Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...