HomeUncategorizedಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ...

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ರಾಜ್ಯಕ್ಕೆ ಜಿಎಸ್‌ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್,  ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ ಎಂದು ಹೇಳಿದ್ದರು. ಇದರ ಬೆನ್ನಿಗೆ ಸೋಮವಾರ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟಿದ್ದಾರೆ.

ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್‌ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. ಹಣಕಾಸು ಆಯೋಗದವರು 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21ರಲ್ಲಿ ರೂ. 5495 ಕೋಟಿ ಹಣ ಕಡಿಮೆಯಾಗಿತ್ತು. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಸ್ವತಃ ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದದ್ದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021 ನೇ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆಯಲ್ಲ ಇದೇನು? ಎಂದು ಅವರು ಕುಟುಕಿದರು.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಕೇವಲ ರೂ.31180 ಕೋಟಿಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ ನಷ್ಟ ರೂ. 5495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಒಟ್ಟಾರೆ, ರೂ.11495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ.

ಈ ಬಗ್ಗೆ ಪ್ರಶ್ನೆ ಮಾಡಿದರೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಿರುವುದು ಸುಳ್ಳು ಎನ್ನುತ್ತಿದ್ದಾರೆ. ಅಸಲಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸೆಪ್ಟೆಂಬರ್ 17 2020ರಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಕೋರಿದ್ದರು. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಸೀತಾರಾಮನ್ ಅವರಿಗೆ ಪತ್ರ ಬೆರೆದಿದ್ದರು. ಈ ಎಲ್ಲಾ ವಿಚಾರಗಳೂ ದಿನಪತ್ರಿಕೆಗಳಲ್ಲೂ ಸಹ ವರದಿಯಾಗಿತ್ತು. ಹಾಗಾದರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರೂ ಸಹ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾತಿನಲ್ಲೇ ತಿವಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದ್ರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ವಿಷಾದಿಸಿದರು.

ಹಣಕಾಸು ಆಯೋಗದ ಶಿಫಾರಸು ಮಾಡಿದ ನಮ್ಮ ಅನುದಾನವನ್ನು ನಾವು ಸಂವಿಧಾನಾತ್ಮಕವಾಗಿಯೇ ಕೇಳುತ್ತಿದ್ದೇವೆಯೇ ವಿನಃ ನಾವೇನು ಭಿಕ್ಷೆ ಕೇಳುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

ನಮ್ಮ ರಾಜ್ಯದ ಹಕ್ಕನ್ನು ಕೇಳಿದರೆ ಕೇಂದ್ರ ಸರ್ಕಾರ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಆರೋಪ ಹೊರಿಸಿ ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ಹೀಗೆ ರಾಜ್ಯದ ಹಿತದ ವಿಚಾರದಲ್ಲಿ ಸುಳ್ಳು ಹೇಳಿ ಜನರನ್ನು ಗೊಂದಲಕ್ಕೀಡು ಮಾಡುತ್ತಿರುವುದು ಸರಿಯಲ್ಲ. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೈಸೂರಿನಲ್ಲಿ ಬಹಿರಂಗ ಚರ್ಚೆಯಾಗಲಿ. ಈ ಚರ್ಚೆಗೆ ನಾವು ಸಿದ್ದ ಮಾನ್ಯ ನಿರ್ಮಲಾ ಸೀತಾರಾಮನ್ ಅವರು ಸಿದ್ದವಿದ್ದಾರ? ಎಂದು ಅವರು ಇದೇ ಸಂದರ್ಭದಲ್ಲಿ ಸವಾಲು ಹಾಕಿದರು.

ಅಲ್ಲದೆ, ಈ ವಿಚಾರದಲ್ಲಿ ಕೆಸರೆರಚಾಟ, ರಾಜಕೀಯ ತೆವಲಾಟ ಆಗಬಾರದು. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಮಲತಾಯಿ ಧೋರಣೆ ಅನ್ಯಾಯ ಮಾಡಬಾರದು ಎಂದು ಅವರು ಕೇಂದ್ರ ಸರ್ಕಾರವನ್ನು ವಿನಂತಿಸಿದರು.ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ರೂ.11,200 ಕೋಟಿ ಹಣವನ್ನೂ ಸಹ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಇವರಿಂದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ತೆರಿಗೆಯಿಂದ ನಮ್ಮ ನ್ಯಾಯಯುತ ಪಾಲನ್ನು ಕೊಟ್ಟರೆ ಸಾಕು. ನಮ್ಮ ರಾಜ್ಯಕ್ಕೆ ಬರಬೇಕಾದ ಬರಪರಿಹಾರವನ್ನು ಕೊಡಲಿ. ನಿಮ್ಮ ಉದಾರತನವೇನು ಬೇಕಾಗಿಲ್ಲ. ಕರ್ನಾಟಕದ ಜನ ಇರುವುದು ಕೇವಲ ಓಟು ಒತ್ತೋಕಷ್ಟೇ ಎಂಬ ಭಾವನೆಯಿಂದ ಕೇಂದ್ರ ಸರ್ಕಾರ ಹೊರಬರಲಿ. ನಮ್ಮನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದನ್ನು ಬಿಡಲಿ. ನಮ್ಮ ಹಕ್ಕನ್ನು ನಮಗೆ ಕೊಡಲಿ ಎಂದು ಅವರು ಒತ್ತಾಯಿಸಿದರು.

ಇದನ್ನು ಓದಿ:ಡಾರ್ಜಿಲಿಂಗ್: ಸ್ವಪಕ್ಷದ ಅಭ್ಯರ್ಥಿ ವಿರುದ್ಧ ಬಿಜೆಪಿ ಶಾಸಕ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...