Homeಮುಖಪುಟಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ

ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ

- Advertisement -
- Advertisement -

ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡರಂಗ ವಿದ್ಯಾರ್ಥಿ ಸಂಘಟನೆಗಳು ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಪ್ರತಿಸ್ಪರ್ಧಿ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಗೆ ತೀವ್ರ ಮುಖಭಂಗವಾಗಿದೆ.

ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಶನ್ (ಎಐಎಸ್‌ಎ) ನ ಧನಂಜಯ್ ಅವರು ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಚಂದ್ರ ಅಜ್ಮೀರಾ ಅವರಿಗಿಂತ 922 ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ.

ಧನಂಜಯ್ ಅವರು ಒಟ್ಟು 2,598 ಮತಗಳನ್ನು ಪಡೆದರೆ, ಉಮೇಶ್ ಚಂದ್ರ ಅಜ್ಮೀರಾ ಅವರು 1,676 ಮತಗಳನ್ನು ಗಳಿಸಿದ್ದಾರೆ. ‘ಯುನೈಟೆಡ್ ಲೆಫ್ಟ್’ ಎಂಬ ಒಕ್ಕೂಟದಡಿಯಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳು ಚುನಾವಣೆ ಎದುರಿಸಿದ್ದವು.

ಉಪಾಧ್ಯಕ್ಷ ಸ್ಥಾನಕ್ಕೆ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ನ ಅವಿಜಿತ್ ಘೋಷ್ ಆಯ್ಕೆಯಾಗಿದ್ದಾರೆ. ಅವಿಜಿತ್ ಅವರು 2,409 ಮತಗಳನ್ನು ಪಡೆದಿದ್ದು, ಪ್ರತಿಸ್ಪರ್ಧಿ ಎಬಿವಿಪಿಯ ದೀಪಿಕಾ ಶರ್ಮಾ ಕೇವಲ 927 ಮತಗಳನ್ನು ಪಡೆದಿದ್ದಾರೆ.

ಮತದಾನಕ್ಕೆ ಗಂಟೆಗಳ ಮೊದಲು ಎಸ್‌ಎಫ್‌ಐನ ಅಭ್ಯರ್ಥಿ ಅನರ್ಹಗೊಂಡ ನಂತರ ಯುನೈಟೆಡ್ ಲೆಫ್ಟ್ ಬೆಂಬಲಿಸಿದ ಬಿಎಪಿಎಸ್‌ಎ ಅಭ್ಯರ್ಥಿ ಪ್ರಿಯಾಂಶಿ ಆರ್ಯ 2,887 ಮತಗಳೊಂದಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಅಲಂಕರಿಸಿದ್ದಾರೆ.

ಎಐಎಸ್‌ಎಫ್‌ನ ಎಂಡಿ ಸಾಜಿದ್ 508 ಮತಗಳ ಅಂತರದಿಂದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಸಾಜಿದ್ 2,574 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಎಬಿವಿಪಿಯ ಗೋವಿಂದ ಡಾಂಗಿ 2,066 ಮತಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಚುನಾವಣೆಯಲ್ಲಿ ಗೆಲುವು ದಾಖಲಿಸುತ್ತಿದ್ದಂತೆ ಎಡ ರಂಗದ ವಿದ್ಯಾರ್ಥಿಗಳು ಮುಖಕ್ಕೆ ಕೆಂಪು ಬಣ್ಣ ಹಚ್ಚಿ, ಪರಸ್ಪರ ಕೆಂಪು ಗುಲಾಬಿ ವಿನಿಮಯ ಮಾಡಿಕೊಂಡು, ‘ಲಾಲ್‌ ಸಲಾಂ’ ಘೋಷಣೆ ಕೂಗುತ್ತಾ ಸಂಭ್ರಮಾಚರಣೆ ನಡೆಸಿದರು.

ಎಡರಂಗದಿಂದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಎಸ್‌ಎಫ್‌ಐನ ಸ್ವಾತಿಸಿಂಗ್‌ ನಾಮಪತ್ರ ಸಲ್ಲಿಸಿದ್ದರು. ಆದರೆ, ಮತದಾನಕ್ಕೂ ಕೆಲವೇ ಗಂಟೆಗಳ ಮುನ್ನ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ಹಿನ್ನೆಲೆ ಸ್ವಾತಿಸಿಂಗ್ 32 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ನಾಲ್ಕು ವರ್ಷಗಳ ನಂತರ ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿದೆ. ಈ ಬಾರಿ ಅತ್ಯಧಿಕ, ಅಂದರೆ ಶೇ. 73ರಷ್ಟು ಮತದಾನವಾಗಿತ್ತು. ವಿವಿಯ ಸುಮಾರು 7,751 ವಿದ್ಯಾರ್ಥಿಗಳು ಮತದಾನ ಮಾಡಿದ್ದರು.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...