Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...