Homeಫ್ಯಾಕ್ಟ್‌ಚೆಕ್Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು 'ಕೋಮು ಗಲಾಟೆಯಲ್ಲ'

Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ಘಟನೆಗೆ ಕೋಮು ಬಣ್ಣ ಬಳಿಯಲು ಯತ್ನಿಸಿ ಪಲಾಯನ ಮಾಡಿದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ನಡೆದ ವಾಗ್ವಾದದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವೈರಲ್ ವಿಡಿಯೋವನ್ನು ಮಾರ್ಚ್ 24ರಂದು ರಾತ್ರಿ 10 ಗಂಟೆ 46 ನಿಮಿಷಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರ ಗಮನಕ್ಕೆ ತರುತ್ತಿದ್ದೇವೆ. ಹಿಂದೂಗಳೇ ಎದ್ದೇಳಿ” ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ ಸಿಂಹ ಅವರು ತಮ್ಮ ಪೋಸ್ಟ್‌ನಲ್ಲಿ ಕುಮಾರಸ್ವಾಮಿ ಬಡಾವಣೆಯಲ್ಲಿ ಘಟನೆ ನಡೆದಿದೆ ಎಂದು ಉಲ್ಲೇಖಿಸಿ, ಕೊನೆಯಲ್ಲಿ ‘ಎದ್ದೇಳಿ ಹಿಂದೂಗಳೇ’ ಎಂದು ಬರೆಯುವ ಮೂಲಕ ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ. ಆದರೆ, ವಿಡಿಯೋದಲ್ಲಿರುವ ಘಟನೆ ಏನು? ಹೇಗೆ ನಡೆಯಿತು? ಇತ್ಯಾದಿ ಯಾವ ಮಾಹಿತಿಯನ್ನೂ ಅವರು ಉಲ್ಲೇಖಿಸಿರಲಿಲ್ಲ. ಪ್ರಸ್ತುತ ಪ್ರತಾಪ್ ಸಿಂಹ ಅವರು ತಮ್ಮ ಎಕ್ಸ್‌ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.

ಪ್ರತಾಪ್ ಸಿಂಹ ಪೋಸ್ಟ್ ಡಿಲಿಟ್ ಮಾಡಿರುವುದು

ಫ್ಯಾಕ್ಟ್‌ಚೆಕ್ : ಪ್ರತಾಪ್ ಸಿಂಹ ಹಂಚಿಕೊಂಡ ವಿಡಿಯೋಗೆ ಸಂಬಂಧಪಟ್ಟಂತೆ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇಂದು (25 ಮಾರ್ಚ್ 2024) ಡೆಕ್ಕನ್ ಹೆರಾಲ್ಡ್ ಸುದ್ದಿ ವೆಬ್‌ಸೈಟ್‌ ‘Neighbours fight over parking; police say ‘no communal angle”ಎಂಬ ಶೀರ್ಷಿಕೆಯಲ್ಲಿ ವಿಡಿಯೋಗೆ ಸಂಬಂಧಪಟ್ಟಂತೆ ಸುದ್ದಿ ಪ್ರಕಟಿಸಿದೆ. ಸುದ್ದಿಯ ಶೀರ್ಷಿಕೆಯಲ್ಲೇ ಪಾರ್ಕಿಂಗ್ ವಿಚಾರಕ್ಕೆ ನೆರೆಹೊರೆಯವರ ನಡುವೆ ಜಗಳ ನಡೆದಿದೆ. ಇದರಲ್ಲಿ ಕೋಮು ವಿಷಯವಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಸುದ್ದಿಯನ್ನು ವಿವರವಾಗಿ ನೋಡುವುದಾದರೆ, “ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಪ್ರಗತಿಪುರದಲ್ಲಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಘಟನಾ ಸ್ಥಳದಲ್ಲಿ ಜನರು ಗುಂಪಾಗಿ ಜಮಾಯಿಸಿದ್ದರಿಂದ ಕೋಮು ಗಲಾಟೆಯ ವದಂತಿ ಹಬ್ಬಿತ್ತು. ಆದರೆ, ಇದು ಕುಮಾರ್ ಮತ್ತು ಸೈಯ್ಯದ್ ತಲ್ಹಾ ಎಂಬ ಇಬ್ಬರು ನೆರೆಹೊರೆಯವರ ನಡುವೆ ಆಟೋ ರಿಕ್ಷಾ ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳ. ಇದರಲ್ಲಿ ಯಾವುದೇ ಕೋಮು ವಿಚಾರ ಇಲ್ಲ ಎಂದು ಉಪ ಪೊಲೀಸ್ ಆಯುಕ್ತ ( ಬೆಂಗಳೂರು ದಕ್ಷಿಣ) ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ” ಎಂದು ಹೇಳಲಾಗಿದೆ.

“ಇಬ್ಬರನ್ನು ಹೊರತುಪಡಿಸಿ ಇತರರು ಈ ಗಲಾಟೆಯಲ್ಲಿ ಪಾಲ್ಗೊಂಡಿಲ್ಲ. ವಿಡಿಯೋದಲ್ಲಿ ಒಂದಷ್ಟು ಜನರು ಜಮಾಯಿಸಿರುವುದು ಕಂಡು ಬಂದಿದೆ. ನಮಾಝ್ ಮುಗಿಸಿ ಹೋಗುವಾಗ ಗಲಾಟೆ ನಡೆಯುತ್ತಿದ್ದರಿಂದ ಕೆಲವರು ನಿಂತು ನೋಡಿದ್ದಾರೆ ಅಷ್ಟೆ” ಎಂದು ಉಪ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಇಂಡಿಯಾ ಟುಡೇ, ಟೈಮ್ಸ್ ನೌ ವೆಬ್‌ಸೈಟ್‌ಗಳೂ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳವೇ ಹೊರತು ಯಾವುದೇ ಕೋಮು ಗಲಾಟೆ ಅಲ್ಲ ಎಂದು ತಿಳಿಸಿದೆ.

ಎರಡೂ ಸುದ್ದಿ ಲಿಂಕ್‌ಗಳು ಕೆಳಗಿವೆ
ಇಂಡಿಯಾ ಟುಡೇ
ಟೈಮ್ಸ್‌ ನೌ

ನಾವು ನಡೆಸಿದ ಪರಿಶೀಲನೆಯಲ್ಲಿ ಇದು ಪಾರ್ಕಿಂಗ್ ವಿಚಾರಕ್ಕೆ ನಡೆದ ವಾಗ್ವಾದವೇ ಹೊರತು, ಕೋಮು ಗಲಾಟೆಯಲ್ಲ ಎಂಬುವುದು ಸ್ಪಷ್ಟವಾಗಿದೆ. ಸಂಸದ ಪ್ರತಾಪ್ ಸಿಂಹ ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿ ಬಳಿಕ ಪೋಸ್ಟ್ ಡಿಲಿಟ್ ಮಾಡುವ ಮೂಲಕ ಪಲಾಯನ ಮಾಡಿರುವುದು ಬಯಲಾಗಿದೆ.

ಇದನ್ನೂ ಓದಿ : Fact Check: ಚುನಾವಣೆ ಹಿನ್ನೆಲೆ ವಾಟ್ಸಾಪ್‌, ಫೇಸ್‌ಬುಕ್ ಮೆಸೇಜ್‌ಗಳ ಮೇಲೆ ಸರ್ಕಾರ ಕಣ್ಣಿಟ್ಟಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...