Homeಮುಖಪುಟರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

ರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

- Advertisement -
- Advertisement -

ಕೇರಳ ಸರ್ಕಾರವು ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ಒಪ್ಪಿಗೆಯನ್ನು ನೀಡಲು ಯಾವುದೇ ಕಾರಣವನ್ನು ನೀಡದೆ ತಡೆ ಹಿಡಿದಿದ್ದಕ್ಕಾಗಿ ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂಕೋರ್ಟ್‌ ಕದ ತಟ್ಟಿದೆ.

ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಸೂದೆಗಳಿಗೆ ಅಂಕಿತ ನೀಡದೆ ಅನಿರ್ದಿಷ್ಟ ವಿಳಂಬ ಉಂಟು ಮಾಡಿ ನಂತರ ಅವುಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ವಿರುದ್ಧವೂ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿತ್ತು.

ಯಾವುದೇ ಕಾರಣ ನೀಡದೆ ನಾಲ್ಕು ವಿಧೇಯಕಗಳಿಗೆ ಒಪ್ಪಿಗೆಯನ್ನು ತಡೆಹಿಡಿಯುವ ರಾಷ್ಟ್ರಪತಿಗಳ ಕಾರ್ಯವು ಅತ್ಯಂತ ನಿರಂಕುಶವಾಗಿದೆ. ನಾಲ್ಕು ಮಸೂದೆಗಳಿಗೆ ಯಾವುದೇ ಕಾರಣ ನೀಡದೆ ಅಂಗೀಕಾರ ತಡೆಹಿಡಿದಿರುವುದು ಸಂವಿಧಾನದ ವಿಧಿ 14, 200 ಮತ್ತು 201ರ ಉಲ್ಲಂಘನೆಯಾಗಿದೆ. ಒಟ್ಟು 7 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಅಂಕಿತ ಹಾಕಲು ಕಳುಹಿಸಿಕೊಡಲಾಗಿತ್ತು. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ, ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಕೇರಳ ಸರ್ಕಾರ ಪರವಾಗಿ ಹಿರಿಯ ವಕೀಲ ಸಿ ಕೆ ಶಶಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಪಾಸ್‌ ಆದ ಬಿಲ್‌ಗಳಿಗೆ ಅಂಕಿತ ಹಾಕದೆ ರಾಜ್ಯಪಾಲರು ಬಾಕಿಯಿಟ್ಟಿದ್ದಾರೆ ಎಂದು ಈ ಮೊದಲು ಪಿಣರಾಯಿ ವಿಜಯನ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 8 ಮಸೂದೆಗಳನ್ನು ಅಂಗೀಕರಿಸದೆ ರಾಜ್ಯಪಾಲರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿತ್ತು. ಇದಲ್ಲದೆ ಮಸೂದೆಗಳನ್ನು ವಿಲೇವಾರಿಗೆ ರಾಜ್ಯಪಾಲರಿಗೆ ಕಾಲಮಿತಿಯನ್ನು ನಿಗದಿಪಡಿಸಲು ನಿರಾಕರಿಸಿದ ಕೇರಳ ಹೈಕೋರ್ಟ್ ತೀರ್ಪಿನ ವಿರುದ್ಧ ಕೂಡ ಮೇಲ್ಮನವಿ ಸಲ್ಲಿಸಲಾಗಿತ್ತು. ನವೆಂಬರ್ 2ರಂದು ಸಲ್ಲಿಸಲಾದ ಅರ್ಜಿಯಲ್ಲಿ ರಾಜ್ಯಪಾಲರು ಸಂವಿಧಾನವನ್ನು ಉಲ್ಲಂಘನೆ ಮಾಡಿದ್ದಾರೆ ಮತ್ತು ಅನಿರ್ದಿಷ್ಟ ಅವಧಿಗೆ ಮಸೂದೆಗಳಿಗೆ ಅಂಕಿತ ಹಾಕದೆ ನಿರಂಕುಶ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಕೇರಳ ಸರಕಾರ ಹೇಳಿತ್ತು.

ಕೇರಳ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗಳನ್ನು ಅಂಕಿತ ಹಾಕದೆ ವಿಳಂಬ ಮಾಡಿರುವ ಬಗ್ಗೆ ಕೇರಳ  ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಮಸೂದೆಗಳನ್ನು ಬಾಕಿ ಇರಿಸಿಕೊಳ್ಳಲು ರಾಜ್ಯಪಾಲರು ಯಾವುದೇ ಕಾರಣವನ್ನು ನೀಡಿಲ್ಲ. ಶಾಸಕಾಂಗ ಅಂಗೀಕರಿಸಿದ ಬಿಲ್‌ಗಳನ್ನು ತಡೆಯಲು ರಾಜ್ಯಪಾಲರು ತಮ್ಮ ಅಧಿಕಾರವನ್ನು ಬಳಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದರು.

ಕೇರಳ ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳುವ ಒಂದು ದಿನ ಮುಂಚಿತವಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 8 ಬಾಕಿ ಉಳಿದಿರುವ ಮಸೂದೆಗಳಲ್ಲಿ 7ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದರು. ಸುಮಾರು 3 ವರ್ಷಗಳಿಂದ ಮಸೂದೆಗಳು ಅಂಕಿತ ಹಾಕದೆ ಬಾಕಿ ಉಳಿದಿತ್ತು. ಲೋಕಾಯುಕ್ತ ತಿದ್ದುಪಡಿ ಮಸೂದೆ, ವಿಶ್ವವಿದ್ಯಾಲಯ ಕಾನೂನು ತಿದ್ದುಪಡಿಗಳ ಮಸೂದೆ-2022 ಮತ್ತು ಅಸ್ತಿತ್ವದಲ್ಲಿರುವ ವಿಶ್ವವಿದ್ಯಾನಿಲಯ ಕಾಯಿದೆಗೆ ತಿದ್ದುಪಡಿ ತರುವ ಕುರಿತ ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಿದ್ದರು.

ಮಸೂದೆಗಳನ್ನು ಬಾಕಿ ಉಳಿಸಿಕೊಳ್ಳುವ ಬದಲು ಏನಾದರೂ ಆಕ್ಷೇಪಾರ್ಹವೆಂದು ಕಂಡು ಬಂದರೆ ಅವುಗಳನ್ನು ಹಿಂದಕ್ಕೆ ಕಳುಹಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಹೇಳಿತ್ತು. ಪಂಜಾಬ್ ಸರ್ಕಾರವು  ರಾಜ್ಯಪಾಲರ ವಿರುದ್ಧ ಸಲ್ಲಿಸಿದ ಅರ್ಜಿ ವಿಚಾರಣೆಯ ವೇಳೆ ಕೇರಳ ರಾಜ್ಯಪಾಲರು ಕೂಡ ಈ ಕುರಿತ ತೀರ್ಪನ್ನು ಓದುವಂತೆ ಸೂಚಿಸಿದ್ದರು.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...