Homeಮುಖಪುಟಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ...

ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ…

ತಮಕುಹಿ ರಾಜ್ ಕ್ಷೇತ್ರದಿಂದ 2 ಬಾರಿ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವರು ಸಜ್ಜಾಗಿದ್ದಾರೆ.

- Advertisement -
- Advertisement -

ಸುಮಾರು ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷವು ಸುಮಾರು ಆರು ನಾಯಕರ ಸಣ್ಣ ಗುಂಪನ್ನು ಉತ್ತರಪ್ರದೇಶದಲ್ಲಿ ಸಂಘಟನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ತನ್ನ ಚುನಾವಣಾ ಭವಿಷ್ಯವನ್ನು ಸುಧಾರಿಸಲು ಅವಲಂಬಿಸಿತ್ತು. ಆದರೆ ಹಿರಿಯ ನಾಯಕರಾದ ಜಿತೇನ್ ಪ್ರಸಾದ್, ಸಂಜಯ್ ಸಿಂಗ್, ಶ್ರೀಪ್ರಕಾಶ್ ಜೈಸ್ವಾಲ್, ನಿರ್ಮಲ್ ಖತ್ರಿ, ಸಲ್ಮಾನ್ ಖುರ್ಷಿದ್ ಮತ್ತು ರಾಜ್ ಬಬ್ಬರ್ ಅದರಲ್ಲಿ ವಿಫಲರಾಗಿದ್ದಾರೆ. ಏಪ್ರಿಲ್‌ ಮೇ ನಲ್ಲಿ ನಡೆದ  ಲೋಕಸಭಾ ಚುನಾವಣೆಯಲ್ಲಿ, ಪಕ್ಷವು ರಾಜ್ಯದಲ್ಲಿ ಸಂಪೂರ್ಣ ಸೋಲನ್ನು ಅನುಭವಿಸಿತು. ಅಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ತಮ್ಮ ಈ ವಿನಾಶಕಾರಿ ಪ್ರದರ್ಶನದ ನಂತರ ಈಗ ಕಾಂಗ್ರೆಸ್ ಪಕ್ಷವು ಈ ‘ಗಣ್ಯ’ ಗುಂಪನ್ನು ಮೀರಿ ಹೆಚ್ಚು ಬೇರೂರಿರುವ, ಬಡವರ ಪರವಾದ ನಾಯಕನನ್ನು ಹುಡುಕುತ್ತಿತ್ತು. ತಮಕುಹಿ ರಾಜ್ ಕ್ಷೇತ್ರದ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತನ್ನ ಹುಡುಕಾಟಕ್ಕೆ ತೆರೆಎಳೆದಿದೆ.

ಪ್ರಧಾನ ಕಾರ್ಯದರ್ಶಿ (ಉತ್ತರಪ್ರದೇಶದ ಪೂರ್ವ ಉಸ್ತುವಾರಿ) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹಯೋಗದೊಂದಿಗೆ ಲಲ್ಲು ಈಗ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲಲ್ಲು ಅವರ ನೇಮಕದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ತನ್ನ ಪಾಠಗಳನ್ನು ಕಲಿತುಕೊಂಡಿದೆ ಮತ್ತು ಸಂಘಟನೆಯನ್ನು ಪುನರ್ನಿರ್ಮಾಣ ಮಾಡುವ ಜವಾಬ್ದಾರಿಯನ್ನು ತಳಮಟ್ಟದ ಹಿಡಿತ ಹೊಂದಿರುವ ನಾಯಕನಿಗೆ ನೀಡಿದೆ ಎಂದು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರು ಸಂತೋಷಪಟ್ಟಿದ್ದಾರೆ. ಈ ನಿರ್ಧಾರವು ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸಲು ಅಪಾರ ಸಹಾಯ ಮಾಡುತ್ತದೆ ಎಂದು ಹಲವಾರು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಲಲ್ಲು ಅವರ ಆರಂಭಿಕ ಹೋರಾಟ
ಕುಶಿನಗರ ಜಿಲ್ಲೆಯ ತಮ್ಕುಹಿ ರಾಜ್‌ನ 40 ವರ್ಷದ ಶಾಸಕ ಲಲ್ಲು ಅವರು 2001 ರಲ್ಲಿ ಕುಶಿನಗರದ ಕಿಶನ್ ಪಿಜಿ ಕಾಲೇಜಿನಿಂದ ಪೊಲಿಟಿಕಲ್‌ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಸಕ್ರಿಯ ರಾಜಕೀಯದಲ್ಲಿದ್ದಾರೆ.

ಕಾಲೇಜು ಸಮಯದಲ್ಲಿ, ಅವರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಆದರೆ ಎರಡನೇ ಪ್ರಯತ್ನದಲ್ಲಿ ಮಾತ್ರ ಯಶಸ್ವಿಯಾದರು. ಇದನ್ನು ಅನುಸರಿಸಿ, ಅವರು ಸಾಮಾಜಿಕ ಚಳವಳಿಗಳೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಆಂದೋಲನಗಳು ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು.

2007 ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ಅವರು ಯಾವುದೇ ಪಕ್ಷವು ಟಿಕೆಟ್ ನೀಡಲು ಸಿದ್ಧರಿಲ್ಲದ ಕಾರಣ, ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಗ ಅವರು ಠೇವಣಿಯನ್ನು ಸಹ ಕಳೆದುಕೊಂಡಿದ್ದರು.

ಕೃಷಿ ಕುಟುಂಬಕ್ಕೆ ಸೇರಿದ ಲಲ್ಲು, ಆ ಸಮಯದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರದ ಕಾರಣ ದೆಹಲಿಗೆ ತೆರಳಿ ನೋಯ್ಡಾದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು. ತನ್ನ ಕೆಲಸದ ಭಾಗವಾಗಿ, ಕಬ್ಬಿಣದ ಸರಳುಗಳಂತಹ ಭಾರವಾದ ವಸ್ತುಗಳನ್ನು ಎತ್ತುವಲ್ಲಿ ಅವನು ಆಗಾಗ್ಗೆ ಕಾರ್ಮಿಕರಿಗೆ ಸಹಾಯ ಮಾಡಬೇಕಾಗಿತ್ತು ಎಂದು ತಮ್ಮ ಹಿಂದಿನ ಜೀವನವನ್ನು ಅವರು ನೆನಪಿಸಿಕೊಳ್ಳುತ್ತಾರೆ.

ಎಂಟು ತಿಂಗಳು ಕೆಲಸದಲ್ಲಿ ಕಳೆದ ನಂತರ ಲಲ್ಲು ಮನೆಗೆ ಮರಳಿದರು. ಆದರೆ, ಈ ಬಾರಿ ಅವರ ತಮ್ಕುಹಿ ರಾಜ್ ಕ್ಷೇತ್ರದ ಗ್ರಾಮಸ್ಥರು ಅವರನ್ನು ಮತ್ತೆ ನೋಯ್ಡಾಕ್ಕೆ ಹೋಗದಂತೆ ತಡೆದು ಮತ್ತೆ ರಾಜಕೀಯ ಪ್ರವೇಶಿಸಲು ಒತ್ತಾಯಿಸಿದ್ದರಂತೆ.

ಆಗ ಲಲ್ಲು ಮತ್ತೆ ತಮಕುಹಿ ರಾಜ್‌ನ ಸಾಮಾನ್ಯ ಜನರಿಗೆ ಸಂಬಂಧಿಸಿದ ವಿಷಯಗಳನ್ನು ಮೇಲೆತ್ತಲು ಪ್ರಾರಂಭಿಸಿದರು. ಅವರು ಹಲವಾರು ಆಂದೋಲನಗಳು ಮತ್ತು ಪ್ರತಿಭಟನೆಗಳನ್ನು ನಡೆಸಿದರು ಮತ್ತು ಅದಕ್ಕಾಗಿ ಜೈಲುವಾಸ ಕೂಡ ಅನುಭವಿಸಿದ್ದಾರೆ.

2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತು. ಅಂತಿಮವಾಗಿ ಅವರು ಬಿಜೆಪಿ ಅಭ್ಯರ್ಥಿಯನ್ನು 5,000 ಮತಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾದರು. ನಂತರ ಅವರು 2017 ರಲ್ಲಿ ಮತ್ತೆ ಚುನಾಯಿತರಾದರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಮುನ್ನಡೆಸಲು ಆಯ್ಕೆಯಾದರು.

ಗುಜರಾತ್ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಮಿತಿಗಳಿಗೆ ನೇಮಕಾತಿಯೊಂದಿಗೆ ಅವರ ಪ್ರಾಮುಖ್ಯತೆ ಮುಂದುವರೆಯಿತು.

ಈ ವರ್ಷದ ಜೂನ್‌ನಲ್ಲಿ, ಸಾರ್ವತ್ರಿಕ ಚುನಾವಣೆಯ ಒಂದು ತಿಂಗಳ ನಂತರ, ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಅವರ ಖಾತೆಯನ್ನು ‘ಅನುಸರಿಸಿದಾಗ’ ಪಕ್ಷದಲ್ಲಿ ತಮ್ಮ ಪ್ರಾಮುಖ್ಯತೆಯನ್ನು ಅವರು ಗಮನಿಸಿದ್ದರು. ಮರುದಿನವೇ ಅವರಿಗೆ ಪಕ್ಷದ ಉತ್ತರ ಪ್ರದೇಶ ಪೂರ್ವ ಘಟಕದ ಉಸ್ತುವಾರಿ ವಹಿಸಲಾಯಿತು. ಈಗ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಕಲಹಗಳು ಇನ್ನೂ ಪಕ್ಷವನ್ನು ಪೀಡಿಸುತ್ತಿರುವುದರಿಂದ, ಹೊಸ ಜವಾಬ್ದಾರಿಗೆ ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಹೈಕಮಾಂಡ್ ತನ್ನಲ್ಲಿ ವ್ಯಕ್ತಪಡಿಸಿದ ನಂಬಿಕೆಯನ್ನು ಉಳಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಲಲ್ಲು ಹೇಳಿದ್ದಾರೆ.

ಮಾಹಿತಿ ಕೃಪೆ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...