Homeಮುಖಪುಟಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

ಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

- Advertisement -
- Advertisement -

ಆಮ್ ಆದ್ಮಿ ಪಕ್ಷದ ದೆಹಲಿ ಅಬಕಾರಿ ನೀತಿ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾದ ಶರತ್ ಚಂದ್ರ ರೆಡ್ಡಿಯಿಂದ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 60 ಕೋಟಿ ರೂ. ಹಣವನ್ನು ಪಡೆದಿದೆ ಎಂದು ಆರೋಪಿಸಿದ ಒಂದು ದಿನದ ನಂತರ, ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧದ ಬಗ್ಗೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಭಾನುವಾರ ಪ್ರಶ್ನೆಗಳನ್ನು ಕೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, ‘ಅರಬಿಂದೋ ಫಾರ್ಮಾ’ ಎಂಬ ಪ್ರಸಿದ್ಧ ಔಷಧ ಕಂಪನಿಯ ಮಾಲಕ ರೆಡ್ಡಿಯಿಂದ ಬಿಜೆಪಿ ಏಕೆ ಹಣ ಪಡೆದಿದೆ ಎಂಬ ಬಗ್ಗೆ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ನಿನ್ನೆ ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಬಾಂಡ್‌ ಕುರಿತ ದಾಖಲೆಗಳನ್ನು ತೋರಿಸಿದ್ದು, ಇದರಲ್ಲಿ ಬಾಂಡ್ ಖರೀದಿಸಿದವರ ಹೆಸರು, ಮುಖಬೆಲೆಗಳು, ಖರೀದಿಸಿದ ದಿನಾಂಕ ಮತ್ತು ಇತರ ವಿವರಗಳಿವೆ ಮತ್ತು ರೆಡ್ಡಿ ಅವರ ಮೂರು ಕಂಪನಿಗಳು ಬಿಜೆಪಿಗೆ ಸುಮಾರು 60 ಕೋಟಿ ಹಣವನ್ನು ನೀಡಿವೆ ಎಂದು ಹೇಳಿಕೊಂಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ಕೋರಿ ಎಎಪಿ ಪಕ್ಷ ಪತ್ರ ಬರೆದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.

ನಾವು ಪ್ರಕರಣದಲ್ಲಿ ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಲು ಬಯಸುತ್ತೇವೆ ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧವೇನು? ಬಿಜೆಪಿ ಪಕ್ಷದಿಂದ ಯಾರು ಅವರನ್ನು ಭೇಟಿ ಮಾಡಿದರು ಮತ್ತು ಅವರ ಭೇಟಿ ವೇಳೆ ಏನು ಸಂಭಾಷಣೆ ನಡೆಸಿದ್ದಾರೆ? ಸಿಬಿಐ ಮತ್ತು ಇಡಿಗೆ ರೆಡ್ಡಿಯಿಂದ ಹಣ ಪಡೆದ ಬಗ್ಗೆ ಏಕೆ ಮಾಹಿತಿ ನೀಡಲಿಲ್ಲ? ಎಂದು ಭಾರದ್ವಾಜ್  ಪ್ರಶ್ನಿಸಿದ್ದಾರೆ.

ರೆಡ್ಡಿ ಅವರನ್ನು ಅಬಕಾರಿ ಹಗರಣದ ಕಿಂಗ್‌ಪಿನ್ ಮತ್ತು ಅತಿದೊಡ್ಡ ಫಲಾನುಭವಿ ಎಂದು ಇಡಿ ಕರೆದಿದೆ ಎಂದು ಭಾರದ್ವಾಜ್ ಈ ಹಿಂದೆ ಹೇಳಿದ್ದರು ಮತ್ತು ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವು ರೆಡ್ಡಿ ಹೇಳಿಕೆಯನ್ನು ಆಧರಿಸಿದೆ ಎಂದು ಹೇಳಿದ್ದರು.

ಎಎಪಿ ಪ್ರಕಾರ, ಈಗ ರದ್ದಾದ ದೆಹಲಿ ಮದ್ಯ ನೀತಿಯ ಅಡಿಯಲ್ಲಿ ರೆಡ್ಡಿ ದೆಹಲಿಯ ಕೆಲವು ವಲಯಗಳಲ್ಲಿ ಕೆಲವು ಮದ್ಯದ ಅಂಗಡಿಗಳನ್ನು ಪಡೆದಿದ್ದರು ಮತ್ತು ಅವರನ್ನು ನವೆಂಬರ್ 9, 2022ರಂದು ವಿಚಾರಣೆಗೆ ಕರೆಯಲಾಯಿತು. ಮರುದಿನ ಅವರನ್ನು ಇಡಿ ಬಂಧಿಸಿತ್ತು. ಬಳಿಕ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಲು ಪ್ರಾರಂಭಿಸಿದರು, ಅವರಿಗೆ ಜಾಮೀನು ಸಿಕ್ಕಿತು ಎಂದು ಭಾರದ್ವಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಜಾಸ್ಮಿನ್ ಶಾ ಮಾತನಾಡಿ, ಈ ಪ್ರಕರಣದಲ್ಲಿ ರೆಡ್ಡಿಯನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಯಿತು, ನಂತರ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದರು. ಅವರು ಬಿಜೆಪಿ ಒತ್ತಡದಲ್ಲಿ ಹೇಳಿಕೆ ಬದಲಾಯಿಸಿದ್ದು ಮಾತ್ರವಲ್ಲದೆ ಅವರಿಂದ ಕೋಟಿಗಟ್ಟಲೆ ಹಣವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಇತ್ತೀಚಿನ ವಿವರಗಳೊಂದಿಗೆ ಚುನಾವಣಾ ಬಾಂಡ್ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಇತ್ತೀಚಿನ ದಾನಿಗಳ ಪಟ್ಟಿಯು ಬಾಂಡ್‌ ಖರೀದಿದಾರರ ಹೆಸರು, ಅದರ ಮುಖಬೆಲೆ, ನಿರ್ದಿಷ್ಟ ಸಂಖ್ಯೆ, ಸ್ವೀಕರಿಸಿದವರ ಪಟ್ಟಿಯ ಜೊತೆಗೆ ಅದನ್ನು ಎನ್‌ಕ್ಯಾಶ್ ಮಾಡಿದ ಪಕ್ಷದ ಹೆಸರನ್ನು ಹೊಂದಿತ್ತು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ವಿರೋಧಿಸಿ ಮಾ.31ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಒಕ್ಕೂಟದಿಂದ ಬೃಹತ್‌ ರ್‍ಯಾಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...