Homeಮುಖಪುಟಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

ಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

- Advertisement -
- Advertisement -

ಆಮ್ ಆದ್ಮಿ ಪಕ್ಷದ ದೆಹಲಿ ಅಬಕಾರಿ ನೀತಿ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾದ ಶರತ್ ಚಂದ್ರ ರೆಡ್ಡಿಯಿಂದ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 60 ಕೋಟಿ ರೂ. ಹಣವನ್ನು ಪಡೆದಿದೆ ಎಂದು ಆರೋಪಿಸಿದ ಒಂದು ದಿನದ ನಂತರ, ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧದ ಬಗ್ಗೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಭಾನುವಾರ ಪ್ರಶ್ನೆಗಳನ್ನು ಕೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, ‘ಅರಬಿಂದೋ ಫಾರ್ಮಾ’ ಎಂಬ ಪ್ರಸಿದ್ಧ ಔಷಧ ಕಂಪನಿಯ ಮಾಲಕ ರೆಡ್ಡಿಯಿಂದ ಬಿಜೆಪಿ ಏಕೆ ಹಣ ಪಡೆದಿದೆ ಎಂಬ ಬಗ್ಗೆ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ನಿನ್ನೆ ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಬಾಂಡ್‌ ಕುರಿತ ದಾಖಲೆಗಳನ್ನು ತೋರಿಸಿದ್ದು, ಇದರಲ್ಲಿ ಬಾಂಡ್ ಖರೀದಿಸಿದವರ ಹೆಸರು, ಮುಖಬೆಲೆಗಳು, ಖರೀದಿಸಿದ ದಿನಾಂಕ ಮತ್ತು ಇತರ ವಿವರಗಳಿವೆ ಮತ್ತು ರೆಡ್ಡಿ ಅವರ ಮೂರು ಕಂಪನಿಗಳು ಬಿಜೆಪಿಗೆ ಸುಮಾರು 60 ಕೋಟಿ ಹಣವನ್ನು ನೀಡಿವೆ ಎಂದು ಹೇಳಿಕೊಂಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ಕೋರಿ ಎಎಪಿ ಪಕ್ಷ ಪತ್ರ ಬರೆದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.

ನಾವು ಪ್ರಕರಣದಲ್ಲಿ ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಲು ಬಯಸುತ್ತೇವೆ ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧವೇನು? ಬಿಜೆಪಿ ಪಕ್ಷದಿಂದ ಯಾರು ಅವರನ್ನು ಭೇಟಿ ಮಾಡಿದರು ಮತ್ತು ಅವರ ಭೇಟಿ ವೇಳೆ ಏನು ಸಂಭಾಷಣೆ ನಡೆಸಿದ್ದಾರೆ? ಸಿಬಿಐ ಮತ್ತು ಇಡಿಗೆ ರೆಡ್ಡಿಯಿಂದ ಹಣ ಪಡೆದ ಬಗ್ಗೆ ಏಕೆ ಮಾಹಿತಿ ನೀಡಲಿಲ್ಲ? ಎಂದು ಭಾರದ್ವಾಜ್  ಪ್ರಶ್ನಿಸಿದ್ದಾರೆ.

ರೆಡ್ಡಿ ಅವರನ್ನು ಅಬಕಾರಿ ಹಗರಣದ ಕಿಂಗ್‌ಪಿನ್ ಮತ್ತು ಅತಿದೊಡ್ಡ ಫಲಾನುಭವಿ ಎಂದು ಇಡಿ ಕರೆದಿದೆ ಎಂದು ಭಾರದ್ವಾಜ್ ಈ ಹಿಂದೆ ಹೇಳಿದ್ದರು ಮತ್ತು ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವು ರೆಡ್ಡಿ ಹೇಳಿಕೆಯನ್ನು ಆಧರಿಸಿದೆ ಎಂದು ಹೇಳಿದ್ದರು.

ಎಎಪಿ ಪ್ರಕಾರ, ಈಗ ರದ್ದಾದ ದೆಹಲಿ ಮದ್ಯ ನೀತಿಯ ಅಡಿಯಲ್ಲಿ ರೆಡ್ಡಿ ದೆಹಲಿಯ ಕೆಲವು ವಲಯಗಳಲ್ಲಿ ಕೆಲವು ಮದ್ಯದ ಅಂಗಡಿಗಳನ್ನು ಪಡೆದಿದ್ದರು ಮತ್ತು ಅವರನ್ನು ನವೆಂಬರ್ 9, 2022ರಂದು ವಿಚಾರಣೆಗೆ ಕರೆಯಲಾಯಿತು. ಮರುದಿನ ಅವರನ್ನು ಇಡಿ ಬಂಧಿಸಿತ್ತು. ಬಳಿಕ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಲು ಪ್ರಾರಂಭಿಸಿದರು, ಅವರಿಗೆ ಜಾಮೀನು ಸಿಕ್ಕಿತು ಎಂದು ಭಾರದ್ವಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಜಾಸ್ಮಿನ್ ಶಾ ಮಾತನಾಡಿ, ಈ ಪ್ರಕರಣದಲ್ಲಿ ರೆಡ್ಡಿಯನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಯಿತು, ನಂತರ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದರು. ಅವರು ಬಿಜೆಪಿ ಒತ್ತಡದಲ್ಲಿ ಹೇಳಿಕೆ ಬದಲಾಯಿಸಿದ್ದು ಮಾತ್ರವಲ್ಲದೆ ಅವರಿಂದ ಕೋಟಿಗಟ್ಟಲೆ ಹಣವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಇತ್ತೀಚಿನ ವಿವರಗಳೊಂದಿಗೆ ಚುನಾವಣಾ ಬಾಂಡ್ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಇತ್ತೀಚಿನ ದಾನಿಗಳ ಪಟ್ಟಿಯು ಬಾಂಡ್‌ ಖರೀದಿದಾರರ ಹೆಸರು, ಅದರ ಮುಖಬೆಲೆ, ನಿರ್ದಿಷ್ಟ ಸಂಖ್ಯೆ, ಸ್ವೀಕರಿಸಿದವರ ಪಟ್ಟಿಯ ಜೊತೆಗೆ ಅದನ್ನು ಎನ್‌ಕ್ಯಾಶ್ ಮಾಡಿದ ಪಕ್ಷದ ಹೆಸರನ್ನು ಹೊಂದಿತ್ತು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ವಿರೋಧಿಸಿ ಮಾ.31ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಒಕ್ಕೂಟದಿಂದ ಬೃಹತ್‌ ರ್‍ಯಾಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...