Homeಮುಖಪುಟಚುನಾವಣಾ ಬಾಂಡ್ ಖರೀದಿಸಿದ್ದ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಆರೋಪಿ

ಚುನಾವಣಾ ಬಾಂಡ್ ಖರೀದಿಸಿದ್ದ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಆರೋಪಿ

- Advertisement -
- Advertisement -

ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣ ಮತ್ತೆ ಸುದ್ದಿಯಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ವಿಮಲ್ ಪಟ್ನಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿರುವುದು ಚುನವಣಾ ಬಾಂಡ್‌ ಮಾಹಿತಿಯಿಂದ ಬಯಲಾಗಿದೆ.

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ ನವೆಂಬರ್ 26, 2005ರಂದು ನಡೆದಿತ್ತು. ನಂತರ ಅವರ ಪತ್ನಿ ಕೌಸರ್ ಬಿ ವಾಹನದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಮತ್ತು ಅವರ ಸಹಾಯಕ ತುಳಸಿರಾಮ್ ಪ್ರಜಾಪತಿಯನ್ನು ಪೊಲೀಸರು ಕೊಲೆ ಮಾಡಿದ್ದಾರೆ ಎಂದು ಆರೋಪಿಲಾಗಿತ್ತು. ಪ್ರಕರಣದಲ್ಲಿ ಅಂದಿನ ಗುಜರಾತ್ ರಾಜ್ಯದ ಗೃಹ ಸಚಿವ ಮತ್ತು ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗುಜರಾತ್ ಮತ್ತು ರಾಜಸ್ಥಾನದ ಬಿಜೆಪಿಯ ಕೆಲ ನಾಯಕರು ಮತ್ತು ಪೊಲೀಸ್ ಅಧಿಕಾರಿಗಳು ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಆರೋಪವನ್ನು ಎದುರಿಸಿದ್ದಾರೆ. ವಿಚಾರಣೆಯ ವಿವಿಧ ಹಂತಗಳಲ್ಲಿ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದರು.

ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ತನ್ನ ಆರೋಪಪಟ್ಟಿಯಲ್ಲಿ ಸೊಹ್ರಾಬುದ್ದೀನ್ ಶೇಖ್ ರಾಜಸ್ಥಾನದ ಮಾರ್ಬಲ್ ವ್ಯಾಪಾರಿ ವಿಮಲ್ ಪಾಟ್ನಿಯಿಂದ ಹಣ ವಸೂಲಿ ಮಾಡಲು ಯತ್ನಿಸಿದ್ದ ಎಂದು ಹೇಳಿದೆ.

ಉದಯಪುರ ಮೂಲದ ವಂಡರ್‌ ಸಿಮೆಂಟ್‌ ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಮಲ್ ಪಟ್ನಿಗೆ ಸೇರಿದ್ದಾಗಿದೆ. ಈ ಸಂಸ್ಥೆ 2023ರ ಆರ್ಥಿಕ ವರ್ಷದಲ್ಲಿ 250 ಕೋಟಿ ರೂ. ಲಾಭ ಗಳಿಸಿತ್ತು ಹಾಗೂ ಚುನಾವಣಾ ಬಾಂಡ್‌ಗಳ ಮೂಲಕ 20 ಕೋಟಿ ರೂ. ದೇಣಿಗೆ ನೀಡಿತ್ತು. ಅಷ್ಟೇ ಅಲ್ಲದೆ ವಿಮಲ್‌ ಕುಟುಂಬದ ನಾಲ್ಕು ಸದಸ್ಯರಾದ, ಸಂಸ್ಥೆಯ ಅಧ್ಯಕ್ಷ ಅಶೋಕ್‌, ಆಡಳಿತ ನಿರ್ದೇಶಕ ಸುರೇಶ್‌, ನಿರ್ದೇಶಕ ವಿವೇಕ್‌ ಮತ್ತು ಅಧ್ಯಕ್ಷ ವಿನೀತ್‌ 8 ಕೋಟಿ ರೂ. ಚುನಾವಣಾ ಬಾಂಡ್‌ ಮೂಲಕ ದೇಣಿಗೆ ನೀಡಿದ್ದರು.

ಸುಪ್ರೀಂಕೋರ್ಟ್‌ ನಿರ್ದೇಶನದ ಮೇರೆಗೆ ಇತ್ತೀಚೆಗೆ ಮೂರು ಹಂತಗಳಲ್ಲಿ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ನೀಡಿತ್ತು. ಇದರಲ್ಲಿ ಯಾವ ಪಕ್ಷಗಳು ಚುನಾವಣಾ ಬಾಂಡ್‌ ಮೂಲಕ ಎಷ್ಟು ದೇಣಿಗೆಯನ್ನು ಪಡೆದುಕೊಂಡಿದೆ ಎನ್ನುವುದು ಬಯಲಾಗಿತ್ತು. ಇತ್ತೀಚೆಗೆ ಎಡಿಆರ್‌(ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌) ಈ ಕುರಿತು ವರದಿಯನ್ನು ಬಿಡುಗಡೆ ಮಾಡಿತ್ತು ಅದರಲ್ಲಿ ಬಿಜೆಪಿ ಚುನಾವಣಾ ಬಾಂಡ್‌ ಯೋಜನೆ ಜಾರಿಯಲ್ಲಿದ್ದ ಮಾರ್ಚ್‌ 2018ರಿಂದ ಜನವರಿ 2024ರವೆರೆಗೆ ಒಟ್ಟು 7,800 ಕೋಟಿ ದೇಣಿಗೆ ಪಡೆದಿದೆ ಎಂದು ಉಲ್ಲೇಖಿಸಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...