Homeಮುಖಪುಟಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ...

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

- Advertisement -
- Advertisement -

ಅದಾನಿ ಸಮೂಹದೊಂದಿಗೆ ಸಂಪರ್ಕ ಹೊಂದಿರುವ ನಾಲ್ಕು ಕಂಪನಿಗಳು ಏಪ್ರಿಲ್ 2019 ರಿಂದ ನವೆಂಬರ್ 2023ರವರೆಗೆ ಒಟ್ಟು 55.4 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಇವುಗಳಲ್ಲಿ ಎಬಿಸಿ ಇಂಡಿಯಾ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗಸಂಸ್ಥೆಗಳು ಸೇರಿವೆ.

ರೂ. 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಬಿಕೆ ಗೋಯೆಂಕಾ ಸ್ಥಾಪಿಸಿದ ಮುಂಬೈ ಮೂಲದ ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗ ಸಂಸ್ಥೆಗಳು ಖರೀದಿಸಿವೆ. ಚುನಾವಣಾ ಆಯೋಗವು ನಿನ್ನೆ (ಮಾ.21) ಅಪ್ಲೋಡ್ ಮಾಡಿರುವ ಮಾಹಿತಿಯ ಪ್ರಕಾರ, ಈ ಬಾಂಡ್‌ಗಳಲ್ಲಿ 42 ಕೋಟಿ ರೂಪಾಯಿಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಬಾಂಡ್‌ಗಳನ್ನು ಖರೀದಿಸಿದ ಮೊದಲ ಅಂಗಸಂಸ್ಥೆ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್, ಏಪ್ರಿಲ್ 2019 ರಲ್ಲಿ ರೂ. 3 ಕೋಟಿ ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಸೇರಿ ಎರಡು ಹಂತಗಳಲ್ಲಿ ರೂ. 13 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಅದಾನಿ ಸಮೂಹದೊಂದಿಗೆ ವೆಲ್‌ಸ್ಪನ್ ಗ್ರೂಪ್‌ನ ಸಂಬಂಧ: 2005ರಲ್ಲಿ, ಅದಾನಿ ಸಮೂಹ ವೆಲ್‌ಸ್ಪನ್ ಜೊತೆಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಷನ್ ಲಿಮಿಟೆಡ್, ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೆಟ್ ಲಿಮಿಟೆಡ್ ಎಂಬ ಜಂಟಿ ಉದ್ಯಮ ಸ್ಥಾಪಿಸಿತ್ತು.

ಪತ್ರಿಕಾ ಪ್ರಕಟಣೆಯ ಪ್ರಕಾರ, ಅದಾನಿ ಸಮೂಹ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಮೂಲಕ 65 ಪ್ರತಿಶತ ಷೇರುಗಳನ್ನು ಹೊಂದಿದೆ. ಗೌತಮ್ ಅದಾನಿ ಅಧ್ಯಕ್ಷ ಮತ್ತು ಅವರ ಮಗ ರಾಜೇಶ್ ಅದಾನಿ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ವೆಲ್‌ಸ್ಪನ್ ಗ್ರೂಪ್ ಅದಾನಿ-ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೇಟ್ ಲಿಮಿಟೆಡ್ ಮೂಲಕ 35 ಪ್ರತಿಶತ ಷೇರುಗಳನ್ನು ಹೊಂದಿದೆ. ಇದು ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಎರಡನೇ ಅಂಗಸಂಸ್ಥೆ, ವೆಲ್‌ಸ್ಪನ್ ಕಾರ್ಪ್‌ ಲಿಮಿಟೆಡ್. ರೂ 27 ಕೋಟಿ ಮೌಲ್ಯದ ಬಾಂಡ್‌ಗಳನ್ನು ಇದು ಖರೀದಿಸಿದೆ. ಮೇ 2019 ರಲ್ಲಿ ರೂ. 5 ಕೋಟಿ, ಜನವರಿ 2020ರಲ್ಲಿ ರೂ. 2 ಕೋಟಿ, ಅಕ್ಟೋಬರ್ 2020ರಲ್ಲಿ ರೂ. 7 ಕೋಟಿ, ಏಪ್ರಿಲ್ 2022ರಲ್ಲಿ ರೂ. 3 ಕೋಟಿ, ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿ ಮಾಡಿದೆ.

ಮೂರನೇ ಅಂಗಸಂಸ್ಥೆ, ವೆಲ್‌ಸ್ಪನ್ ಲೀವಿಂಗ್ ಲಿಮಿಟೆಡ್. ನವೆಂಬರ್ 2022ರಲ್ಲಿ ರೂ. 10 ಕೋಟಿ ಮತ್ತು ನವೆಂಬರ್ 2023 ರಲ್ಲಿ ರೂ. 5 ಕೋಟಿ ಸೇರಿ ಒಟ್ಟು 15 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಒಟ್ಟಾರೆಯಾಗಿ, ವೆಲ್‌ಸ್ಪನ್‌ನ ಮೂರು ಅಂಗಸಂಸ್ಥೆಗಳು ರೂ 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿವೆ.

ಕಂಪನಿಯು ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ರಾಜ್ಯ ಚುನಾವಣೆಗಳ ಸಮಯದಲ್ಲಿ, ಅಂದರೆ ನವೆಂಬರ್ 2022ರಲ್ಲಿ 30 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2019 ರ ಲೋಕಸಭೆ ಚುನಾವಣೆಯ ಸಮಯ ರೂ. 8 ಕೋಟಿ, 2020ರ ದೆಹಲಿ ವಿಧಾನಸಭಾ ಚುನಾವಣೆಯ ಸಮಯ ರೂ. 2 ಕೋಟಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಮಯ ರೂ. 7 ಕೋಟಿ, 2023ರ ನವೆಂಬರ್‌ನಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆದ ಚುನಾವಣೆಗಳ ಸಂದರ್ಭದಲ್ಲಿ ರೂ. 5 ಕೋಟಿ ಮತ್ತು 2022ರ ಏಪ್ರಿಲ್‌ನಲ್ಲಿ ಯಾವುದೇ ಚುನಾವಣೆ ಇಲ್ಲದೆ ಸಮಯದಲ್ಲಿ ರೂ.3 ಕೋಟಿ ಮೌಲ್ಯದ ಬಾಂಡ್‌ಗಳನ್ನು ಕಂಪನಿಯು ಖರೀದಿಸಿದೆ.

ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಕಾರ್ಪ್ ಲಿಮಿಟೆಡ್ 2019ರ ಲೋಕಸಭೆ ಚುನಾವಣೆಯ ಸಂದರ್ಭ ಖರೀದಿಸಿದ ರೂ. 8 ಕೋಟಿ ಮೌಲ್ಯದ ಎಲ್ಲಾ ಚುನಾವಣಾ ಬಾಂಡ್‌ಗಳನ್ನು ಕಾಂಗ್ರೆಸ್ ನಗದೀಕರಣ ಮಾಡಿಕೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮೊದಲು ವೆಲ್‌ಸ್ಪನ್ ಲಿವಿಂಗ್ ಲಿಮಿಟೆಡ್ ಖರೀದಿಸಿದ 5 ಕೋಟಿ ರೂ. ಮೌಲ್ಯದ ಬಾಂಡ್‌ ಅನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಗದೀಕರಣ ಮಾಡಿಕೊಂಡಿದೆ.

ಜನವರಿ 2020 ಮತ್ತು ನವೆಂಬರ್ 2022 ರ ನಡುವೆ ಖರೀದಿಸಿದ ರೂ. 42 ಕೋಟಿ ಮೌಲ್ಯದ ಉಳಿದ ಎಲ್ಲಾ ಬಾಂಡ್‌ಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಅದಾನಿ ಸಮೂಹದ ಜೊತೆ ಸಂಪರ್ಕ ಹೊಂದಿರುವ ನಾಲ್ಕನೇ ಕಂಪನಿ ಎಬಿಸಿ ಇಂಡಿಯಾ ಲಿಮಿಟೆಡ್. ಇದು ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಸ್ತೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿದೆ. ಇದು 2019ರ ಏಪ್ರಿಲ್‌ನಲ್ಲಿ ರೂ. 40 ಲಕ್ಷ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅವೆಲ್ಲವನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿರುವ ದಾಖಲೆಗಳ ಪ್ರಕಾರ, ಅದಾನಿ ಪ್ರಾಪರ್ಟೀಸ್ ಪ್ರೈವೆಟ್ ಲಿಮಿಟೆಡ್ ಎಬಿಸಿ ಇಂಡಿಯಾದಲ್ಲಿ ಮಾರ್ಚ್ 2016 ರಿಂದ ಸೆಪ್ಟೆಂಬರ್ 2023 ರವರೆಗೆ ಶೇ. 1.2 ಪಾಲು ಹೊಂದಿತ್ತು. ಅದಾನಿ ಪ್ರಾಪರ್ಟೀಸ್ ತನ್ನ ಪಾಲನ್ನು ಡಿಸೆಂಬರ್ 2023ರಲ್ಲಿ ಮಾರಾಟ ಮಾಡಿದೆ.

Source Courtesy : newslaundry

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...