HomeUncategorizedಚುನಾವಣಾ ಬಾಂಡ್‌: ಬಿಜೆಪಿಗೆ ₹170 ಕೋಟಿ ದೇಣಿಗೆ ಕೊಟ್ಟ ಬಳಿಕ ಭೂ ಅವ್ಯವಹಾರ ಪ್ರಕರಣದಲ್ಲಿ 'ಕ್ಲೀನ್...

ಚುನಾವಣಾ ಬಾಂಡ್‌: ಬಿಜೆಪಿಗೆ ₹170 ಕೋಟಿ ದೇಣಿಗೆ ಕೊಟ್ಟ ಬಳಿಕ ಭೂ ಅವ್ಯವಹಾರ ಪ್ರಕರಣದಲ್ಲಿ ‘ಕ್ಲೀನ್ ಚಿಟ್’ ಪಡೆದಿತ್ತು ಡಿಎಲ್‌ಎಫ್‌

- Advertisement -
- Advertisement -

ಸೆಪ್ಟೆಂಬರ್ 2018ರಲ್ಲಿ, ಹರಿಯಾಣ ಪೊಲೀಸರು ಉದ್ಯಮಿ ರಾಬರ್ಟ್ ವಾದ್ರಾ, ರಿಯಲ್ ಎಸ್ಟೇಟ್ ಸಂಸ್ಥೆ ಡಿಎಲ್‌ಎಫ್ ಗ್ರೂಪ್ ಮತ್ತು ಇತರರ ವಿರುದ್ಧ ಗುರುಗ್ರಾಮದಲ್ಲಿ ಭೂ ವ್ಯವಹಾರಗಳಲ್ಲಿ ಭ್ರಷ್ಟಾಚಾರ ಮತ್ತು ವಂಚನೆ ಆರೋಪ ಹೊರಿಸಿದ್ದರು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಅವರ ಹೆಸರು ಕೇಳಿ ಬಂದಿದ್ದ ಭೂ ಅವ್ಯವಹಾರ ಪ್ರಕರಣ 2014 ರ ಲೋಕಸಭೆ ಚುನಾವಣೆಯ ಸಂದರ್ಭ ದೊಡ್ಡ ಮಟ್ಟದಲ್ಲಿ ಪ್ರಚಾರಕ್ಕೆ ಬಂದಿತ್ತು. ಇದು ಬಿಜೆಪಿಯ ಗೆಲುವಿಗೆ ಒಂದು ರೀತಿಯಲ್ಲಿ ಸಹಕಾರಿಯಾಗಿತ್ತು.

ಡಿಎಲ್‌ಎಫ್‌ ವಿರುದ್ಧ ಎಫ್‌ಐಆರ್‌ ದಾಖಲಾದ ಸುಮಾರು ಐದು ವರ್ಷಗಳ ನಂತರ ಪ್ರಕರಣ ತಿರುವು ಪಡೆದಿತ್ತು. ಹರಿಯಾಣದ ಬಿಜೆಪಿ ಸರ್ಕಾರವು ಒಪ್ಪಂದಗಳಲ್ಲಿ ಡಿಎಲ್‌ಎಫ್ ಯಾವುದೇ ಕಾನೂನು ಉಲ್ಲಂಘನೆ ಮಾಡಿರುವುದು ಕಂಡು ಬಂದಿಲ್ಲ ಎಂದು 2023ರ ಏಪ್ರಿಲ್‌ನಲ್ಲಿ ಹೈಕೋರ್ಟ್‌ಗೆ ತಿಳಿಸಿತ್ತು.

ಆದರೆ, ಹರಿಯಾಣ ಸರ್ಕಾರ ಆರೋಪಿಗಳಿಗೆ ‘ಕ್ಲೀನ್ ಚಿಟ್’ ನೀಡಿಲ್ಲ. ಹೆಚ್ಚಿನ ತನಿಖೆಗಾಗಿ ಎಸ್‌ಐಟಿ ರಚನೆ ಮಾಡುವುದಾಗಿ ಘೋಷಿಸಿತ್ತು.

ಅಕ್ಟೋಬರ್ 2019 ಮತ್ತು ನವೆಂಬರ್ 2022 ರ ನಡುವೆ ಡಿಎಲ್‌ಎಫ್‌ ಸಂಸ್ಥೆಯು ಒಟ್ಟು 170 ಕೋಟಿ ರೂಪಾಯಿ ದೇಣಿಗೆಯನ್ನು ಬಿಜೆಪಿಗೆ ನೀಡಿರುವುದು ಚುನಾವಣಾ ಆಯೋಗ ಇತ್ತೀಚೆಗೆ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಿಂದ ಬಹಿರಂಗಗೊಂಡಿದೆ.

ಡಿಎಲ್‌ಎಫ್‌ ಕಮರ್ಷಿಯಲ್ ಡೆವಲಪರ್ಸ್ ಲಿಮಿಟೆಡ್, ಡಿಎಲ್‌ಎಫ್‌ ಗಾರ್ಡನ್ ಸಿಟಿ ಇಂದೋರ್ ಪ್ರೈವೇಟ್ ಲಿಮಿಟೆಡ್ ಮತ್ತು ಡಿಎಲ್‌ಎಫ್‌ ಲಕ್ಸುರಿ ಹೋಮ್ಸ್ ಲಿಮಿಟೆಡ್ ಎಂಬ ಮೂರು ಸಂಸ್ಥೆಗಳ ಮೂಲಕ ಡಿಎಲ್‌ಎಫ್‌ ಗ್ರೂಪ್‌ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ. ಈ ಎಲ್ಲಾ ಬಾಂಡ್‌ಗಳ ಫಲಾನುಭವಿ ಬಿಜೆಪಿ ಮಾತ್ರವಾಗಿದೆ. ಡಿಎಲ್‌ಎಫ್‌ ಇತರ ಪಕ್ಷಗಳಿಗೆ ದೇಣಿಗೆ ನೀಡಿಲ್ಲ.

ಗಮನಾರ್ಹ ಸಂಗತಿಯೆಂದರೆ, ಅಕ್ಟೋಬರ್ 2019 ಮತ್ತು ನವೆಂಬರ್ 2022 ರ ಡಿಎಲ್‌ಎಫ್‌ ಸಂಸ್ಥೆಯು ಒಟ್ಟು 170 ಕೋಟಿ ರೂಪಾಯಿ ದೇಣಿಗೆಯನ್ನು ಬಿಜೆಪಿಗೆ ನೀಡಿತ್ತು. ಮುಂದಿನ ವರ್ಷ ಅಥವಾ ಕೊನೆಯ ದೇಣಿಗೆ ನೀಡಿದ ಸುಮಾರು 4 ತಿಂಗಳ ಬಳಿಕ ಹರಿಯಾಣದ ಬಿಜೆಪಿ ಸರ್ಕಾರ ಡಿಎಲ್‌ಎಫ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ತಿಳಿದು ಬಂದಿದೆ.

ಮಾಹಿತಿ ಕೃಪೆ : Newslaundry

ಇದನ್ನೂ ಓದಿ : ಚುನಾವಣಾ ಬಾಂಡ್: 745 ಕೋಟಿ ದೇಣಿಗೆ ಹೈದರಾಬಾದ್‌ ಮೂಲದ ಕಂಪೆನಿಗಳಿಂದ ಪಡೆದಿದ್ದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...