Homeಫ್ಯಾಕ್ಟ್‌ಚೆಕ್Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್...

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

- Advertisement -
- Advertisement -

ದೆಹಲಿಯ ಜವಹರಲಾಲ್ ನೆಹರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ದ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟಗೊಂಡಿದೆ.

ಈ ಕುರಿತು “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಎಬಿವಿಬಿ ಕ್ಲೀನ್ ಸ್ವೀಪ್, ಅಧ್ಯಕ್ಷ ಸೇರಿ ನಾಲ್ಕೂ ಸ್ಥಾನದಲ್ಲಿ ಗೆಲುವು!” ಎಂಬ ಶೀರ್ಷಿಕೆಯಲ್ಲಿ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು.

ಸುವರ್ಣ ನ್ಯೂಸ್‌ ಸುದ್ದಿಯ ಸ್ಕ್ರೀನ್ ಶಾಟ್ 

ಬಲಪಂಥೀಯ ಮಾಧ್ಯಮ ಪೋಸ್ಟ್ ಕಾರ್ಡ್ ಕೂಡ ” ಜೆಎನ್‌ಯುನಲ್ಲಿ ಬದಲಾವಣೆಯ ಗಾಳಿ ಎಂಬ ಶೀರ್ಷಿಕೆಯಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿತ್ತು. ಅದರಲ್ಲಿ “ಅಧ್ಯಕ್ಷ ಸ್ಥಾನಕ್ಕೆ ನಡೆದ ಜೆಎನ್‌ಯು ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಬಿವಿಪಿ. ದೇಶವನ್ನು ತುಂಡು ತುಂಡು (ತುಕ್ಡೆ ತುಕ್ಡೆ) ಮಾಡುತ್ತೇವೆಂದು ಘೋಷಣೆ ಕೂಗಿದ ಜೆಎನ್‌ಯುನಲ್ಲಿ ‘ಭಾರತ ಮಾತಾ ಕೀ ಜೈ’ ಘೋಷಣೆ. ವಿದ್ಯಾರ್ಥಿ ನಾಯಕರಿಗೆ ಮತ್ತು ಎಲ್ಲಾ ಕಾರ್ಯಕರ್ತರ ಒಗ್ಗಟ್ಟಿನ ಪ್ರಯತ್ನಗಳಿಗೆ ಅಭಿನಂದನೆಗಳು” ಎಂದು ಬರೆಯಲಾಗಿತ್ತು.

ಬಳಿಕ, ಸುವರ್ಣ ನ್ಯೂಸ್‌ ತನ್ನ ಸುದ್ದಿಯನ್ನು ತಿದ್ದಿ “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಲೆಫ್ಟ್ ವಿದ್ಯಾರ್ಥಿ ಘಟಕ ಕ್ಲೀನ್ ಸ್ಪೀಪ್, ಎಬಿವಿಪಿಗೆ ಹಿನ್ನಡೆ!” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದೆ.

ಆದರೆ, ಹೊಸ ಸುದ್ದಿಯಲ್ಲಿ ಡಿಲಿಟ್ ಮಾಡಿರುವ ಹಳೆಯ ಸುದ್ದಿಯ ಫೋಟೋವನ್ನೇ ಹಾಕಿದೆ. ಅಲ್ಲದೆ, ಸುವರ್ಣ ನ್ಯೂಸ್ ಡಿಲಿಟ್ ಮಾಡಿರುವ ಸುದ್ದಿಯ ಲಿಂಕ್ ನಮಗೆ ಲಭ್ಯವಾಗಿದ್ದು, ಅದರಲ್ಲಿ ಎಬಿವಿಪಿಗೆ ಜಯ ಎಂದು ಬರೆದಿರುವುದನ್ನು ನೋಡಬಹುದು.


ಪೋಸ್ಟ್‌ ಕಾರ್ಡ್‌ನ ಸಾಮಾಜಿಕ ಜಾಲತಾಣಗಳಿಂದ ಪೋಸ್ಟರ್‌ನ್ನು ಡಿಲಿಟ್ ಮಾಡಲಾಗಿದೆ. ಆದರೆ, ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಮಾರ್ಚ್‌ 24ರಂದು ಬೆಳಿಗ್ಗೆ 6 ಗಂಟೆ 34 ನಿಮಿಷಕ್ಕೆ ಪೋಸ್ಟ್‌ ಕಾರ್ಡ್ ಇಂಗ್ಲಿಷ್ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟರ್‌ ಅಪ್ಲೋಡ್ ಮಾಡಿರುವುದನ್ನು ತೋರಿಸುತ್ತಿದೆ.

ಫ್ಯಾಕ್ಟ್ ಚೆಕ್ : ಕನ್ನಡದ ಮುಖ್ಯ ವಾಹಿನಿ ಮಾಧ್ಯಮವಾದ ಸುವರ್ಣ ನ್ಯೂಸ್ ಮತ್ತು ಬಲಪಂಥೀಯ ಮಾಧ್ಯಮ ಪೋಸ್ಟ್‌ ಕಾರ್ಡ್‌ ಹಂಚಿಕೊಂಡಿರುವ ಸುದ್ದಿ ಸುಳ್ಳು. ಜೆಎನ್‌ಯು ವಿದ್ಯಾರ್ಥಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ.

ನಾನುಗೌರಿ.ಕಾಂ ನಾವು “ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ” ಎಂಬ ಶೀರ್ಷಿಕೆಯಲ್ಲಿ ವಿವರವಾದ ಸುದ್ದಿಯನ್ನು ಇಂದು (ಮಾ.25) ಪ್ರಕಟಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಿಂದಿ, ಇಂಗ್ಲಿಷ್, ಕನ್ನಡ ಸೇರಿದಂತೆ ದೇಶದ ಬಹುತೇಕ ಎಲ್ಲಾ ಮಾಧ್ಯಮಗಳು ಜೆಎನ್‌ಯು ಚುನಾವಣೆ ಕುರಿತು ಸುದ್ದಿ ಪ್ರಕಟಿಸಿದ್ದು, ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದು ಕೊಂಡಿದೆ ಎಂದಿದೆ.

ಕೆಲವೊಂದಿಷ್ಟು ಸುದ್ದಿಗಳ ಲಿಂಕ್ ಕೆಳಗಡೆ ಇದೆ

ಎಎನ್‌ಐ ಎಕ್ಸ್ ಪೋಸ್ಟ್ ಲಿಂಕ್ 

ಎನ್‌ಡಿಟಿವಿ ಸುದ್ದಿ ಲಿಂಕ್

ಹಿಂದುಸ್ಥಾನ್ ಟೈಮ್ಸ್ ಸುದ್ದಿ ಲಿಂಕ್

ಟೈಮ್ಸ್ ಆಫ್ ಇಂಡಿಯಾ ಸುದ್ದಿ ಲಿಂಕ್

ಮತ್ತೊಂದು ಮಹತ್ವದ ವಿಷಯವೆಂದರೆ ಪೋಸ್ಟ್ ಹಂಚಿಕೊಂಡಿರುವ ಪೋಸ್ಟರ್‌ನಲ್ಲಿರುವುದು ಕೂಡ ಹಳೆ ಫೋಟೋ ಆಗಿದೆ. ಆ ಫೋಟೋ ಕಳೆದ ವರ್ಷ ದೆಹಲಿ ವಿಶ್ವ ವಿದ್ಯಾಲಯಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯದ್ದು, ಈ ಕುರಿತ ಸುದ್ದಿ ಕೆಳಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಹಾಗಾಗಿ, ಸುವರ್ಣ ನ್ಯೂಸ್ ಮತ್ತು ಪೋಸ್ಟ್‌ ಕಾರ್ಡ್ ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯ ಕುರಿತು ಪ್ರಕಟಿಸಿರುವ ಸುದ್ದಿ ಸುಳ್ಳು. ಜೆಎನ್‌ಯು ಚುನಾವಣೆಯಲ್ಲಿ ಎಡ ವಿದ್ಯಾರ್ಥಿಗಳ ಒಕ್ಕೂಟ ಯುನೈಟೆಡ್ ಲೆಫ್ಟ್‌ಗೆ ಭರ್ಜರಿ ಜಯ ಸಾಧಿಸಿದೆ. ಆರ್‌ಎಸ್‌ಎಸ್‌, ಬಿಜೆಪಿಯ ವಿದ್ಯಾರ್ಥಿಯ ಸಂಘಟನೆ ಎಬಿವಿಪಿಗೆ ತೀವ್ರ ಮುಖಭಂಗವಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಮಹಿಳೆಯರಿಗಷ್ಟೇ ಏಕೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...