Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಮತದಾನಕ್ಕೆ ಅಮೆರಿಕ ಗೈರು. ಇತರ 14 ರಾಷ್ಟ್ರಗಳಿಂದ ನಿರ್ಣಯಕ್ಕೆ ಬೆಂಬಲ

- Advertisement -
- Advertisement -

ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.

ಪ್ರತಿ ಬಾರಿಯೂ ನಿರ್ಣಯದ ವಿರುದ್ಧ ಮತ ಚಲಾಯಿಸುತ್ತಿದ್ದ ಅಥವಾ ವೀಟೋ ಆಧಿಕಾರ ಚಲಾಯಿಸಿ ನಿರ್ಣಯ ಅಂಗೀಕಾರಗೊಳ್ಳದಂತೆ ತಡೆಯುತ್ತಿದ್ದ ಯುಎಸ್ ಈ ಬಾರಿ ಮತದಾನಕ್ಕೆ ಗೈರಾಗಿತ್ತು. ಹಾಗಾಗಿ, ಮೊದಲ ಬಾರಿಗೆ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರಗೊಂಡಿದೆ.

ಯುಎಸ್ ಹೊರತುಪಡಿಸಿ ಭದ್ರತಾ ಮಂಡಳಿಯ ಇತರ 14 ಸದಸ್ಯರು ನಿರ್ಣಯದ ಪರ ಮತ ಚಲಾಯಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ತಕ್ಷಣ ನಿಲ್ಲಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ನಿಶ್ಶರ್ತವಾಗಿ ಬಿಡುಗಡೆ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನೆತನ್ಯಾಹು ಕಿಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಿಡಿ ಕಾರಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಈ ಮೂಲಕ ಹಮಾಸ್ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸಿತ್ತು. ಆದರೆ, ಅದಕ್ಕೆ ಹಿನ್ನಡೆಯಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ಕದನ ವಿರಾಮ ನಿರ್ಣಯ ಅಂಗೀಕರಿಸಲು ಅನುವು ಮಾಡಿಕೊಟ್ಟ ಯುಎಸ್ ವಿರುದ್ಧ ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಾರ ವಾಷಿಂಗ್ಟನ್‌ನಲ್ಲಿ ಇಸ್ರೇಲಿ ನಿಯೋಗ ಮತ್ತು ಯುಎಸ್ ಅಧಿಕಾರಿಗಳ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

ಪ್ಯಾಲೆಸ್ತೀನ್ ಸ್ವಾಗತ

ವಿಶ್ವ ಸಂಸ್ಥೆಗೆ ಪ್ಯಾಲೆಸ್ತೀನ್‌ನ ರಾಯಭಾರಿಯಾಗಿರುವ ರಿಯಾದ್ ಮನ್ಸೂರ್ ಅವರು ಭದ್ರತಾ ಮಂಡಳಿಯ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ, ಅದು ತುಂಬಾ ವಿಳಂಬವಾಯಿತು ಎಂದಿದ್ದಾರೆ.

ಇಸ್ರೇಲ್ ಆಕ್ರಮಣದಿಂದ 1 ಲಕ್ಷಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ. ಎರಡು ಮಿಲಿಯನ್ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಗಾಝಾದ ಪರಿಸ್ಥಿತಿ ನರಕ ಸದೃಶ್ಯವಾಗಿದೆ. ಇಷ್ಟೆಲ್ಲಾ ಆಗಿ 6 ತಿಂಗಳ ಬಳಿಕ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಿಯಾದ್ ಮನ್ಸೂರ್ ಹೇಳಿದ್ದಾರೆ.

ಹಮಾಸ್ ಸ್ವಾಗತ

ಭದ್ರತಾ ಮಂಡಳಿಯ ನಿರ್ಣಯವನ್ನು ಹಮಾಸ್ ಸ್ವಾಗತಿಸಿದೆ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಿದ್ದರಿದ್ದೇವೆ ಎಂದಿದೆ. ಆದರೆ, ನಾವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕು ಎಂದು ಷರತ್ತು ವಿಧಿಸಿದೆ.

ಯುಎಸ್ ಪ್ರತಿಕ್ರಿಯೆ

ಮತದಾನದಿಂದ ದೂರ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ನಿರ್ಣಯ ಅಂಗೀಕರಿಸುವ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಕದನ ವಿರಾಮದ ಪರವಾಗಿಯೇ ಇದ್ದೇವೆ. ಆದರೆ, ನಿರ್ಣಯದಲ್ಲಿ ಹಮಾಸ್‌ ಅನ್ನು ಖಂಡಿಸುವ ವಿಷಯವಿಲ್ಲ. ಹಾಗಾಗಿ, ಅದರ ಪರ ನಾವು ಮತ ಚಲಾಯಿಸಿಲ್ಲ ಎಂದಿದ್ದಾರೆ.

ತಕ್ಷಣ ನಿರ್ಣಯ ಜಾರಿಗೆ ಗುಟೆರೆಸ್ ಆಗ್ರಹ

ಭದ್ರತಾ ಮಂಡಳಿಯ ನಿರ್ಣಯದಂತೆ ತಕ್ಷಣ ಕದನ ವಿರಾಮ ಜಾರಿಗೊಳಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ‍‍‍‍ ‍‍‍‍‍‍‍‍‍‍‍‍‍‍‍‍‍‍ಷರತ್ತು ವಿಧಿಸದೆ ಪರಸ್ಪರ ಬಿಡುಗಡೆಗೊಳಿಸಬೇಕು ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಗ್ರಹಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಮಾರಣಹೋಮಕ್ಕೆ ಇದುವರೆಗೆ ಸುಮಾರು 32 ಸಾವಿರ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದಾರೆ. ಪ್ರತಿದಿನ 100-200 ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಆರಂಭದಲ್ಲಿ ಹಮಾಸ್ ನಮ್ಮ ಗುರಿ ನಾವು ನಾಗರಿಕರಿಗೆ ಏನೂ ಮಾಡುವುದಿಲ್ಲ ಎನ್ನುತ್ತಿಲ್ಲ ಇಸ್ರೇಲ್, ಪ್ರಸ್ತುತ ನಾಗರಿಕರನ್ನು ಗುರಿಯಾಗಿಸಿ ರಕ್ತ ಹರಿಸುತ್ತಿದೆ. ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ವಿವಿಧ ರಾಷ್ಟ್ರಗಳು ಯುದ್ಧ ನಿರಾಶ್ರಿತರಿಗೆ ಕಳುಹಿಸುವ ನೆರವು ವಿತರಣೆಗೆ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕುಡಿಯುವ ನೀರು ಪೋಲು; ಬೆಂಗಳೂರಿನ 22 ಕುಟುಂಬಗಳಿಗೆ ತಲಾ ₹5,000 ದಂಡ ವಿಧಿಸಿದ ಜಲ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...