Homeಮುಖಪುಟಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ...

ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ…

ತಮಕುಹಿ ರಾಜ್ ಕ್ಷೇತ್ರದಿಂದ 2 ಬಾರಿ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವರು ಸಜ್ಜಾಗಿದ್ದಾರೆ.

- Advertisement -
- Advertisement -

ಸುಮಾರು ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷವು ಸುಮಾರು ಆರು ನಾಯಕರ ಸಣ್ಣ ಗುಂಪನ್ನು ಉತ್ತರಪ್ರದೇಶದಲ್ಲಿ ಸಂಘಟನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ತನ್ನ ಚುನಾವಣಾ ಭವಿಷ್ಯವನ್ನು ಸುಧಾರಿಸಲು ಅವಲಂಬಿಸಿತ್ತು. ಆದರೆ ಹಿರಿಯ ನಾಯಕರಾದ ಜಿತೇನ್ ಪ್ರಸಾದ್, ಸಂಜಯ್ ಸಿಂಗ್, ಶ್ರೀಪ್ರಕಾಶ್ ಜೈಸ್ವಾಲ್, ನಿರ್ಮಲ್ ಖತ್ರಿ, ಸಲ್ಮಾನ್ ಖುರ್ಷಿದ್ ಮತ್ತು ರಾಜ್ ಬಬ್ಬರ್ ಅದರಲ್ಲಿ ವಿಫಲರಾಗಿದ್ದಾರೆ. ಏಪ್ರಿಲ್‌ ಮೇ ನಲ್ಲಿ ನಡೆದ  ಲೋಕಸಭಾ ಚುನಾವಣೆಯಲ್ಲಿ, ಪಕ್ಷವು ರಾಜ್ಯದಲ್ಲಿ ಸಂಪೂರ್ಣ ಸೋಲನ್ನು ಅನುಭವಿಸಿತು. ಅಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ತಮ್ಮ ಈ ವಿನಾಶಕಾರಿ ಪ್ರದರ್ಶನದ ನಂತರ ಈಗ ಕಾಂಗ್ರೆಸ್ ಪಕ್ಷವು ಈ ‘ಗಣ್ಯ’ ಗುಂಪನ್ನು ಮೀರಿ ಹೆಚ್ಚು ಬೇರೂರಿರುವ, ಬಡವರ ಪರವಾದ ನಾಯಕನನ್ನು ಹುಡುಕುತ್ತಿತ್ತು. ತಮಕುಹಿ ರಾಜ್ ಕ್ಷೇತ್ರದ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತನ್ನ ಹುಡುಕಾಟಕ್ಕೆ ತೆರೆಎಳೆದಿದೆ.

ಪ್ರಧಾನ ಕಾರ್ಯದರ್ಶಿ (ಉತ್ತರಪ್ರದೇಶದ ಪೂರ್ವ ಉಸ್ತುವಾರಿ) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹಯೋಗದೊಂದಿಗೆ ಲಲ್ಲು ಈಗ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲಲ್ಲು ಅವರ ನೇಮಕದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ತನ್ನ ಪಾಠಗಳನ್ನು ಕಲಿತುಕೊಂಡಿದೆ ಮತ್ತು ಸಂಘಟನೆಯನ್ನು ಪುನರ್ನಿರ್ಮಾಣ ಮಾಡುವ ಜವಾಬ್ದಾರಿಯನ್ನು ತಳಮಟ್ಟದ ಹಿಡಿತ ಹೊಂದಿರುವ ನಾಯಕನಿಗೆ ನೀಡಿದೆ ಎಂದು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರು ಸಂತೋಷಪಟ್ಟಿದ್ದಾರೆ. ಈ ನಿರ್ಧಾರವು ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸಲು ಅಪಾರ ಸಹಾಯ ಮಾಡುತ್ತದೆ ಎಂದು ಹಲವಾರು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಲಲ್ಲು ಅವರ ಆರಂಭಿಕ ಹೋರಾಟ
ಕುಶಿನಗರ ಜಿಲ್ಲೆಯ ತಮ್ಕುಹಿ ರಾಜ್‌ನ 40 ವರ್ಷದ ಶಾಸಕ ಲಲ್ಲು ಅವರು 2001 ರಲ್ಲಿ ಕುಶಿನಗರದ ಕಿಶನ್ ಪಿಜಿ ಕಾಲೇಜಿನಿಂದ ಪೊಲಿಟಿಕಲ್‌ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಸಕ್ರಿಯ ರಾಜಕೀಯದಲ್ಲಿದ್ದಾರೆ.

ಕಾಲೇಜು ಸಮಯದಲ್ಲಿ, ಅವರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಆದರೆ ಎರಡನೇ ಪ್ರಯತ್ನದಲ್ಲಿ ಮಾತ್ರ ಯಶಸ್ವಿಯಾದರು. ಇದನ್ನು ಅನುಸರಿಸಿ, ಅವರು ಸಾಮಾಜಿಕ ಚಳವಳಿಗಳೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಆಂದೋಲನಗಳು ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು.

2007 ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ಅವರು ಯಾವುದೇ ಪಕ್ಷವು ಟಿಕೆಟ್ ನೀಡಲು ಸಿದ್ಧರಿಲ್ಲದ ಕಾರಣ, ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಗ ಅವರು ಠೇವಣಿಯನ್ನು ಸಹ ಕಳೆದುಕೊಂಡಿದ್ದರು.

ಕೃಷಿ ಕುಟುಂಬಕ್ಕೆ ಸೇರಿದ ಲಲ್ಲು, ಆ ಸಮಯದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರದ ಕಾರಣ ದೆಹಲಿಗೆ ತೆರಳಿ ನೋಯ್ಡಾದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು. ತನ್ನ ಕೆಲಸದ ಭಾಗವಾಗಿ, ಕಬ್ಬಿಣದ ಸರಳುಗಳಂತಹ ಭಾರವಾದ ವಸ್ತುಗಳನ್ನು ಎತ್ತುವಲ್ಲಿ ಅವನು ಆಗಾಗ್ಗೆ ಕಾರ್ಮಿಕರಿಗೆ ಸಹಾಯ ಮಾಡಬೇಕಾಗಿತ್ತು ಎಂದು ತಮ್ಮ ಹಿಂದಿನ ಜೀವನವನ್ನು ಅವರು ನೆನಪಿಸಿಕೊಳ್ಳುತ್ತಾರೆ.

ಎಂಟು ತಿಂಗಳು ಕೆಲಸದಲ್ಲಿ ಕಳೆದ ನಂತರ ಲಲ್ಲು ಮನೆಗೆ ಮರಳಿದರು. ಆದರೆ, ಈ ಬಾರಿ ಅವರ ತಮ್ಕುಹಿ ರಾಜ್ ಕ್ಷೇತ್ರದ ಗ್ರಾಮಸ್ಥರು ಅವರನ್ನು ಮತ್ತೆ ನೋಯ್ಡಾಕ್ಕೆ ಹೋಗದಂತೆ ತಡೆದು ಮತ್ತೆ ರಾಜಕೀಯ ಪ್ರವೇಶಿಸಲು ಒತ್ತಾಯಿಸಿದ್ದರಂತೆ.

ಆಗ ಲಲ್ಲು ಮತ್ತೆ ತಮಕುಹಿ ರಾಜ್‌ನ ಸಾಮಾನ್ಯ ಜನರಿಗೆ ಸಂಬಂಧಿಸಿದ ವಿಷಯಗಳನ್ನು ಮೇಲೆತ್ತಲು ಪ್ರಾರಂಭಿಸಿದರು. ಅವರು ಹಲವಾರು ಆಂದೋಲನಗಳು ಮತ್ತು ಪ್ರತಿಭಟನೆಗಳನ್ನು ನಡೆಸಿದರು ಮತ್ತು ಅದಕ್ಕಾಗಿ ಜೈಲುವಾಸ ಕೂಡ ಅನುಭವಿಸಿದ್ದಾರೆ.

2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತು. ಅಂತಿಮವಾಗಿ ಅವರು ಬಿಜೆಪಿ ಅಭ್ಯರ್ಥಿಯನ್ನು 5,000 ಮತಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾದರು. ನಂತರ ಅವರು 2017 ರಲ್ಲಿ ಮತ್ತೆ ಚುನಾಯಿತರಾದರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಮುನ್ನಡೆಸಲು ಆಯ್ಕೆಯಾದರು.

ಗುಜರಾತ್ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಮಿತಿಗಳಿಗೆ ನೇಮಕಾತಿಯೊಂದಿಗೆ ಅವರ ಪ್ರಾಮುಖ್ಯತೆ ಮುಂದುವರೆಯಿತು.

ಈ ವರ್ಷದ ಜೂನ್‌ನಲ್ಲಿ, ಸಾರ್ವತ್ರಿಕ ಚುನಾವಣೆಯ ಒಂದು ತಿಂಗಳ ನಂತರ, ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಅವರ ಖಾತೆಯನ್ನು ‘ಅನುಸರಿಸಿದಾಗ’ ಪಕ್ಷದಲ್ಲಿ ತಮ್ಮ ಪ್ರಾಮುಖ್ಯತೆಯನ್ನು ಅವರು ಗಮನಿಸಿದ್ದರು. ಮರುದಿನವೇ ಅವರಿಗೆ ಪಕ್ಷದ ಉತ್ತರ ಪ್ರದೇಶ ಪೂರ್ವ ಘಟಕದ ಉಸ್ತುವಾರಿ ವಹಿಸಲಾಯಿತು. ಈಗ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಕಲಹಗಳು ಇನ್ನೂ ಪಕ್ಷವನ್ನು ಪೀಡಿಸುತ್ತಿರುವುದರಿಂದ, ಹೊಸ ಜವಾಬ್ದಾರಿಗೆ ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಹೈಕಮಾಂಡ್ ತನ್ನಲ್ಲಿ ವ್ಯಕ್ತಪಡಿಸಿದ ನಂಬಿಕೆಯನ್ನು ಉಳಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಲಲ್ಲು ಹೇಳಿದ್ದಾರೆ.

ಮಾಹಿತಿ ಕೃಪೆ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...