Homeಮುಖಪುಟಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಅನುಕೂಲ; ನುಡಿದಂತೆ ನಡೆದ ಪಕ್ಷ ಗೆಲ್ಲಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಅನುಕೂಲ; ನುಡಿದಂತೆ ನಡೆದ ಪಕ್ಷ ಗೆಲ್ಲಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ‘ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು, ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ’ ಎಂದರು.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ‘ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ ₹36000 ಕೋಟಿ ಹಾಗೂ ಮುಂದಿನ ವರ್ಷ ₹52009 ಕೋಟಿ ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ’ ಎಂದರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದ್ದು, ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.

ಶಕ್ತಿ ಯೋಜನೆ ಹೊರತುಪಡಿಸಿದರೆ ಯಾವುದೇ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡುತ್ತಾ, ‘ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. 2018 ರಲ್ಲಿ ಬಿಜೆಪಿಯವರು ನೀಡಿದ 600 ಭರವಸೆಗಳಲ್ಲಿ ಶೇ. 10 ರಷ್ಟನ್ನೂ ಈಡೇರಿಸಲಿಲ್ಲ. ಪ್ರಧಾನಿ ಮೋದಿಯವರೂ ಕೂಡ ಜನರ ಖಾತೆಗಳಿಗೆ ₹15 ಲಕ್ಷ , 20 ಕೋಟಿ ಉದ್ಯೋಗವಾಗಲಿ, ರೈತರ ಆದಾಯ ದ್ವಿಗುಣಗೊಳಿಸುವ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ’ ಎಂದು ಸಿಎಂ ಪ್ರಶ್ನಿಸಿದರು.

ಜನಾಭಿಪ್ರಾಯಕ್ಕೆ ಮನ್ನಣೆ

ಕುಟುಂಬ ರಾಜಕಾರಣವನ್ನು ವಿರೋಧಿಸುವ ಮುಖ್ಯಮಂತ್ರಿಗಳೇ ತಮ್ಮ ಸಚಿವರ ಕುಟುಂಬದವರಿಗೆ ಈ ಬಾರಿ ಟಿಕೆಟ್ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಇದು ಕುಟುಂಬ ರಾಜಕಾರಣವಲ್ಲ. ಜನರು ಯಾವ ಅಭ್ಯರ್ಥಿಗೆ ಬೆಂಬಲ ಸೂಚಿಸಬಹುದೆಂಬ ಚಿಂತನೆಯ ಮೇಲೆ ಅವರನ್ನು ಆಯ್ಕೆ ಮಾಡಲಾಗಿದ್ದು, ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗಿದೆ ಎಂದರು.

ಇದನ್ನೂ ಓದಿ; ಉತ್ತರ ಪ್ರದೇಶ: ಹೋಳಿ ಹಬ್ಬದಲ್ಲಿ ಮುಸ್ಲಿಂ ಕುಟುಂಬಕ್ಕೆ ಕಿರುಕುಳ ಪ್ರಕರಣ; ಓರ್ವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...