Homeಮುಖಪುಟಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

- Advertisement -
- Advertisement -

ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡರಂಗದ ವಿದ್ಯಾರ್ಥಿ ಸಂಘಟನೆಗಳು ಗೆಲುವನ್ನು ಸಾಧಿಸಿದ್ದು, ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ಮೂರು ದಶಕಗಳ ಬಳಿಕ ದಲಿತ ಅಧ್ಯಕ್ಷರೋರ್ವರನ್ನು ಆಯ್ಕೆ ಮಾಡಲಾಗಿದೆ.

4 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಶನ್‌ನ ಧನಂಜಯ್ ಅವರು ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಚಂದ್ರ ಅಜ್ಮೀರಾ ಅವರಿಗಿಂತ 922 ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಎಐಎಸ್‌ಎನ ಧನಂಜಯ್ ಅವರು 2,598 ಮತಗಳನ್ನು ಪಡೆದಿದ್ದು, ಉಮೇಶ್ ಸಿ ಅಜ್ಮೀರಾ 1,676 ಮತಗಳನ್ನು ಪಡೆದಿದ್ದಾರೆ.

ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದು, 1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈರ್ವಾ ನಂತರ ಎಡಪಕ್ಷದಿಂದ ಆಯ್ಕೆಯಾದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ. ಧನಂಜಯ್ ಅವರು ಸ್ಕೂಲ್ ಆಫ್ ಆರ್ಟ್ಸ್ ಮತ್ತು ಸೌಂದರ್ಯಶಾಸ್ತ್ರದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದಾರೆ.

ಗೆಲುವಿನ ನಂತರ ಪಿಟಿಐ ಜೊತೆ ಮಾತನಾಡಿದ ಧನಂಜಯ್, ಈ ಗೆಲುವು ಜೆಎನ್‌ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿವಿ ಆವರಣದಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ, ಶುಲ್ಕ ಕಡಿತ, ವಿದ್ಯಾರ್ಥಿ ವೇತನ ಹೆಚ್ಚಳ, ಮೂಲಸೌಕರ್ಯ ಅಭಿವೃದ್ಧಿ ಮತ್ತು ನೀರಿನ ಸಮಸ್ಯೆ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗಾಗಿ ವಿದ್ಯಾರ್ಥಿ ಸಂಘಟನೆ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಎಸ್‌ಎಫ್‌ಐ ಅವಿಜಿತ್‌ ಘೋಷ್‌ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅವರು ಎಬಿವಿಪಿಯ ದೀಪಿಕಾ ಶರ್ಮಾ ಅವರನ್ನು 927 ಮತಗಳ ಅಂತರದಿಂದ ಸೋಲಿಸಿದ್ದಾರೆ. ಘೋಷ್‌ 2,409 ಮತಗಳನ್ನು ಪಡೆದರೆ, ದೀಪಿಕಾಗೆ 1,482 ಮತಗಳು ದೊರೆತಿವೆ.

ಬಿರ್ಸಾ ಅಂಬೇಡ್ಕರ್‌ ಫುಲೆ ವಿದ್ಯಾರ್ಥಿ ಸಂಘಟನೆಯ (ಬಿಎಪಿಎಸ್‌ಎ) ಅಭ್ಯರ್ಥಿ ಪ್ರಿಯಾಂಶಿ ಆರ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆರ್ಯ ಒಟ್ಟು 2,887 ಮತ ಪಡೆದಿದ್ದಾರೆ, ಅವರ ಪ್ರತಿಸ್ಪರ್ಧಿ ಅರ್ಜುನ್‌ ಆನಂದ್‌ 1961 ಮತಗಳನ್ನು ಪಡೆದಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಡ ಸಂಘಟನೆಗಳ ಮೊಹಮ್ಮದ್‌ ಸಾಜಿದ್‌ ಆಯ್ಕೆಯಾಗಿದ್ದಾರೆ. ಲಾಲ್ ಸಲಾಂ ಮತ್ತು ಜೈ ಭೀಮ್ ಘೋಷಣೆಗಳ ನಡುವೆ ವಿಜೇತ ವಿದ್ಯಾರ್ಥಿಗಳನ್ನು ಅವರ ಬೆಂಬಲಿಗರು ಶ್ಲಾಘಿಸಿದ್ದಾರೆ.

ಇದನ್ನು ಓದಿ: ಲೋಕಸಭಾ ಚುನಾವಣೆ 2024: ವಿರೋಧಕ್ಕೆ ಮಣಿದು ಜೈಪುರ ಅಭ್ಯರ್ಥಿಯನ್ನು ಬದಲಾಯಿಸಿದ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...