Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...