Homeಕರ್ನಾಟಕತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಕೊಲೆ: ನಕಲಿ ಚಿನ್ನದ ವಂಚನಾ ಜಾಲದಿಂದ ಕೃತ್ಯ?

ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಕೊಲೆ: ನಕಲಿ ಚಿನ್ನದ ವಂಚನಾ ಜಾಲದಿಂದ ಕೃತ್ಯ?

- Advertisement -
- Advertisement -

ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆಯಾಗಿತ್ತು. ಈ ಕುರಿತ ತನಿಖೆಯ ಹಂತದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಕುಪ್ರಸಿದ್ಧ ನಕಲಿ ಚಿನ್ನದ ವಂಚನಾ ಜಾಲ ಈ ಭಯಾನಕ ಕೃತ್ಯವನ್ನು ಎಸಗಿರುವ ಶಂಕೆ ಮೂಡಿದೆ.

ಘಟನೆಯಲ್ಲಿ ಸಾಹುಲ್ ಹಮೀದ್ (45), ಇಸಾಕ್ (56) ಹಾಗೂ ಸಿದ್ದಿಕ್ (34) ಎಂಬುವವರು ಮೃತರು. ಸಾಹುಲ್ ಹಮೀದ್, ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾನ್ ನಿವಾಸಿಯಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಇಸಾಕ್ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿಯಾಗಿದ್ದು, ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದರು ಮತ್ತು ಸಿದ್ದಿಕ್ ಶಿರ್ಲಾಲು ಗ್ರಾಮದ ನಿವಾಸಿಯಾಗಿದ್ದರು.

ಈ ಮೂವರು 12 ದಿನಗಳ ಹಿಂದೆ ಬೆಳ್ತಂಗಡಿ ಮದ್ದಡ್ಕದ ರಫೀಕ್ ಎಂಬವರ ಕಾರನ್ನು ಬಾಡಿಗೆ ಪಡೆದುಕೊಂಡು ತುಮಕೂರಿಗೆ ಆಗಮಿಸಿದ್ದರು. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ, ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ ಎಂದು ದುಷ್ಕರ್ಮಿಗಳು ಸುಳ್ಳು ಹೇಳಿ ಹಣ ದೋಚುವ ಪ್ಲಾನ್ ಮಾಡಿ ಈ ಮೂವರನ್ನು ತುಮಕೂರಿಗೆ ಕರೆಸಿಕೊಂಡಿದ್ದರು. ಗುರುವಾರ ಸಂಜೆವರೆಗೂ ಕುಟುಂಬಸ್ಥರ ಜೊತೆ ಸಂಪರ್ಕದಲ್ಲಿದ್ದ ಇಸಾಕ್​ನ ಮೊಬೈಲ್ ಗುರುವಾರ ರಾತ್ರಿ ಸ್ವಿಚ್‌ ಆಫ್ ಆಗಿತ್ತು. ಬಳಿಕ ಕೈಕಾಲು ಕಟ್ಟಿ ಹಾಕಿ ಕೊಲೆ ಮಾಡಿ ಗುರತು ಪತ್ತೆಯಾಗದಂತೆ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. ಮೃತದೇಹ ಸುಟ್ಟು ಕರಕಲಾಗಿದ್ದು, ಇಬ್ಬರ ಮೃತದೇಹ ಕಾರಿನ ಢಿಕ್ಕಿಯಲ್ಲಿ ಮತ್ತು ಓರ್ವನ ಮೃತದೇಹ ಕಾರಿನ ಮಧ್ಯದಲ್ಲಿತ್ತು ಎಂದು ತಿಳಿದು ಬಂದಿದೆ.

ಮೂವರ ಶವ ಕಾರಿನಲ್ಲಿ ಪತ್ತೆಯಾಗಿರುವ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರು, ದಕ್ಷಿಣ ಕನ್ನಡ ಜಿಲ್ಲೆಯ ರಫೀಕ್ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಅವರನ್ನು ಪೊಲೀಸರು ವಿಚಾರಿಸಿದಾಗ ಅವರು ಇಸಾಕ್​ ಎಂಬಾತನಿಗೆ 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಇದರಿಂದಾಗಿ ಮೃತರ ಗುರುತು ಪತ್ತೆಕಾರ್ಯ ಸುಲಭವಾಗಿದೆ.

ಪೊಲೀಸರು ವಶಕ್ಕೆ ಪಡೆದುಕೊಂಡಿರುವ ದುಷ್ಕರ್ಮಿಗಳ ಹೆಸರನ್ನು ಈವರೆಗೆ ಬಹಿರಂಗಪಡಿಸಲಾಗಿಲ್ಲ. ಚಿನ್ನದ ಆಮಿಷವೊಡ್ಡಿ ಮೂವರನ್ನು ತುಮಕೂರಿಗೆ ಕರೆದು ಹಣ ದೋಚಿ ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇನ್ನು ಚಿನ್ನದ ಡೀಲ್‌ಗೆ ಸಂಬಂಧಿಸಿದ್ದು ಎಂದು ಹೇಳಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಆಡಿಯೋದಲ್ಲಿ ಚಿನ್ನದ ವ್ಯವಹಾರದ ಬಗ್ಗೆ ಮಾತನಾಡುವ, ಹಣಕಾಸಿನ ಬಗ್ಗೆ ಮಾತನಾಡುವುದು, 250ಗ್ರಾಂ ಡೀಲ್‌ ಮಾಡುವುದು ಸೆರೆಯಾಗಿದೆ.

ಯುಟಿ ಖಾದರ್‌ ಪ್ರತಿಕ್ರಿಯೆ:

ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಬೆಳಕಿಗೆ ಬಂದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಕೊಲೆ ಕೃತ್ಯಕ್ಕೆ  ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಆಘಾತವನ್ನು ವ್ಯಕ್ತಪಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಐಜಿಪಿ ರವಿಕಾಂತೇಗೌಡ ಹಾಗೂ ತುಮಕೂರು ಎಸ್ಪಿ ಜೊತೆ ಮಾತುಕತೆ ನಡೆಸಿದ್ದೇನೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಯ ವೈಫಲ್ಯ: ಭಾಸ್ಕರ್‌ ಪ್ರಸಾದ್

ನಕಲಿ ಚಿನ್ನದ ವಂಚನಾ ಜಾಲ ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಹಾಕಿ ಹತ್ಯೆ ಮಾಡಿರುವ ಘಟನೆ ರಾಜ್ಯದ ಗುಪ್ತಚರ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯವಾಗಿದೆ. ಇಂತಹ ಜಾಲಗಳ ಬಗೆಗಿನ ವರದಿಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದರೂ ಸಹ, ಜನರು ಮತ್ತೆ ಮತ್ತೆ ಅಂತಹದ್ದೇ ಜಾಲಗಳ ಆಮಿಷಗಳಿಗೆ ಒಳಗಾಗಿ ಹಣ ಮತ್ತು ಜೀವ ಎರಡನ್ನೂ ಕಳೆದುಕೊಳ್ಳುತ್ತಿರುವುದು ದುರಂತ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ಸರ್ಕಾರ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಇದರ ಹಿಂದಿರುವ ಗುಂಪು ಅಥವಾ ವ್ಯಕ್ತಿಗಳನ್ನು ಶೀಘ್ರವೇ ಬಂಧಿಸುವ ಮೂಲಕ ನೊಂದ ಕುಟುಂಬಗಳಿಗೆ ನ್ಯಾಯ ಕೊಡಿಸಬೇಕು, ಈ ಜಾಲದ ವಂಚನೆ ಮತ್ತು ಕೌರ್ಯಕ್ಕೆ ಇನ್ನೊಂದಷ್ಟು ಜನರು ಸಿಲುಕಿಕೊಳ್ಳದಂತೆ ನೋಡಿಕೊಳ್ಳಬೇಕು. ಈ ಘಟನೆಯಲ್ಲಿ ಜೀವ ಕಳೆದುಕೊಂಡಿರುವವರ ಕುಟುಂಬಗಳಿಗೆ ತಕ್ಷಣ ತಲಾ 50 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಭಾಸ್ಕರ್‌ ಪ್ರಸಾದ್‌ ಆಗ್ರಹಿಸಿದ್ದಾರೆ.

ಇದಲ್ಲದೆ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಬ್ದುಲ್ ಮಜೀದ್, ತುಮಕೂರಿನ ಬಳಿಯ ಹಳ್ಳಿ ಒಂದರಲ್ಲಿ, ಬೆಳ್ತಂಗಡಿ ಮೂಲದ ಮೂವರು ಕಾರೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಅತ್ಯಂತ ಆತಂಕಕಾರಿಯಾದ ಘಟನೆಯಾಗಿದೆ. ಅತೀ ಸಂಶಯಾಸ್ಪದ ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ತುಮಕೂರು ಎಸ್ಪಿ ಮತ್ತು ಕರ್ನಾಟಕದ ಡಿಜಿಪಿಗೆ ಅಗ್ರಹಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...