Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...