Homeಮುಖಪುಟಇಡಿ ಆರೋಪಿಗಳನ್ನು ಬಂಧಿಸುವಾಗ ಲಿಖಿತ ರೂಪದಲ್ಲಿ ಕಾರಣ ನೀಡಬೇಕು: ಸುಪ್ರೀಂ ಕೋರ್ಟ್‌

ಇಡಿ ಆರೋಪಿಗಳನ್ನು ಬಂಧಿಸುವಾಗ ಲಿಖಿತ ರೂಪದಲ್ಲಿ ಕಾರಣ ನೀಡಬೇಕು: ಸುಪ್ರೀಂ ಕೋರ್ಟ್‌

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಅವರಿಗೆ ಬಂಧನದ ಕಾರಣವನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನೀಡಿದ್ದ ತೀರ್ಪಿನ ಪುನರ್‌ಪರಿಶೀಲನೆಯನ್ನು ಕೋರಿ ಕೇಂದ್ರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

“ಪುನರ್‌ಪರಿಶೀಲನೆ ಅರ್ಜಿಗಳು ಮತ್ತು ಸಂಬಂಧಿತ ದಾಖಲೆಗಳನ್ನು ನಾವು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ” ಎಂದು ಮಂಗಳವಾರ ವಿಚಾರಣೆ ಸಂದರ್ಭ ಹೇಳಿದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಸಂಜಯ ಕುಮಾರ್ ಅವರ ಪೀಠ,‌ “ತೀರ್ಪಿನ ಪುನರ್‌ಪರಿಶೀಲನೆ ಅಗತ್ಯವಿರುವ ಯಾವುದೇ ದೋಷಗಳು ಅದರಲ್ಲಿ ನಮಗೆ ಕಂಡುಬಂದಿಲ್ಲ” ಎಂದಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯಡಿ ಇಡಿಯಿಂದ ಬಂಧನಕ್ಕೊಳಗಾದವರು ತಮ್ಮ ಬಂಧನಕ್ಕೆ ಕಾರಣಗಳನ್ನು ತಿಳಿದುಕೊಳ್ಳುವ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ 2023ರ ಅಕ್ಟೋಬರ್ 3ರಂದು ನೀಡಿದ್ದ ತೀರ್ಪಿನಲ್ಲಿ ತಿಳಿಸಿತ್ತು.

ಬಂಧನದ ಬಳಿಕ ಕಾಯ್ದೆಯ ಕಲಂ 45ರಡಿ ಜಾಮೀನಿಗಾಗಿ ಕಠಿಣ ಷರತ್ತುಗಳನ್ನು ಪೂರೈಸಬೇಕಾಗುವುದರಿಂದ ಆರೋಪಿಗಳು ತಮ್ಮ ಬಂಧನಕ್ಕೆ ಕಾರಣಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಕೋರ್ಟ್ ಹೇಳಿತ್ತು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನು ಹೊತ್ತಿರುವ ಒ3ಒರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾದ ಪಂಕಜ್‌ ಬನ್ಸಾಲ್ ಮತ್ತು ಬಸಂತ್‌ ಬನ್ಸಾಲ್ ಅವರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿತ್ತು.

ತಮ್ಮ ಬಂಧನವನ್ನು ರದ್ದುಗೊಳಿಸಲು ನಿರಾಕರಿಸಿದ್ದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶವನ್ನು ಪಂಕಜ್‌ ಬನ್ಸಾಲ್ ಮತ್ತು ಬಸಂತ್‌ ಬನ್ಸಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರ ಮೇಲ್ಮನವಿಗಳನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುವಂತೆ ಆದೇಶಿಸಿತ್ತು.

ಇದನ್ನೂ ಓದಿ : ಇಡಿ ಬಂಧನ, ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...