Homeಮುಖಪುಟಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ

ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್‌ ಹೆಗಡೆಗೆ ಕೈ ತಪ್ಪಿದ ಟಿಕೆಟ್. ಹಿಮಾಚಲದಲ್ಲಿ ನಟಿ ಕಂಗನಾ ರನೌತ್ ಕಣಕ್ಕೆ

- Advertisement -
- Advertisement -

ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ (ಮಾ.24) ಪ್ರಕಟಿಸಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ.

ಉತ್ತರ ಪ್ರದೇಶ, ಬಿಹಾರ, ಒಡಿಶಾ, ರಾಜಸ್ಥಾನ, ಹರಿಯಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಜಾರ್ಖಂಡ್, ಮಿಜೋರಾಂ, ಸಿಕ್ಕಿಂ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪಕ್ಷ ಬಿಡುಗಡೆ ಮಾಡಿದೆ.

ಐದನೇ ಪಟ್ಟಿಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ನವೀನ್ ಜಿಂದಾಲ್ ಅವರಿಗೆ ಉತ್ತರ ಪ್ರದೇಶದ ಕುರುಕ್ಷೇತ್ರದಿಂದ, ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಹಿಮಾಚಲ ಪ್ರದೇಶದ ಮಂಡಿಯಿಂದ ಮತ್ತು ಹೊಸ ಅಭ್ಯರ್ಥಿ ಸೀತಾ ಸೊರೆನ್ ಅವರಿಗೆ ಜಾರ್ಖಂಡ್‌ನ ದುಮ್ಕಾದಿಂದ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವೆ ಅಶ್ವಿನಿ ಚೌಬೆ ಅವರಿಗೆ ಬಿಹಾರದ ಬಕ್ಸರ್‌ನ ಟಿಕೆಟ್ ಕೈ ತಪ್ಪಿದೆ.

ವರುಣ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಿಂದ ಕೈಬಿಡಲಾಗಿದ್ದು, ಅವರ ತಾಯಿ ಮೇನಕಾ ಗಾಂಧಿಯವರಿಗೆ ಸುಲ್ತಾನ್‌ಪುರದ ಟಿಕೆಟ್ ನೀಡಲಾಗಿದೆ. ಸಂಬಲ್‌ಪುರದಿಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪುರಿಯಿಂದ ಸಂಬಿತ್ ಪಾತ್ರ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಮೀರತ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಪಿಲಿಭಿತ್‌ನಲ್ಲಿ ವರುಣ್ ಗಾಂಧಿ ಬದಲಿಗೆ ಜಿತಿನ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಂವಿಧಾನ ಬದಲಾವಣೆಯ ಹೇಳಿಕೆ ನೀಡುತ್ತಿದ್ದ ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದೆ. ಅವರ ಬದಲಿಗೆ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅವರನ್ನು ಕಣಕ್ಕಿಳಿಸಿದೆ.

ಬಿಹಾರದಲ್ಲಿ ಕೇಂದ್ರ ಸಚಿವರಾದ ಆರ್.ಕೆ ಸಿಂಗ್ ಅವರನ್ನು ಅರ್ರಾಹದಿಂದ, ನಿತ್ಯಾನಂದ್ ರೈ ಉಜಿಯಾರ್‌ಪುರದಿಂದ ಮತ್ತು ಗಿರಿರಾಜ್ ಸಿಂಗ್ ಅವರನ್ನು ಬೇಗುಸರಾಯ್‌ನಿಂದ ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಅವರಿಗೆ ಪಾಟ್ನಾ ಸಾಹಿಬ್‌, ರಾಜೀವ್ ಪ್ರತಾಪ್ ರೂಡಿ ಅವರಿಗೆ ಸರಣ್‌, ರಾಧಾ ಮೋಹನ್ ಸಿಂಗ್ ಅವರಿಗೆ ಪೂರ್ವಿ ಚಂಪಾರಣ್‌ ಮತ್ತು ರಾಮ್ ಕೃಪಾಲ್ ಯಾದವ್ ಅವರಿಗೆ ಪಾಟಲಿಪುತ್ರದ ಟಿಕೆಟ್ ನೀಡಿದೆ.

ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ :

ಕರ್ನಾಟದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿತ್ತು. ಭಾನುವಾರ ಬೆಳಗಾವಿ, ಚಿಕ್ಕಬಳ್ಳಾಪುರ, ರಾಯಚೂರು ಮತ್ತು ಉತ್ತರ ಕನ್ನಡ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇನ್ನು ಒಂದು ಕ್ಷೇತ್ರ ಚಿತ್ರದುರ್ಗಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಬೇಕಿದೆ. ಉಳಿದ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮೈತ್ರಿ ಪಕ್ಷ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದೆ.

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಿದ್ದು, ಇಲ್ಲಿನ ಹಾಲಿ ಸಂಸದೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೈ ತಪ್ಪಿದೆ. ಉತ್ತರ ಕನ್ನಡದಲ್ಲಿ ಅನಂತ್‌ ಕುಮಾರ್ ಹೆಗಡೆ ಬದಲಿಗೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರದ ಟಿಕೆಟ್ ಮಾಜಿ ಸಚಿವ ಡಾ.ಕೆ ಸುಧಾಕರ್‌ಗೆ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕರ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ : ‘ಪ್ರಚಾರಕ್ಕೆ ಅಡ್ಡಿಪಡಿಸಲು ಸಿಬಿಐ ನನಗೆ ಕಿರುಕುಳ ನೀಡುತ್ತಿದೆ..’; ಚುನಾವಣಾ ಆಯೋಗಕ್ಕೆ ಪತ್ರ ಬರೆದ ಮಹುವಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...