Homeಮುಖಪುಟಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

ಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಮಾತು ಮರೆತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಜನಾಕ್ರೋಶ ಭುಗಿಲೆದ್ದಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಅಲ್ಲಿನ ಪರಿಸರವನ್ನು ಗಣಿ, ಕೈಗಾರಿಕೆ ಮಾಫಿಯಾಗಳಿಂದ ಕಾಪಾಡಬೇಕು, ಆರನೇ ಪರಿಚ್ಛೇದದ ಮಾನ್ಯತೆ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಡಿ ನಾಡಿನ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಮಾರ್ಚ್ 24 ರಂದು ಪರಿಸರ ಕಾರ್ಯಕರ್ತ ಮತ್ತು ರಾಮನ್ ಮ್ಯಾಗ್ಸಾಸೆ ಪ್ರಶಸ್ತಿ ವಿಜೇತ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ.

ಚೀನಾ ಜೊತೆಗಿನ ಗಡಿ ಸಂಘರ್ಷ ಶಮನಕ್ಕೆ ಸಂಬಂಧಪಟ್ಟಂತೆ ಕಳೆದ ಒಂದು ವರ್ಷದಿಂದ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಆರಂಭದಲ್ಲಿ ಮೂರನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಆ ನಂತರ ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಆಯಕಟ್ಟಿನ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಕೇಂದ್ರ ಗೃಹ ಸಚಿವಾಲಯವು 2019 ರಲ್ಲಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ಬಳಿಕ ಲಡಾಖ್‌ಗೆ ಸಾಂವಿಧಾನಿಕ ಸುರಕ್ಷತೆಗಳನ್ನು ನೀಡಬೇಕು ಎಂಬ ಅಲ್ಲಿನ ಜನರ ಬೇಡಿಕೆಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದೆ.

‘ದಿ ವೈರ್‌’ನೊಂದಿಗೆ ಮಾತನಾಡಿರುವ ಲಡಾಖ್‌ನಿಂದ 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೆಡಿಎ ಸದಸ್ಯ ಸಜ್ಜದ್ ಹುಸೇನ್, ಲಡಾಖ್‌ಗೆ ಸಂವಿಧಾನ 6ನೇ ಶೆಡ್ಯೂಲ್‌ ಸ್ಥಾನಮಾನ ನೀಡುವುದು ಮತ್ತು ರಾಜ್ಯದ ಸ್ಥಾನಮಾನ ನೀಡುವ ನಮ್ಮ ಬೇಡಿಕೆಗಳನ್ನು ಈಡೇರಿಸುವ ಕೇಂದ್ರದೊಂದಿಗಿನ ಮಾತುಕತೆಗಳು ವಿಫಲವಾದ ಕಾರಣ ಮಾರ್ಚ್ 24 ರಿಂದ ಮಾರ್ಚ್ 27 ರವರೆಗೆ ನಾವು ವಾಂಗ್‌ಚುಕ್‌ ಅವರ ಉಪವಾಸ ಸತ್ಯಾಗ್ರಹದ ಜೊತೆ ಸೇರಿಕೊಳ್ಳುತ್ತೇವೆ ಎಂದಿದ್ದಾರೆ.

“ರಾಜ್ಯದ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್ ಲಡಾಖಿಗಳ ಹೃದಯಕ್ಕೆ ಸಾಮಿಪ್ಯ ಇರುವ ವಿಷಯಗಳು. ಇದು ಕೇವಲ ನಮ್ಮ ಬೇಡಿಕೆಯಲ್ಲ. ಇದು ಲಡಾಖ್ ಜನರ ಭಾವನೆ ಮತ್ತು ಆಕಾಂಕ್ಷೆಯಾಗಿದೆ. ನಾವು ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ” ಎಂದು ಪ್ರಮುಖ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಹುಸೇನ್ ಹೇಳಿದ್ದಾರೆ.

ಕಳೆದ 15 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್‌ಚುಕ್‌ಗೆ ಬೆಂಬಲವಾಗಿ ಕೆಡಿಎ ಅರ್ಧ ದಿನದ ಬಂದ್ ಕರೆ ನೀಡಿದ ನಂತರ ಮಾರ್ಚ್ 20 ರಂದು ಬುಧವಾರ ಕಾರ್ಗಿಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಲಡಾಖ್‌ನ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾರ್ಗಿಲ್‌ನ ಮುಖ್ಯ ಮಾರುಕಟ್ಟೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್‌ ಅವರ ಪ್ರಮುಖ ಬೇಡಿಕೆಯಾಗಿತ್ತು. ಈ ಪ್ರತಿಭಟನೆಯನ್ನು ಪ್ರಜಾಪ್ರಭುತ್ವದ ಮರುಸ್ಥಾಪನೆ ಎಂದು ಅಲ್ಲಿನ ಜನರು ಹೇಳಿದ್ದಾರೆ.

ಕೆಡಿಎಯ ಸಹ ಸಂಚಾಲಕ ಮತ್ತು ಜಮ್ಮು ಕಾಶ್ಮೀರದ ಮಾಜಿ ಶಾಸಕ ಅಸ್ಗರ್ ಅಲಿ ಕರ್ಬಲೈ ಅವರು ಫಾತಿಮಾ ಚೌಕ್‌ನಿಂದ ಕಾರ್ಗಿಲ್‌ನ ಹುಸೇನಿ ಪಾರ್ಕ್‌ವರೆಗೆ ರ್‍ಯಾಲಿಯನ್ನು ಮುನ್ನಡೆಸಿದ್ದಾರೆ. ಕೇಂದ್ರ ಸರ್ಕಾರದೊಂದಿಗಿನ ಮಾತುಕತೆ ವಿಫಲಗೊಂಡ ಬಳಿಕ ಕರ್ಬಲೈ ಅವರು ಹೋರಾಟವನ್ನು ತೀವ್ರಗೊಳಿಸಿದ್ದಾರೆ.

“ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಕಡೆಗಣಿಸುತ್ತಿದೆ. ಲಡಾಖ್‌ ಜನರ ಧ್ವನಿಯನ್ನು ಬಲ ಪ್ರಯೋಗ ಮಾಡಿ ಹತ್ತಿಕ್ಕಬಹುದು ಎಂದು ಕೇಂದ್ರ ಸರ್ಕಾರ ಅಂದುಕೊಂಡಿದೆ. ಆದರೆ, ಲಡಾಖ್‌ನ ಜನರು ತಮ್ಮ ಹಕ್ಕುಗಳಿಗಾಗಿ ಹೋರಾಟದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದರಿದ್ದಾರೆ” ಎಂದು ಕರ್ಬಲೈ ಹೇಳಿದ್ದಾರೆ.

ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಯಾಕೆ? 

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ, ಅಲ್ಲಿ ಹೊರಗಿನವರಿಗೆ ಗಣಿಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಿಗೆ ಅನುಮತಿ ನೀಡಲಾಗುತ್ತಿದೆ. ಇದರಿಂದ ಸಂಭವಿಸಬಹುದಾದ ಪರಿಸರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಪರಿಸರ ಹೋರಾಟಗಾರ ವಾಂಗ್‌ಚುಕ್ ಅವರು ಮಾರ್ಚ್ 6ರಿಂದ ಕೇವಲ ನೀರು ಮತ್ತು ಉಪ್ಪು ಸೇವಿಸುತ್ತಾ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಮುಂದೆ ಲಡಾಖ್‌ನಲ್ಲಿ ಗಣಿಗಾರಿಕೆ, ಕೈಗಾರಿಕೆ ಸ್ಥಾಪನೆಯಾದೆ ಪರಿಸರಕ್ಕೆ ಉಂಟಾಗಲಿರುವ ಅತೀವ ಹಾನಿಯ ಕುರಿತು ವಾಂಗ್‌ಚುಕ್ ಕಳವಳ ವ್ಯಕ್ತಪಡಿಸಿದ್ದಾರೆ. ಸಾವಿರಾರು ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

2019ರ ಸಂಸತ್ತಿನ ಚುನಾವಣೆ ಮತ್ತು 2020ರ ಜಮ್ಮು ಕಾಶ್ಮೀರದ ಹಿಲ್ ಕೌನ್ಸಿಲ್ ಚುನಾವಣೆಗಳಿಗೆ ಮುಂಚಿತವಾಗಿ ತನ್ನ ಚುನಾವಣಾ ಪ್ರಣಾಳಿಕೆಗಳಲ್ಲಿ ಲಡಾಖ್ ಜನರಿಗೆ ನೀಡಿದ್ದ ಭರವಸೆಗಳನ್ನು ವಾಂಗ್‌ಚುಕ್ ಅವರು ವಿಡಿಯೋ ಸಂದೇಶ ಮೂಲಕ ಬಿಜೆಪಿ ನಾಯಕರಿಗೆ ನೆನಪಿಸುವ ಕೆಲಸ ಮಾಡಿದ್ದಾರೆ.

“ಈ ಸರ್ಕಾರವು ಭಾರತವನ್ನು ‘ಪ್ರಜಾಪ್ರಭುತ್ವದ ತಾಯಿ’ ಎಂದು ಕರೆಯುತ್ತದೆ. ಆದರೆ, ಭಾರತವು ಲಡಾಖ್‌ನ ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಿರಾಕರಿಸಿದೆ. ಅದನ್ನು ನವದೆಹಲಿಯಿಂದ ನಿಯಂತ್ರಿಸಲ್ಪಡುವ ಅಧಿಕಾರಶಾಹಿಗಳ ಅಧೀನದಲ್ಲಿ ಇರಿಸಿದೆ. ಹಾಗಾಗಿ, ಲಡಾಖ್‌ನ ವಿಷಯದಲ್ಲಿ ಭಾರತವನ್ನು ಪ್ರಜಾಪ್ರಭುತ್ವದ ‘ಮಲತಾಯಿ’ ಎಂದು ಕರೆಯಬಹುದು” ಎಂದು ವಾಂಗ್‌ಚುಕ್ ಇತ್ತೀಚಿನ ಎಕ್ಸ್‌ ಪೋಸ್ಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಲಡಾಖ್‌ಗೆ 6ರನೇ ಶೆಡ್ಯೂಲ್‌ಗಾಗಿ ಜನಾಂದೋಲನ (People’s Movement for Sixth Schedule for Ladakh) ಎಂಬ ಬ್ಯಾನರ್‌ನಡಿಯಲ್ಲಿ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವ ವಾಂಗ್‌ಚುಕ್ ಅವರು, ಇಡೀ ದೇಶಕ್ಕೆ ಲಡಾಖ್‌ನ ವಾಸ್ತವತೆಯನ್ನು ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲಡಾಖ್‌ನ ಕುರುಬರು, ರೈತರು ಸೇರಿದಂತೆ ಬರೋಬ್ಬರಿ 10 ಸಾವಿರಕ್ಕೂ ಅಧಿಕ ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ದಕ್ಷಿಣ ಭಾರತದ ಕೈಗಾರಿಗಳು ಮತ್ತು ಚೀನಾದ ಆಕ್ರಮಣದಿಂದ ಲಡಾಖ್‌ ಅನ್ನು ರಕ್ಷಿಸಿ ಎಂಬುವುದು ಈ ಜನರ ಕೂಗಾಗಿದೆ.

ಸಂವಿಧಾನದ 244ನೇ ವಿಧಿಯಡಿ ಬರುವ 6ನೇ ಪರಿಚ್ಛೇದವು, ಲಡಾಖ್‌ನ ಬುಡಕಟ್ಟು ಜನರಿಗೆ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಭೂಮಿ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿ ಸಂಬಂಧ ಕಾನೂನುಗಳನ್ನು ರೂಪಿಸಲು ಸ್ವಾಯತ್ತ ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ.

ಇದನ್ನೂ ಓದಿ : ಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...