Homeಫ್ಯಾಕ್ಟ್‌ಚೆಕ್Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್...

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

- Advertisement -
- Advertisement -

ದೆಹಲಿಯ ಜವಹರಲಾಲ್ ನೆಹರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ದ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟಗೊಂಡಿದೆ.

ಈ ಕುರಿತು “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಎಬಿವಿಬಿ ಕ್ಲೀನ್ ಸ್ವೀಪ್, ಅಧ್ಯಕ್ಷ ಸೇರಿ ನಾಲ್ಕೂ ಸ್ಥಾನದಲ್ಲಿ ಗೆಲುವು!” ಎಂಬ ಶೀರ್ಷಿಕೆಯಲ್ಲಿ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು.

ಸುವರ್ಣ ನ್ಯೂಸ್‌ ಸುದ್ದಿಯ ಸ್ಕ್ರೀನ್ ಶಾಟ್ 

ಬಲಪಂಥೀಯ ಮಾಧ್ಯಮ ಪೋಸ್ಟ್ ಕಾರ್ಡ್ ಕೂಡ ” ಜೆಎನ್‌ಯುನಲ್ಲಿ ಬದಲಾವಣೆಯ ಗಾಳಿ ಎಂಬ ಶೀರ್ಷಿಕೆಯಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿತ್ತು. ಅದರಲ್ಲಿ “ಅಧ್ಯಕ್ಷ ಸ್ಥಾನಕ್ಕೆ ನಡೆದ ಜೆಎನ್‌ಯು ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಬಿವಿಪಿ. ದೇಶವನ್ನು ತುಂಡು ತುಂಡು (ತುಕ್ಡೆ ತುಕ್ಡೆ) ಮಾಡುತ್ತೇವೆಂದು ಘೋಷಣೆ ಕೂಗಿದ ಜೆಎನ್‌ಯುನಲ್ಲಿ ‘ಭಾರತ ಮಾತಾ ಕೀ ಜೈ’ ಘೋಷಣೆ. ವಿದ್ಯಾರ್ಥಿ ನಾಯಕರಿಗೆ ಮತ್ತು ಎಲ್ಲಾ ಕಾರ್ಯಕರ್ತರ ಒಗ್ಗಟ್ಟಿನ ಪ್ರಯತ್ನಗಳಿಗೆ ಅಭಿನಂದನೆಗಳು” ಎಂದು ಬರೆಯಲಾಗಿತ್ತು.

ಬಳಿಕ, ಸುವರ್ಣ ನ್ಯೂಸ್‌ ತನ್ನ ಸುದ್ದಿಯನ್ನು ತಿದ್ದಿ “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಲೆಫ್ಟ್ ವಿದ್ಯಾರ್ಥಿ ಘಟಕ ಕ್ಲೀನ್ ಸ್ಪೀಪ್, ಎಬಿವಿಪಿಗೆ ಹಿನ್ನಡೆ!” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದೆ.

ಆದರೆ, ಹೊಸ ಸುದ್ದಿಯಲ್ಲಿ ಡಿಲಿಟ್ ಮಾಡಿರುವ ಹಳೆಯ ಸುದ್ದಿಯ ಫೋಟೋವನ್ನೇ ಹಾಕಿದೆ. ಅಲ್ಲದೆ, ಸುವರ್ಣ ನ್ಯೂಸ್ ಡಿಲಿಟ್ ಮಾಡಿರುವ ಸುದ್ದಿಯ ಲಿಂಕ್ ನಮಗೆ ಲಭ್ಯವಾಗಿದ್ದು, ಅದರಲ್ಲಿ ಎಬಿವಿಪಿಗೆ ಜಯ ಎಂದು ಬರೆದಿರುವುದನ್ನು ನೋಡಬಹುದು.


ಪೋಸ್ಟ್‌ ಕಾರ್ಡ್‌ನ ಸಾಮಾಜಿಕ ಜಾಲತಾಣಗಳಿಂದ ಪೋಸ್ಟರ್‌ನ್ನು ಡಿಲಿಟ್ ಮಾಡಲಾಗಿದೆ. ಆದರೆ, ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಮಾರ್ಚ್‌ 24ರಂದು ಬೆಳಿಗ್ಗೆ 6 ಗಂಟೆ 34 ನಿಮಿಷಕ್ಕೆ ಪೋಸ್ಟ್‌ ಕಾರ್ಡ್ ಇಂಗ್ಲಿಷ್ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟರ್‌ ಅಪ್ಲೋಡ್ ಮಾಡಿರುವುದನ್ನು ತೋರಿಸುತ್ತಿದೆ.

ಫ್ಯಾಕ್ಟ್ ಚೆಕ್ : ಕನ್ನಡದ ಮುಖ್ಯ ವಾಹಿನಿ ಮಾಧ್ಯಮವಾದ ಸುವರ್ಣ ನ್ಯೂಸ್ ಮತ್ತು ಬಲಪಂಥೀಯ ಮಾಧ್ಯಮ ಪೋಸ್ಟ್‌ ಕಾರ್ಡ್‌ ಹಂಚಿಕೊಂಡಿರುವ ಸುದ್ದಿ ಸುಳ್ಳು. ಜೆಎನ್‌ಯು ವಿದ್ಯಾರ್ಥಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ.

ನಾನುಗೌರಿ.ಕಾಂ ನಾವು “ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ” ಎಂಬ ಶೀರ್ಷಿಕೆಯಲ್ಲಿ ವಿವರವಾದ ಸುದ್ದಿಯನ್ನು ಇಂದು (ಮಾ.25) ಪ್ರಕಟಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಿಂದಿ, ಇಂಗ್ಲಿಷ್, ಕನ್ನಡ ಸೇರಿದಂತೆ ದೇಶದ ಬಹುತೇಕ ಎಲ್ಲಾ ಮಾಧ್ಯಮಗಳು ಜೆಎನ್‌ಯು ಚುನಾವಣೆ ಕುರಿತು ಸುದ್ದಿ ಪ್ರಕಟಿಸಿದ್ದು, ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದು ಕೊಂಡಿದೆ ಎಂದಿದೆ.

ಕೆಲವೊಂದಿಷ್ಟು ಸುದ್ದಿಗಳ ಲಿಂಕ್ ಕೆಳಗಡೆ ಇದೆ

ಎಎನ್‌ಐ ಎಕ್ಸ್ ಪೋಸ್ಟ್ ಲಿಂಕ್ 

ಎನ್‌ಡಿಟಿವಿ ಸುದ್ದಿ ಲಿಂಕ್

ಹಿಂದುಸ್ಥಾನ್ ಟೈಮ್ಸ್ ಸುದ್ದಿ ಲಿಂಕ್

ಟೈಮ್ಸ್ ಆಫ್ ಇಂಡಿಯಾ ಸುದ್ದಿ ಲಿಂಕ್

ಮತ್ತೊಂದು ಮಹತ್ವದ ವಿಷಯವೆಂದರೆ ಪೋಸ್ಟ್ ಹಂಚಿಕೊಂಡಿರುವ ಪೋಸ್ಟರ್‌ನಲ್ಲಿರುವುದು ಕೂಡ ಹಳೆ ಫೋಟೋ ಆಗಿದೆ. ಆ ಫೋಟೋ ಕಳೆದ ವರ್ಷ ದೆಹಲಿ ವಿಶ್ವ ವಿದ್ಯಾಲಯಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯದ್ದು, ಈ ಕುರಿತ ಸುದ್ದಿ ಕೆಳಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಹಾಗಾಗಿ, ಸುವರ್ಣ ನ್ಯೂಸ್ ಮತ್ತು ಪೋಸ್ಟ್‌ ಕಾರ್ಡ್ ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯ ಕುರಿತು ಪ್ರಕಟಿಸಿರುವ ಸುದ್ದಿ ಸುಳ್ಳು. ಜೆಎನ್‌ಯು ಚುನಾವಣೆಯಲ್ಲಿ ಎಡ ವಿದ್ಯಾರ್ಥಿಗಳ ಒಕ್ಕೂಟ ಯುನೈಟೆಡ್ ಲೆಫ್ಟ್‌ಗೆ ಭರ್ಜರಿ ಜಯ ಸಾಧಿಸಿದೆ. ಆರ್‌ಎಸ್‌ಎಸ್‌, ಬಿಜೆಪಿಯ ವಿದ್ಯಾರ್ಥಿಯ ಸಂಘಟನೆ ಎಬಿವಿಪಿಗೆ ತೀವ್ರ ಮುಖಭಂಗವಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...