Homeಮುಖಪುಟ'ಭಾರತ್ ಮಾತಾ ಕಿ ಜೈ’ ಘೋಷಣೆ ಮೊದಲು ಕೂಗಿದ್ದು ಮುಸ್ಲಿಮರು ಎಂದು ಸಂಘಪರಿವಾರಕ್ಕೆ ಗೊತ್ತಿಲ್ಲದಂತಿದೆ: ಸಿಎಂ...

‘ಭಾರತ್ ಮಾತಾ ಕಿ ಜೈ’ ಘೋಷಣೆ ಮೊದಲು ಕೂಗಿದ್ದು ಮುಸ್ಲಿಮರು ಎಂದು ಸಂಘಪರಿವಾರಕ್ಕೆ ಗೊತ್ತಿಲ್ಲದಂತಿದೆ: ಸಿಎಂ ಪಿಣರಾಯ್‌ ವಿಜಯನ್

- Advertisement -
- Advertisement -

‘ಭಾರತ್ ಮಾತಾ ಕಿ ಜೈ’ ಮತ್ತು ‘ಜೈ ಹಿಂದ್’ ಘೋಷಣೆಗಳನ್ನು ಮೊದಲು ಇಬ್ಬರು ಮುಸ್ಲಿಮರು ಕೂಗಿದ್ದು, ಸಂಘ ಪರಿವಾರವು ಅವರನ್ನು ಕೈಬಿಡಲು ಸಿದ್ಧವಾಗಿದೆಯೇ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ.

ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಸಿಪಿಐ(ಎಂ) ರಾಜ್ಯದಲ್ಲಿ ಆಯೋಜಿಸಿದ್ದ  ನಾಲ್ಕನೇ ರ್ಯಾಲಿಯನ್ನು ಉದ್ದೇಶಿಸಿ ಮುಸ್ಲಿಂ ಪ್ರಾಬಲ್ಯದ ಉತ್ತರ ಕೇರಳ ಜಿಲ್ಲೆಯಲ್ಲಿ ಮಾತನಾಡಿದ ಪಿಣರಾಯ್‌ ವಿಜಯನ್‌, ಮುಸ್ಲಿಂ ಆಡಳಿತಗಾರರು ಮತ್ತು ಸಾಂಸ್ಕೃತಿಕ ಪ್ರತಿಭೆಗಳು ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಅಜೀಮುಲ್ಲಾ ಖಾನ್ ಎಂಬ ಮುಸ್ಲಿಂ ವ್ಯಕ್ತಿ ‘ಭಾರತ್ ಮಾತಾ ಕಿ ಜೈ’ ಘೋಷಣೆಯನ್ನು ಮೊದಲು ಕೂಗಿದ್ದಾರೆ. ಇಲ್ಲಿಗೆ ಬಂದ ಕೆಲವು ಸಂಘಪರಿವಾರದ ಮುಖಂಡರು ತಮ್ಮ ಮುಂದೆ ಕುಳಿತವರಿಗೆ ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗುವಂತೆ ಹೇಳಿದ್ದಾರೆ. ಘೋಷಣೆಯನ್ನು ರೂಪಿಸಿದವರು ಯಾರು? ಅವರ ಹೆಸರು ಅಜೀಮುಲ್ಲಾ ಖಾನ್ ಎಂಬುವುದು ಸಂಘಪರಿವಾರಕ್ಕೆ ಗೊತ್ತಿದೆಯೋ ಇಲ್ಲವೋ ಗೊತ್ತಿಲ್ಲ ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಈ ಘೋಷಣೆಯನ್ನು ರೂಪಿಸಿದವರು ಮುಸ್ಲಿಮರು ಎಂದು ಗೊತ್ತಾದರೆ ಅವರು ಆ ಘೋಷಣೆಯನ್ನು ಬಳಸುವುದನ್ನು ನಿಲ್ಲಿಸುತ್ತಾರೆಯೇ ಎಂದು ನನಗೆ ತಿಳಿದಿಲ್ಲ. ‘ಜೈ ಹಿಂದ್’ ಘೋಷಣೆಯನ್ನು ಮೊದಲು ಘೋಷಿಸಿದವರು ಅಬಿದ್ ಹಸನ್ ಎಂಬವರಾಗಿದ್ದಾರೆ. ಮೊಘಲ್ ಚಕ್ರವರ್ತಿ ಷಹಜಹಾನ್ ಅವರ ಮಗ ದಾರಾ ಶಿಕೋ ಅವರು ಮಾಡಿದ ಮೂಲ ಸಂಸ್ಕೃತ ಪಠ್ಯದಿಂದ ಪರ್ಷಿಯನ್ ಭಾಷೆಗೆ 50ಕ್ಕೂ ಹೆಚ್ಚು ಉಪನಿಷತ್ತುಗಳ ಅನುವಾದಗಳು ಭಾರತೀಯ ಪಠ್ಯಗಳು ಪ್ರಪಂಚದಾದ್ಯಂತ ತಲುಪಲು ಸಹಾಯ ಮಾಡಿದೆ ಎಂದು ಪಿಣರಾಯ್‌ ವಿಜಯನ್ ಹೇಳಿದ್ದಾರೆ.

ಭಾರತದಿಂದ ಪಾಕಿಸ್ತಾನಕ್ಕೆ ಮುಸ್ಲಿಮರನ್ನು ಕಳುಹಿಸಬೇಕು ಎಂದು ಪ್ರತಿಪಾದಿಸುವ ಸಂಘಪರಿವಾರದ ನಾಯಕರು ಮತ್ತು ಕಾರ್ಯಕರ್ತರು ಈ ಐತಿಹಾಸಿಕ ಸಂದರ್ಭವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ ಸಿಎಂ ಪಿಣರಾಯ್‌ ವಿಜಯನ್‌, ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಇತರರೊಂದಿಗೆ ಮುಸ್ಲಿಮರೂ ಕೂಡ ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಅಲ್ಪಸಂಖ್ಯಾತರನ್ನು ರಕ್ಷಿಸುವವರಿಗೆ ಮತ ನೀಡಿ’: ಸಿರೊ ಮಲಬಾರ್ ಚರ್ಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...