Homeಮುಖಪುಟರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

ರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

- Advertisement -
- Advertisement -

ಕೇರಳ ಸರ್ಕಾರವು ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ಒಪ್ಪಿಗೆಯನ್ನು ನೀಡಲು ಯಾವುದೇ ಕಾರಣವನ್ನು ನೀಡದೆ ತಡೆ ಹಿಡಿದಿದ್ದಕ್ಕಾಗಿ ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂಕೋರ್ಟ್‌ ಕದ ತಟ್ಟಿದೆ.

ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಸೂದೆಗಳಿಗೆ ಅಂಕಿತ ನೀಡದೆ ಅನಿರ್ದಿಷ್ಟ ವಿಳಂಬ ಉಂಟು ಮಾಡಿ ನಂತರ ಅವುಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ವಿರುದ್ಧವೂ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿತ್ತು.

ಯಾವುದೇ ಕಾರಣ ನೀಡದೆ ನಾಲ್ಕು ವಿಧೇಯಕಗಳಿಗೆ ಒಪ್ಪಿಗೆಯನ್ನು ತಡೆಹಿಡಿಯುವ ರಾಷ್ಟ್ರಪತಿಗಳ ಕಾರ್ಯವು ಅತ್ಯಂತ ನಿರಂಕುಶವಾಗಿದೆ. ನಾಲ್ಕು ಮಸೂದೆಗಳಿಗೆ ಯಾವುದೇ ಕಾರಣ ನೀಡದೆ ಅಂಗೀಕಾರ ತಡೆಹಿಡಿದಿರುವುದು ಸಂವಿಧಾನದ ವಿಧಿ 14, 200 ಮತ್ತು 201ರ ಉಲ್ಲಂಘನೆಯಾಗಿದೆ. ಒಟ್ಟು 7 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಅಂಕಿತ ಹಾಕಲು ಕಳುಹಿಸಿಕೊಡಲಾಗಿತ್ತು. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ, ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಕೇರಳ ಸರ್ಕಾರ ಪರವಾಗಿ ಹಿರಿಯ ವಕೀಲ ಸಿ ಕೆ ಶಶಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಪಾಸ್‌ ಆದ ಬಿಲ್‌ಗಳಿಗೆ ಅಂಕಿತ ಹಾಕದೆ ರಾಜ್ಯಪಾಲರು ಬಾಕಿಯಿಟ್ಟಿದ್ದಾರೆ ಎಂದು ಈ ಮೊದಲು ಪಿಣರಾಯಿ ವಿಜಯನ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 8 ಮಸೂದೆಗಳನ್ನು ಅಂಗೀಕರಿಸದೆ ರಾಜ್ಯಪಾಲರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿತ್ತು. ಇದಲ್ಲದೆ ಮಸೂದೆಗಳನ್ನು ವಿಲೇವಾರಿಗೆ ರಾಜ್ಯಪಾಲರಿಗೆ ಕಾಲಮಿತಿಯನ್ನು ನಿಗದಿಪಡಿಸಲು ನಿರಾಕರಿಸಿದ ಕೇರಳ ಹೈಕೋರ್ಟ್ ತೀರ್ಪಿನ ವಿರುದ್ಧ ಕೂಡ ಮೇಲ್ಮನವಿ ಸಲ್ಲಿಸಲಾಗಿತ್ತು. ನವೆಂಬರ್ 2ರಂದು ಸಲ್ಲಿಸಲಾದ ಅರ್ಜಿಯಲ್ಲಿ ರಾಜ್ಯಪಾಲರು ಸಂವಿಧಾನವನ್ನು ಉಲ್ಲಂಘನೆ ಮಾಡಿದ್ದಾರೆ ಮತ್ತು ಅನಿರ್ದಿಷ್ಟ ಅವಧಿಗೆ ಮಸೂದೆಗಳಿಗೆ ಅಂಕಿತ ಹಾಕದೆ ನಿರಂಕುಶ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಕೇರಳ ಸರಕಾರ ಹೇಳಿತ್ತು.

ಕೇರಳ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗಳನ್ನು ಅಂಕಿತ ಹಾಕದೆ ವಿಳಂಬ ಮಾಡಿರುವ ಬಗ್ಗೆ ಕೇರಳ  ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಮಸೂದೆಗಳನ್ನು ಬಾಕಿ ಇರಿಸಿಕೊಳ್ಳಲು ರಾಜ್ಯಪಾಲರು ಯಾವುದೇ ಕಾರಣವನ್ನು ನೀಡಿಲ್ಲ. ಶಾಸಕಾಂಗ ಅಂಗೀಕರಿಸಿದ ಬಿಲ್‌ಗಳನ್ನು ತಡೆಯಲು ರಾಜ್ಯಪಾಲರು ತಮ್ಮ ಅಧಿಕಾರವನ್ನು ಬಳಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದರು.

ಕೇರಳ ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳುವ ಒಂದು ದಿನ ಮುಂಚಿತವಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 8 ಬಾಕಿ ಉಳಿದಿರುವ ಮಸೂದೆಗಳಲ್ಲಿ 7ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದರು. ಸುಮಾರು 3 ವರ್ಷಗಳಿಂದ ಮಸೂದೆಗಳು ಅಂಕಿತ ಹಾಕದೆ ಬಾಕಿ ಉಳಿದಿತ್ತು. ಲೋಕಾಯುಕ್ತ ತಿದ್ದುಪಡಿ ಮಸೂದೆ, ವಿಶ್ವವಿದ್ಯಾಲಯ ಕಾನೂನು ತಿದ್ದುಪಡಿಗಳ ಮಸೂದೆ-2022 ಮತ್ತು ಅಸ್ತಿತ್ವದಲ್ಲಿರುವ ವಿಶ್ವವಿದ್ಯಾನಿಲಯ ಕಾಯಿದೆಗೆ ತಿದ್ದುಪಡಿ ತರುವ ಕುರಿತ ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಿದ್ದರು.

ಮಸೂದೆಗಳನ್ನು ಬಾಕಿ ಉಳಿಸಿಕೊಳ್ಳುವ ಬದಲು ಏನಾದರೂ ಆಕ್ಷೇಪಾರ್ಹವೆಂದು ಕಂಡು ಬಂದರೆ ಅವುಗಳನ್ನು ಹಿಂದಕ್ಕೆ ಕಳುಹಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಹೇಳಿತ್ತು. ಪಂಜಾಬ್ ಸರ್ಕಾರವು  ರಾಜ್ಯಪಾಲರ ವಿರುದ್ಧ ಸಲ್ಲಿಸಿದ ಅರ್ಜಿ ವಿಚಾರಣೆಯ ವೇಳೆ ಕೇರಳ ರಾಜ್ಯಪಾಲರು ಕೂಡ ಈ ಕುರಿತ ತೀರ್ಪನ್ನು ಓದುವಂತೆ ಸೂಚಿಸಿದ್ದರು.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...