Homeಫ್ಯಾಕ್ಟ್‌ಚೆಕ್Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು 'ಕೋಮು ಗಲಾಟೆಯಲ್ಲ'

Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ಘಟನೆಗೆ ಕೋಮು ಬಣ್ಣ ಬಳಿಯಲು ಯತ್ನಿಸಿ ಪಲಾಯನ ಮಾಡಿದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ನಡೆದ ವಾಗ್ವಾದದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವೈರಲ್ ವಿಡಿಯೋವನ್ನು ಮಾರ್ಚ್ 24ರಂದು ರಾತ್ರಿ 10 ಗಂಟೆ 46 ನಿಮಿಷಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರ ಗಮನಕ್ಕೆ ತರುತ್ತಿದ್ದೇವೆ. ಹಿಂದೂಗಳೇ ಎದ್ದೇಳಿ” ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ ಸಿಂಹ ಅವರು ತಮ್ಮ ಪೋಸ್ಟ್‌ನಲ್ಲಿ ಕುಮಾರಸ್ವಾಮಿ ಬಡಾವಣೆಯಲ್ಲಿ ಘಟನೆ ನಡೆದಿದೆ ಎಂದು ಉಲ್ಲೇಖಿಸಿ, ಕೊನೆಯಲ್ಲಿ ‘ಎದ್ದೇಳಿ ಹಿಂದೂಗಳೇ’ ಎಂದು ಬರೆಯುವ ಮೂಲಕ ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ. ಆದರೆ, ವಿಡಿಯೋದಲ್ಲಿರುವ ಘಟನೆ ಏನು? ಹೇಗೆ ನಡೆಯಿತು? ಇತ್ಯಾದಿ ಯಾವ ಮಾಹಿತಿಯನ್ನೂ ಅವರು ಉಲ್ಲೇಖಿಸಿರಲಿಲ್ಲ. ಪ್ರಸ್ತುತ ಪ್ರತಾಪ್ ಸಿಂಹ ಅವರು ತಮ್ಮ ಎಕ್ಸ್‌ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.

ಪ್ರತಾಪ್ ಸಿಂಹ ಪೋಸ್ಟ್ ಡಿಲಿಟ್ ಮಾಡಿರುವುದು

ಫ್ಯಾಕ್ಟ್‌ಚೆಕ್ : ಪ್ರತಾಪ್ ಸಿಂಹ ಹಂಚಿಕೊಂಡ ವಿಡಿಯೋಗೆ ಸಂಬಂಧಪಟ್ಟಂತೆ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇಂದು (25 ಮಾರ್ಚ್ 2024) ಡೆಕ್ಕನ್ ಹೆರಾಲ್ಡ್ ಸುದ್ದಿ ವೆಬ್‌ಸೈಟ್‌ ‘Neighbours fight over parking; police say ‘no communal angle”ಎಂಬ ಶೀರ್ಷಿಕೆಯಲ್ಲಿ ವಿಡಿಯೋಗೆ ಸಂಬಂಧಪಟ್ಟಂತೆ ಸುದ್ದಿ ಪ್ರಕಟಿಸಿದೆ. ಸುದ್ದಿಯ ಶೀರ್ಷಿಕೆಯಲ್ಲೇ ಪಾರ್ಕಿಂಗ್ ವಿಚಾರಕ್ಕೆ ನೆರೆಹೊರೆಯವರ ನಡುವೆ ಜಗಳ ನಡೆದಿದೆ. ಇದರಲ್ಲಿ ಕೋಮು ವಿಷಯವಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಸುದ್ದಿಯನ್ನು ವಿವರವಾಗಿ ನೋಡುವುದಾದರೆ, “ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಪ್ರಗತಿಪುರದಲ್ಲಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಘಟನಾ ಸ್ಥಳದಲ್ಲಿ ಜನರು ಗುಂಪಾಗಿ ಜಮಾಯಿಸಿದ್ದರಿಂದ ಕೋಮು ಗಲಾಟೆಯ ವದಂತಿ ಹಬ್ಬಿತ್ತು. ಆದರೆ, ಇದು ಕುಮಾರ್ ಮತ್ತು ಸೈಯ್ಯದ್ ತಲ್ಹಾ ಎಂಬ ಇಬ್ಬರು ನೆರೆಹೊರೆಯವರ ನಡುವೆ ಆಟೋ ರಿಕ್ಷಾ ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳ. ಇದರಲ್ಲಿ ಯಾವುದೇ ಕೋಮು ವಿಚಾರ ಇಲ್ಲ ಎಂದು ಉಪ ಪೊಲೀಸ್ ಆಯುಕ್ತ ( ಬೆಂಗಳೂರು ದಕ್ಷಿಣ) ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ” ಎಂದು ಹೇಳಲಾಗಿದೆ.

“ಇಬ್ಬರನ್ನು ಹೊರತುಪಡಿಸಿ ಇತರರು ಈ ಗಲಾಟೆಯಲ್ಲಿ ಪಾಲ್ಗೊಂಡಿಲ್ಲ. ವಿಡಿಯೋದಲ್ಲಿ ಒಂದಷ್ಟು ಜನರು ಜಮಾಯಿಸಿರುವುದು ಕಂಡು ಬಂದಿದೆ. ನಮಾಝ್ ಮುಗಿಸಿ ಹೋಗುವಾಗ ಗಲಾಟೆ ನಡೆಯುತ್ತಿದ್ದರಿಂದ ಕೆಲವರು ನಿಂತು ನೋಡಿದ್ದಾರೆ ಅಷ್ಟೆ” ಎಂದು ಉಪ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಇಂಡಿಯಾ ಟುಡೇ, ಟೈಮ್ಸ್ ನೌ ವೆಬ್‌ಸೈಟ್‌ಗಳೂ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳವೇ ಹೊರತು ಯಾವುದೇ ಕೋಮು ಗಲಾಟೆ ಅಲ್ಲ ಎಂದು ತಿಳಿಸಿದೆ.

ಎರಡೂ ಸುದ್ದಿ ಲಿಂಕ್‌ಗಳು ಕೆಳಗಿವೆ
ಇಂಡಿಯಾ ಟುಡೇ
ಟೈಮ್ಸ್‌ ನೌ

ನಾವು ನಡೆಸಿದ ಪರಿಶೀಲನೆಯಲ್ಲಿ ಇದು ಪಾರ್ಕಿಂಗ್ ವಿಚಾರಕ್ಕೆ ನಡೆದ ವಾಗ್ವಾದವೇ ಹೊರತು, ಕೋಮು ಗಲಾಟೆಯಲ್ಲ ಎಂಬುವುದು ಸ್ಪಷ್ಟವಾಗಿದೆ. ಸಂಸದ ಪ್ರತಾಪ್ ಸಿಂಹ ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿ ಬಳಿಕ ಪೋಸ್ಟ್ ಡಿಲಿಟ್ ಮಾಡುವ ಮೂಲಕ ಪಲಾಯನ ಮಾಡಿರುವುದು ಬಯಲಾಗಿದೆ.

ಇದನ್ನೂ ಓದಿ : Fact Check: ಚುನಾವಣೆ ಹಿನ್ನೆಲೆ ವಾಟ್ಸಾಪ್‌, ಫೇಸ್‌ಬುಕ್ ಮೆಸೇಜ್‌ಗಳ ಮೇಲೆ ಸರ್ಕಾರ ಕಣ್ಣಿಟ್ಟಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...