ಚುನಾವಣೆ ಮತ್ತು 2020ರ ಜಮ್ಮು ಕಾಶ್ಮೀರದ ಹಿಲ್ ಕೌನ್ಸಿಲ್ ಚುನಾವಣೆಗಳಿಗೆ ಮುಂಚಿತವಾಗಿ ತನ್ನ ಚುನಾವಣಾ ಪ್ರಣಾಳಿಕೆಗಳಲ್ಲಿ ಲಡಾಖ್ ಜನರಿಗೆ ನೀಡಿದ್ದ ಭರವಸೆಗಳನ್ನು ವಾಂಗ್‌ಚುಕ್ ಅವರು ವಿಡಿಯೋ ಸಂದೇಶ ಮೂಲಕ ಬಿಜೆಪಿ ನಾಯಕರಿಗೆ ನೆನಪಿಸುವ ಕೆಲಸ ಮಾಡಿದ್ದಾರೆ.

“ಈ ಸರ್ಕಾರವು ಭಾರತವನ್ನು ‘ಪ್ರಜಾಪ್ರಭುತ್ವದ ತಾಯಿ’ ಎಂದು ಕರೆಯುತ್ತದೆ. ಆದರೆ, ಭಾರತವು ಲಡಾಖ್‌ನ ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಿರಾಕರಿಸಿದೆ. ಅದನ್ನು ನವದೆಹಲಿಯಿಂದ ನಿಯಂತ್ರಿಸಲ್ಪಡುವ ಅಧಿಕಾರಶಾಹಿಗಳ ಅಧೀನದಲ್ಲಿ ಇರಿಸಿದೆ. ಹಾಗಾಗಿ, ಲಡಾಖ್‌ನ ವಿಷಯದಲ್ಲಿ ಭಾರತವನ್ನು ಪ್ರಜಾಪ್ರಭುತ್ವದ ‘ಮಲತಾಯಿ’ ಎಂದು ಕರೆಯಬಹುದು” ಎಂದು ವಾಂಗ್‌ಚುಕ್ ಇತ್ತೀಚಿನ ಎಕ್ಸ್‌ ಪೋಸ್ಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಲಡಾಖ್‌ಗೆ 6ರನೇ ಶೆಡ್ಯೂಲ್‌ಗಾಗಿ ಜನಾಂದೋಲನ (People’s Movement for Sixth Schedule for Ladakh) ಎಂಬ ಬ್ಯಾನರ್‌ನಡಿಯಲ್ಲಿ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವ ವಾಂಗ್‌ಚುಕ್ ಅವರು, ಇಡೀ ದೇಶಕ್ಕೆ ಲಡಾಖ್‌ನ ವಾಸ್ತವತೆಯನ್ನು ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲಡಾಖ್‌ನ ಕುರುಬರು, ರೈತರು ಸೇರಿದಂತೆ ಬರೋಬ್ಬರಿ 10 ಸಾವಿರಕ್ಕೂ ಅಧಿಕ ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ದಕ್ಷಿಣ ಭಾರತದ ಕೈಗಾರಿಗಳು ಮತ್ತು ಚೀನಾದ ಆಕ್ರಮಣದಿಂದ ಲಡಾಖ್‌ ಅನ್ನು ರಕ್ಷಿಸಿ ಎಂಬುವುದು ಈ ಜನರ ಕೂಗಾಗಿದೆ.

ಸಂವಿಧಾನದ 244ನೇ ವಿಧಿಯಡಿ ಬರುವ 6ನೇ ಪರಿಚ್ಛೇದವು, ಲಡಾಖ್‌ನ ಬುಡಕಟ್ಟು ಜನರಿಗೆ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಭೂಮಿ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿ ಸಂಬಂಧ ಕಾನೂನುಗಳನ್ನು ರೂಪಿಸಲು ಸ್ವಾಯತ್ತ ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ.

ಇದನ್ನೂ ಓದಿ : ಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...