Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ...

ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮಧ್ಯಪ್ರದೇಶದ ರಾಜ್‌ಗಢದಿಂದ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮತ್ತು ವಾರಣಾಸಿಯಿಂದ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರನ್ನು ಕಣಕ್ಕಿಳಿಸಿದೆ.

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ್ ರೈ ಕಣಕ್ಕಿಳಿಯಲಿದ್ದಾರೆ. ಮಾಜಿ ಹಣಕಾಸು ಸಚಿವರ ಪುತ್ರ ಹಾಗೂ ಸಂಸದ ಕಾರ್ತಿ ಚಿದಂಬರಂ ಅವರನ್ನು ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಬಿಎಸ್‌ಪಿ ಮಾಜಿ ನಾಯಕ ಡ್ಯಾನಿಶ್ ಅಲಿ ಉತ್ತರಪ್ರದೇಶದ ಅಮ್ರೋಹಾದಿಂದ ಸ್ಪರ್ಧಿಸಲಿದ್ದಾರೆ. ಇಮ್ರಾನ್ ಮಸೂದ್ ಸಹರಾನ್‌ಪುರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಅಲೋಕ್ ಮಿಶ್ರಾ ಕಾನ್ಪುರದಿಂದ ಕಣಕ್ಕಿಳಿದಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ನೀಡಲಾಗಿದೆ. ರಾಜಸ್ಥಾನದ ನಾಗೌರ್‌ ಕ್ಷೇತ್ರವನ್ನು ಮೈತ್ರಿಕೂಟದ ಲೋಕ ತಾಂತ್ರಿಕ್‌ ಪಾರ್ಟಿ (RLP) ಗೆ ನೀಡಲಾಗಿದೆ.

ಪಟ್ಟಿಯು ಅಸ್ಸಾಂ, ಅಂಡಮಾನ್, ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ, ಮಿಜೋರಾಂ, ರಾಜಸ್ಥಾನ, ಮಣಿಪುರ, ತಮಿಳುನಾಡು, ಉತ್ತರಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ಅಭ್ಯರ್ಥಿಗಳ ಹೆಸರನ್ನು ಒಳಗೊಂಡಿದೆ.

ಅಸ್ಸಾಂನ ಲಖೀಂಪುರದಿಂದ ಉದಯ್‌ ಶಂಖರ್‌, ಜಮ್ಮು ಮತ್ತು ಕಾಶ್ಮೀರದ ಉಧಂಪುರದಿಂದ ಹೊಸದಾಗಿ ಸೇರ್ಪಡೆಗೊಂಡ ನಾಯಕ ಲಾಲ್ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿದೆ. ವಿರುಧನಗರದಿಂದ ಮಾಣಿಕ್ಕಂ ಟ್ಯಾಗೋರ್ ಮತ್ತು ಕರೂರ್‌ನಿಂದ ಎಸ್‌ ಜೋತಿಮಣಿ ಅವರನ್ನು  ಕಾಂಗ್ರೆಸ್‌ ಕಣಕ್ಕಿಳಿಸಿದೆ.

ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಘೋಷಿಸಿಲ್ಲ. ಪ್ರಮುಖವಾಗಿ, ಸಮಾಜವಾದಿ ಪಕ್ಷದೊಂದಿಗೆ ಪಕ್ಷವು ಮೈತ್ರಿ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಎರಡು ದಿನಗಳ ಹಿಂದೆ ಗುರುವಾರ, ಕಾಂಗ್ರೆಸ್‌ ತನ್ನ 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಪಶ್ಚಿಮ ಬಂಗಾಳದ ಬಹರಂಪುರದಿಂದ ಅಧೀರ್ ರಂಜನ್ ಚೌಧರಿ, ಚಿಕ್ಕೋಡಿಯಿಂದ ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್‌ ನೀಡಲಾಗಿದೆ, ಗುಲ್ಬರ್ಗದಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮಾರ್ಚ್ 8ರಂದು ಬಿಡುಗಡೆಯಾದ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 39 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಿಸಿತ್ತು. ಅದರಲ್ಲಿ ರಾಹುಲ್ ಗಾಂಧಿ, ಡಿಕೆ ಸುರೇಶ್ ಮತ್ತು ಶಶಿ ತರೂರ್ ಟಿಕೆಟ್‌ ಪಡೆದುಕೊಂಡಿದ್ದರು. ಮಾರ್ಚ್ 12ರಂದು ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು. ಪಟ್ಟಿಯಲ್ಲಿ 43 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿತ್ತು.

 

 

ಇದನ್ನು ಓದಿ:ಲೋಕಸಭೆ ಚುನಾವಣೆ: ಜೆಡಿಎಸ್‌ಗೆ ಮೂರು ಕ್ಷೇತ್ರಗಳನ್ನು ಬಿಟ್ಟು ಕೊಟ್ಟ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...