Homeಮುಖಪುಟಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ

ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್‌ ಹೆಗಡೆಗೆ ಕೈ ತಪ್ಪಿದ ಟಿಕೆಟ್. ಹಿಮಾಚಲದಲ್ಲಿ ನಟಿ ಕಂಗನಾ ರನೌತ್ ಕಣಕ್ಕೆ

- Advertisement -
- Advertisement -

ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ (ಮಾ.24) ಪ್ರಕಟಿಸಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ.

ಉತ್ತರ ಪ್ರದೇಶ, ಬಿಹಾರ, ಒಡಿಶಾ, ರಾಜಸ್ಥಾನ, ಹರಿಯಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಜಾರ್ಖಂಡ್, ಮಿಜೋರಾಂ, ಸಿಕ್ಕಿಂ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪಕ್ಷ ಬಿಡುಗಡೆ ಮಾಡಿದೆ.

ಐದನೇ ಪಟ್ಟಿಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ನವೀನ್ ಜಿಂದಾಲ್ ಅವರಿಗೆ ಉತ್ತರ ಪ್ರದೇಶದ ಕುರುಕ್ಷೇತ್ರದಿಂದ, ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಹಿಮಾಚಲ ಪ್ರದೇಶದ ಮಂಡಿಯಿಂದ ಮತ್ತು ಹೊಸ ಅಭ್ಯರ್ಥಿ ಸೀತಾ ಸೊರೆನ್ ಅವರಿಗೆ ಜಾರ್ಖಂಡ್‌ನ ದುಮ್ಕಾದಿಂದ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವೆ ಅಶ್ವಿನಿ ಚೌಬೆ ಅವರಿಗೆ ಬಿಹಾರದ ಬಕ್ಸರ್‌ನ ಟಿಕೆಟ್ ಕೈ ತಪ್ಪಿದೆ.

ವರುಣ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಿಂದ ಕೈಬಿಡಲಾಗಿದ್ದು, ಅವರ ತಾಯಿ ಮೇನಕಾ ಗಾಂಧಿಯವರಿಗೆ ಸುಲ್ತಾನ್‌ಪುರದ ಟಿಕೆಟ್ ನೀಡಲಾಗಿದೆ. ಸಂಬಲ್‌ಪುರದಿಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪುರಿಯಿಂದ ಸಂಬಿತ್ ಪಾತ್ರ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಮೀರತ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಪಿಲಿಭಿತ್‌ನಲ್ಲಿ ವರುಣ್ ಗಾಂಧಿ ಬದಲಿಗೆ ಜಿತಿನ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಂವಿಧಾನ ಬದಲಾವಣೆಯ ಹೇಳಿಕೆ ನೀಡುತ್ತಿದ್ದ ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದೆ. ಅವರ ಬದಲಿಗೆ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅವರನ್ನು ಕಣಕ್ಕಿಳಿಸಿದೆ.

ಬಿಹಾರದಲ್ಲಿ ಕೇಂದ್ರ ಸಚಿವರಾದ ಆರ್.ಕೆ ಸಿಂಗ್ ಅವರನ್ನು ಅರ್ರಾಹದಿಂದ, ನಿತ್ಯಾನಂದ್ ರೈ ಉಜಿಯಾರ್‌ಪುರದಿಂದ ಮತ್ತು ಗಿರಿರಾಜ್ ಸಿಂಗ್ ಅವರನ್ನು ಬೇಗುಸರಾಯ್‌ನಿಂದ ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಅವರಿಗೆ ಪಾಟ್ನಾ ಸಾಹಿಬ್‌, ರಾಜೀವ್ ಪ್ರತಾಪ್ ರೂಡಿ ಅವರಿಗೆ ಸರಣ್‌, ರಾಧಾ ಮೋಹನ್ ಸಿಂಗ್ ಅವರಿಗೆ ಪೂರ್ವಿ ಚಂಪಾರಣ್‌ ಮತ್ತು ರಾಮ್ ಕೃಪಾಲ್ ಯಾದವ್ ಅವರಿಗೆ ಪಾಟಲಿಪುತ್ರದ ಟಿಕೆಟ್ ನೀಡಿದೆ.

ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ :

ಕರ್ನಾಟದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿತ್ತು. ಭಾನುವಾರ ಬೆಳಗಾವಿ, ಚಿಕ್ಕಬಳ್ಳಾಪುರ, ರಾಯಚೂರು ಮತ್ತು ಉತ್ತರ ಕನ್ನಡ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇನ್ನು ಒಂದು ಕ್ಷೇತ್ರ ಚಿತ್ರದುರ್ಗಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಬೇಕಿದೆ. ಉಳಿದ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮೈತ್ರಿ ಪಕ್ಷ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದೆ.

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಿದ್ದು, ಇಲ್ಲಿನ ಹಾಲಿ ಸಂಸದೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೈ ತಪ್ಪಿದೆ. ಉತ್ತರ ಕನ್ನಡದಲ್ಲಿ ಅನಂತ್‌ ಕುಮಾರ್ ಹೆಗಡೆ ಬದಲಿಗೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರದ ಟಿಕೆಟ್ ಮಾಜಿ ಸಚಿವ ಡಾ.ಕೆ ಸುಧಾಕರ್‌ಗೆ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕರ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ : ‘ಪ್ರಚಾರಕ್ಕೆ ಅಡ್ಡಿಪಡಿಸಲು ಸಿಬಿಐ ನನಗೆ ಕಿರುಕುಳ ನೀಡುತ್ತಿದೆ..’; ಚುನಾವಣಾ ಆಯೋಗಕ್ಕೆ ಪತ್ರ ಬರೆದ ಮಹುವಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...