Homeಮುಖಪುಟಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸಲು ಮುಂದುವರಿದ ಬಿಜೆಪಿ ಪ್ರಯತ್ನ; ಮೂವರು ಸ್ವತಂತ್ರ ಶಾಸಕರಿಂದ ರಾಜೀನಾಮೆ

ಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸಲು ಮುಂದುವರಿದ ಬಿಜೆಪಿ ಪ್ರಯತ್ನ; ಮೂವರು ಸ್ವತಂತ್ರ ಶಾಸಕರಿಂದ ರಾಜೀನಾಮೆ

- Advertisement -
- Advertisement -

ಹಿಮಾಚಲ ಪ್ರದೇಶ ರಾಜಕೀಯ ಬೆಳವಣಿಗೆಗಳ ನಾಟಕೀಯ ತಿರುವಿನಲ್ಲಿ, ಫೆಬ್ರವರಿ 27ರ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಹರ್ಷ್ ಮಹಾಜನ್ ಅವರಿಗೆ ಮತ ಹಾಕಿದ್ದ ಮೂವರು ಸ್ವತಂತ್ರ ಶಾಸಕರು, ಆರು ಜನ ಅನರ್ಹ ಕಾಂಗ್ರೆಸ್ ಶಾಸಕರೊಂದಿಗೆ ಒಂದು ವಾರಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಇದೀಗ ಮೂವರು ಸ್ವತಂತ್ರ ಶಾಸಕರು ಶುಕ್ರವಾರ ವಿಧಾನಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಡೆಹ್ರಾದಿಂದ ಹೋಶಿಯಾರ್ ಸಿಂಗ್, ಹಮೀರ್‌ಪುರದಿಂದ ಆಶಿಶ್ ಶರ್ಮಾ ಮತ್ತು ನಲಗಢದಿಂದ ಕೆಎಲ್ ಠಾಕೂರ್ ಎಂಬ ಮೂವರು ಶಾಸಕರು ಶಿಮ್ಲಾದಲ್ಲಿ ವಿಧಾನಸಭಾ ಕಾರ್ಯದರ್ಶಿ ಯಶಪಾಲ್ ಶರ್ಮಾ ಅವರಿಗೆ ರಾಜೀನಾಮೆ ಸಲ್ಲಿಸಿದರು.

ನಾವು ಮೂವರೂ ಬಿಜೆಪಿ ಸೇರುತ್ತಿದ್ದೇವೆ; ನಾವು ಈ ಹಿಂದೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೆವು. ಆದರೆ, ಅವರಿರಿಂದ ನಮಗೆ ಗೌರವ ಸಿಗಲಿಲ್ಲ. ಅಲ್ಲದೆ, ನಮ್ಮ ಕ್ಷೇತ್ರಗಳಲ್ಲಿ ದಿನನಿತ್ಯದ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದೆ. ಹಾಗಾಗಿ, ಬಿಜೆಪಿಗೆ ಸೇರುವುದು ಪ್ರಜ್ಞಾಪೂರ್ವಕ ನಿರ್ಧಾರವಾಗಿದೆ ಎಂದು ಡೆಹ್ರಾದಿಂದ ಎರಡನೇ ಬಾರಿಗೆ ಶಾಸಕರಾಗಿರುವ ಹೋಶಿಯಾರ್ ಸಿಂಗ್ ಹೇಳಿದ್ದಾರೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ರಾಜೇಶ್ ಶರ್ಮಾ ಅವರನ್ನು 4,024 ಮತಗಳಿಂದ ಸೋಲಿಸಿದ್ದರು. ಹೋಶಿಯಾರ್ ಸಿಂಗ್ ಅವರು ಅಸೆಂಬ್ಲಿ ಚುನಾವಣೆಗೆ ಸ್ವಲ್ಪ ಮೊದಲು ಬಿಜೆಪಿ ಸೇರಿದಾಗ ಈಗಾಗಲೇ ಸ್ವತಂತ್ರ ಶಾಸಕರಾಗಿದ್ದರು. ಆದರೆ, ಪಕ್ಷದ ಟಿಕೆಟ್ ನಿರಾಕರಿಸಲಾಯಿತು.

“ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ; ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ ಎಲ್ಲರನ್ನೂ ಗುರಿಯಾಗಿಸಿಕೊಂಡಿದೆ. ನಾವು ನಮ್ಮ ಆತ್ಮಸಾಕ್ಷಿಯನ್ನು ಅನುಸರಿಸಿದ್ದೇವೆ, ಹೊರಗಿನ ಅಭ್ಯರ್ಥಿಗೆ (ಅಭಿಷೇಕ್ ಮನು ಸಿಂಘ್ವಿ) ಮತ ಹಾಕಲು ಅದು ನಮಗೆ ಅವಕಾಶ ನೀಡಲಿಲ್ಲ. ನಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ” ರಾಜೀನಾಮೆ ನೀಡಿದ ಶಾಸಕ ಠಾಕೂರ್ ಹೇಳಿದ್ದಾರೆ.

2012ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ನಲಗಢ ಕ್ಷೇತ್ರವನ್ನು ಗೆದ್ದಿದ್ದ ಠಾಕೂರ್, “ನಾನು ಬಿಜೆಪಿ ಸಿದ್ಧಾಂತದಿಂದ ಬಂದವನು” ಎಂದು ಹೇಳಿದರು. ಎರಡು ಬಾರಿ ಶಾಸಕರಾಗಿದ್ದ ಲಖ್ವಿಂದರ್ ರಾಣಾ ಅವರಿಗೆ ಬಿಜೆಪಿ ಆದ್ಯತೆ ನೀಡಿದ್ದರಿಂದ 2017 ರ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಪಕ್ಷದ ಟಿಕೆಟ್ ನಿರಾಕರಿಸಲಾಯಿತು, ಅವರು ಚುನಾವಣೆಗೆ ಕೆಲವು ದಿನಗಳ ಮೊದಲು ಕೇಸರಿ ಪಕ್ಷಕ್ಕೆ ಬದಲಾಗಿದ್ದರು.

ಆಶಿಶ್ ಶರ್ಮಾ ಅವರನ್ನು ಸಂಪರ್ಕಿಸಿದಾಗ, ಹಮೀರ್‌ಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರನ್ನು ಹಲವಾರು ಸಂದರ್ಭಗಳಲ್ಲಿ ಸಂಪರ್ಕಿಸಿದ್ದು ವ್ಯರ್ಥವಾಯಿತು. ನಾನು ಮುಖ್ಯಮಂತ್ರಿಯನ್ನು ಭೇಟಿಯಾದಾಗಲೆಲ್ಲಾ ಕೇವಲ ಭರವಸೆಯೊಂದಿಗೆ ಹಿಂದಿರುಗಿದೆ. ಅಧಿಕಾರಿಗಳ ಹಸ್ತಕ್ಷೇಪವು ವಿಷಯಗಳನ್ನು ಮತ್ತಷ್ಟು ಕಷ್ಟಕರವಾಗಿಸಿದೆ” ಎಂದು ಅವರು ಹೇಳಿದರು.

ಮೂವರು ಸ್ವತಂತ್ರ ಶಾಸಕರು ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರನ್ನು ಭೇಟಿ ಮಾಡಿದರು. ರಾಜಭವನದಲ್ಲಿ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರನ್ನು ಭೇಟಿ ಮಾಡಿದರು. ನಂತರ ಮೂವರು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರನ್ನು ಭೇಟಿಯಾದರು.

ಅವರನ್ನು ಸಂಪರ್ಕಿಸಿದಾಗ, ಮುಖ್ಯಮಂತ್ರಿ ಸುಖು ರಾಜೀನಾಮೆಗಳ ಬಗ್ಗೆ ಅಜ್ಞಾನವನ್ನು ತೋರಿಸಿದರು. ಬಹುಶಃ ಅವರು ಬಿಜೆಪಿ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತಾರೆ ಎಂದು ಅವರು ಹೇಳಿದರು.

ಕಟ್ ಮೋಷನ್ ಮತ್ತು ಬಜೆಟ್ ಸಮಯದಲ್ಲಿ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ವಿಪ್ ಅನ್ನು ಧಿಕ್ಕರಿಸಿದ ಆರು ಕಾಂಗ್ರೆಸ್ ಸದಸ್ಯರನ್ನು ಸದನದಿಂದ ಅನರ್ಹಗೊಳಿಸಲಾಗಿದೆ. ಮೂವರು ಸ್ವತಂತ್ರ ಶಾಸಕರು ರಾಜೀನಾಮೆ ನೀಡಿದ್ದರಿಂದ 68 ಸದಸ್ಯರ ಸದನದಲ್ಲಿ ಶಾಸಕರ ಬಲ ಇದೀಗ 59ಕ್ಕೆ ಕುಸಿದಿದೆ. ಈಗ ಸ್ಪೀಕರ್ ಸೇರಿದಂತೆ ಕಾಂಗ್ರೆಸ್ 34 ಸದಸ್ಯರನ್ನು ಹೊಂದಿದ್ದರೆ, ಬಿಜೆಪಿ 25 ಶಾಸಕರನ್ನು ಹೊಂದಿದೆ.

ಇದನ್ನೂ ಓದಿ; ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸುವಂತೆ ಅರ್ಜಿ; ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...