Homeಮುಖಪುಟಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ' ಎಂದ...

ಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ’ ಎಂದ ಟಿಎಂಸಿ

- Advertisement -
- Advertisement -

ಚುನಾವಣಾ ಬಾಂಡ್ ಮೂಲಕ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಸಾಕಷ್ಟು ಮೊತ್ತದ ಫಂಡ್ ಸ್ವೀಕರಿಸಿದ್ದು, ‘ಚುನಾವಣಾ ಬಾಂಡ್‌ಗಳ ಯೋಜನೆಯಡಿ ಪಕ್ಷಕ್ಕೆ ಯಾರು ಹಣವನ್ನು ದೇಣಿಗೆ ನೀಡಿದ್ದಾರೆ ಎಂಬುದು ಪಕ್ಷಕ್ಕೆ ತಿಳಿದಿಲ್ಲ, ಅದರ ಮೊತ್ತ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಕಚೇರಿಯ ಹೊರಗೆ ಡ್ರಾಪ್ ಬಾಕ್ಸ್ ಇಡಲಾಗಿದೆ’ ಎಂದು ಪಕ್ಷದ ಮುಖಂಡ ನಾಯಕ ಕುನಾಲ್ ಘೋಷ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ಸ್ಪಷ್ಟವಾದ ಹೇಳಿಕೆಯನ್ನು ನೀಡುತ್ತೇನೆ, ಚುನಾವಣಾ ಬಾಂಡ್‌ಗಳನ್ನು ಬಿಜೆಪಿಯವರು ಪ್ರಾರಂಭಿಸಿದರು; ಅದನ್ನು ತರಲು ಅವರು ಕಾನೂನನ್ನು ಮಾಡಿದ್ದಾರೆ. (ಪಶ್ಚಿಮ ಬಂಗಾಳ ಮುಖ್ಯಮಂತ್ರಿ) ಮಮತಾ ಬ್ಯಾನರ್ಜಿ ಅವರು 90ರ ದಶಕದಿಂದಲೂ ರಾಜ್ಯದ ಹಣದ ಮೇಲೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ’ ಎಂದು ಘೋಷ್ ಸುದ್ದಿಗಾರರಿಗೆ ತಿಳಿಸಿದರು.

“ಕಪ್ಪುಹಣ, ದೊಡ್ಡ ಮೊತ್ತದ ಹಣದ ಒಳಹರಿವುಗಳನ್ನು ಕೊನೆಗಾಣಿಸಲು” ಮುಖ್ಯಮಂತ್ರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು.

“ಇದು ಹಲವಾರು ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರ ಬೇಡಿಕೆ ಮತ್ತು ಸಿದ್ಧಾಂತವಾಗಿದೆ. ಆದರೆ, ಬಿಜೆಪಿ ಅದಕ್ಕೆ ಕಿವಿಗೊಡಲಿಲ್ಲ. ಬಿಜೆಪಿಯು ಚುನಾವಣಾ ಬಾಂಡ್‌ಗಳ ರೂಪದಲ್ಲಿ ಹೊಸ ನಿಯಮವನ್ನು ತಂದಿತು ಮತ್ತು ನಾವೆಲ್ಲರೂ ಅದನ್ನು ಅನುಸರಿಸಿದ್ದೇವೆ. ತೃಣಮೂಲ ಕಾಂಗ್ರೆಸ್‌ಗೆ ಎಷ್ಟು ಹಣ ಬಂದಿದೆ ಎಂದು ತಿಳಿದಿಲ್ಲ. ತೃಣಮೂಲ ಕಾಂಗ್ರೆಸ್ ಕಟ್ಟಡದ ಮುಂದೆ ಡ್ರಾಪ್ ಬಾಕ್ಸ್ ಇಡಲಾಗಿತ್ತು; ಅದನ್ನು ಪಕ್ಷಕ್ಕೆ ನೀಡಲಾಗಿದೆ’ ಎಂದು ವಿವರಿಸಿದರು.

‘ಕೇಂದ್ರ ಸರ್ಕಾರ ಪರಿಚಯಿಸಿದ ಕಾನೂನಿನ ಪ್ರಕಾರ, ಚುನಾವಣಾ ಬಾಂಡ್‌ಗೆ ಆಲ್ಫಾನ್ಯೂಮರಿಕ್ ಕೋಡ್ ಮಾತ್ರ ಇರುತ್ತದೆ, ಅದರಲ್ಲಿ ಕೊಟ್ಟವರ ಹೆಸರಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಹೇಳಿದರು.

“ಇದು ಯಾವ ಕಂಪನಿ ಅಥವಾ ದಾನಿ ಯಾರು ಎಂದು ನಮೂದಿಸಲಾಗಿಲ್ಲ. ಬಿಜೆಪಿ ಈ ವ್ಯವಸ್ಥೆಯನ್ನು ದೇಶದಲ್ಲಿ ಪರಿಚಯಿಸಿತು. ಕೇಂದ್ರೀಯ ತನಿಖಾ ಮತ್ತು ಜಾರಿ ನಿರ್ದೇಶನಾಲಯವು ಅವರ ಹಿಡಿತದಲ್ಲಿ ಇರುವುದರಿಂದ ಅವರಿಗೆ ಹಣ ನೀಡಿದವರು ಯಾರು ಎಂದು ಅವರಿಗೆ ತಿಳಿದಿದೆ. ಬಿಜೆಪಿಯವರು ಬಾಂಡ್‌ಗಳ ಮೂಲಕ ಹಣವನ್ನು ಸಂಗ್ರಹಿಸಲು ಈ ಏಜೆನ್ಸಿಗಳನ್ನು ಬಳಸಿದರು” ಎಂದು ಆರೋಪಿಸಿದರು.

“ಆದರೆ, ತೃಣಮೂಲ ಕಾಂಗ್ರೆಸ್‌ಗೆ ಈ ಯಾವುದೇ ಏಜೆನ್ಸಿಗಳಿಲ್ಲ, ನಮಗೆ ಎಷ್ಟು ಹಣವನ್ನು ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ನಾವು ಡ್ರಾಪ್ ಬಾಕ್ಸ್‌ನಿಂದ ಹಣವನ್ನು ಸಂಗ್ರಹಿಸಿದ್ದೇವೆ, ಅದನ್ನು ಯಾವುದೇ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿಲ್ಲ. ನಂತರ ನಾವು ಎನ್‌ಕ್ಯಾಶ್ ಮಾಡಿದ್ದೇವೆ. ನಿಯಮಗಳ ಪ್ರಕಾರ ಹಣ ನೋಂದಾಯಿಸಲಾಗಿದೆ.  ಆದ್ದರಿಂದ, ತೃಣಮೂಲ ಕಾಂಗ್ರೆಸ್ ಆ ವ್ಯಕ್ತಿಯಿಂದ ಏಕೆ ಹಣವನ್ನು ತೆಗೆದುಕೊಂಡಿತು ಎಂಬ ಪ್ರಶ್ನೆಯು ನ್ಯಾಯಸಮ್ಮತವಲ್ಲ. ಏಕೆಂದರೆ, ನಮಗೆ ಹಣ ನೀಡಿದವರು ಯಾರು ಎಂದು ಪಕ್ಷಕ್ಕೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಮಾಹಿತಿಯ ಪ್ರಕಾರ, ತೃಣಮೂಲ ಕಾಂಗ್ರೆಸ್‌ಗೆ ಅಗ್ರ 10 ದೇಣಿಗೆದಾರ ಪಕ್ಷವಾಗಿದ್ದು, ₹1,198 ಕೋಟಿ ಫಂಡ್ ಸ್ವೀಕರಿಸಿದೆ.

ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವಿಸಸ್ ತೃಣಮೂಲ ಕಾಂಗ್ರೆಸ್‌ಗೆ ₹542 ಕೋಟಿ ನೀಡುವ ಮೂಲಕ ಅಗ್ರ ದಾನಿಯಾಗಿದ್ದು, ಹಲ್ದಿಯಾ ಎನರ್ಜಿ ಲಿಮಿಟೆಡ್ ₹281 ಕೋಟಿ, ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ₹90 ಕೋಟಿ, ಎಂಕೆಜೆ ಎಂಟರ್‌ಪ್ರೈಸಸ್ ಮತ್ತು ಏವೀಸ್ ಟ್ರೇಡಿಂಗ್ ತಲಾ ₹46 ಕೋಟಿ ಮೌಲ್ಯದ ಬಾಂಡ್ ನೀಡಿದೆ.

ಬಿಜೆಪಿಗೆ ಟಾಪ್ 10 ದೇಣಿಗೆದಾರರು ಒಟ್ಟು ₹2,123 ಕೋಟಿ ದೇಣಿಗೆ ನೀಡಿದ್ದರೆ, ಕಾಂಗ್ರೆಸ್‌ಗೆ ₹615 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಪ್ರಕಟವಾದ ಅಂಕಿಅಂಶಗಳು ಬಹಿರಂಗಪಡಿಸಿವೆ.

ಸುಮಾರು 1,300 ಘಟಕಗಳು ₹12,000 ಕೋಟಿಗೂ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ನಂತರ ಅವುಗಳನ್ನು 23 ರಾಜಕೀಯ ಪಕ್ಷಗಳಿಗೆ ವಿತರಿಸಲಾಯಿತು ಎಂದು ಎಸ್‌ಬಿಐ ಅಂಕಿಅಂಶಗಳು ಮತ್ತಷ್ಟು ತೋರಿಸಿವೆ.

ಇದನ್ನೂ ಓದಿ; ‘ಅರವಿಂದ್ ಕೇಜ್ರಿವಾಲ್ ಈಗ ಹೆಚ್ಚು ಅಪಾಯಕಾರಿ; ಪಿಎಂ ಮೋದಿ ದೆಹಲಿ ಸಿಎಂಗೆ ಹೆದರುತ್ತಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...