Homeಮುಖಪುಟದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ಎನ್‌ಪಿಆರ್ ಹಿಂದಿದೆಯಾ ಎನ್ಅರ್‌ಸಿ ಹುನ್ನಾರ? ಸರ್ಕಾರದ ಮುಂದೆ ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ಜನವರಿ 8, 2019ರಂದು ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿದೆ. ಆ ಬಳಿಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಧರ್ಮೀಯರಿಗೆ ಭಾರತೀಯ ಪೌರತ್ವ ಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಮುಸ್ಲಿಮರನ್ನು ಕೈ ಬಿಟ್ಟು ಕಾಯ್ದೆಗೆ ತಿದ್ದುಪಡಿ ತಂದಿರುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ, ಮುಸ್ಲಿಂ ಲೀಗ್ ಸೇರಿದಂತೆ ನೂರಾರು ಮಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.

ಸಿಎಎ ಮಸೂದೆ ಲೋಕಸಭೆಯಲ್ಲಿ ಪರಿಚಯಿಸಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ ಸಿಎಎ ಬಳಿಕ ದೇಶದಾದ್ಯಂತ ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಗೊಳಿಸುವುದಾಗಿ ಹೇಳಿದ್ದರು. ಆ ಮಾತು ಈಗ ನಿಜವಾಗುವ ಆತಂಕ ಎದುರಾಗಿದೆ.

ಸಿಎಎ ಜಾರಿಗೊಳಿಸುವಾಗ, ಇದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಈಗಲೂ ಅದನ್ನೇ ಹೇಳುತ್ತಿದೆ. ಆದರೆ, ಈಗ ಸಿಎಎ ಬಳಿಕ ಸರ್ಕಾರ ಎನ್‌ಆರ್‌ಸಿ ಜಾರಿಗೊಳಿಸುವ ಸಾಧ್ಯತೆಯಿದ್ದು, ಒಂದು ವೇಳೆ ಎನ್‌ಆರ್‌ಸಿ ಜಾರಿಯಾದರೆ ಕೋಟ್ಯಾಂತರ ಭಾರತೀಯ ಪೌರತ್ವಕ್ಕೆ ಕುತ್ತು ಬರುವುದರಲ್ಲಿ ಅನುಮಾನವಿಲ್ಲ.

ಈ ಕುರಿತು ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ)ಯ ರಾಜ್ಯಸಭೆ ಸಂಸದ ಸಾಕೇತ್ ಗೋಖಲೆ ಕೆಲವೊಂದು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಗಂಭೀರ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಸಾಕೇತ್ ಗೋಖಲೆ ಪ್ರಕಾರ, ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನ ಗಣತಿ ನಡೆಯುತ್ತದೆ. ಕೊನೆಯದಾಗಿ 2011ರಲ್ಲಿ ಗಣತಿ ನಡೆದಿದೆ. ಆ ಬಳಿಕ 2021ರಲ್ಲಿ ಗಣತಿ ನಡೆಯಬೇಕಿತ್ತು. ಆದರೆ, ಕೋವಿಡ್ ನೆಪ ಹೇಳಿ ಸರ್ಕಾರ ಗಣತಿ ನಡೆಸಿಲ್ಲ.

ಪ್ರಸ್ತುತ ಲೋಕಸಭೆ ಚುನಾವಣೆಗೆ ದೇಶ ಸಿದ್ದವಾಗಿ ನಿಂತಿದೆ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಬಿಜೆಪಿ ಸರ್ಕಾರ ಬಂದರೆ ಎನ್‌ಆರ್‌ಸಿ ಮೂಲಕವೇ ಜನಗಣತಿ ನಡೆಸುವುದು ಸರ್ಕಾರದ ಹುನ್ನಾರ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಗೋಖಲೆ ಪ್ರಕಾರ, ಗೃಹ ಇಲಾಖೆಯ ಅಧೀನದ ಕೇಂದ್ರ ಸರ್ಕಾರದ ಜನಗಣತಿಯ ವೆಬ್‌ಸೈಟ್‌ ತೆರೆದರೆ ಅಲ್ಲಿ ‘National Population Register’ (NPR) ಎಂದು ಕಾಣುತ್ತದೆ. ಈ ಎನ್‌ಪಿಆರ್ ಅನ್ನು ‘ಪೌರತ್ವದ ನಿಯಮ 3 (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು-2003’ ಅಡಿಯಲ್ಲಿ ಮಾಡಲಾಗಿದೆ. ನಿಯಮಗಳ ಪ್ರಕಾರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಗೆ ವ್ಯತ್ಯಾಸವಿಲ್ಲ.

ಹಾಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾದರೆ ದೇಶದಾದ್ಯಂತ ಎನ್‌ಆರ್‌ಸಿ ಜಾರಿಯಾಗುವುದು ಖಂಡಿತ. ಇಲ್ಲದಿದ್ದರೆ ವೆಬ್‌ಸೈಟ್‌ನಲ್ಲಿರುವ ಎನ್‌ಪಿಆರ್ ಎಂಬುವುದನ್ನು ಯಾಕೆ ಸರ್ಕಾರ ತೆಗೆದು ಹಾಕಿಲ್ಲ?. ಮುಂದಿನ ಗಣತಿಯನ್ನು ಎನ್‌ಪಿಆರ್ ಮೂಲಕ ಮಾಡುತ್ತೇವೆ ಎಂದು ಪ್ರಧಾನಿ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾಕೆ ಯಾವುದೇ ಮಾಹಿತಿ ನೀಡಿಲ್ಲ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಸಿಎಎ ಕಾಯ್ದೆ ಅಂಗೀಕಾರಗೊಂಡಾಗ ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಪೌರತ್ವಕ್ಕೆ ಕುತ್ತು ಬರುವ ಆತಂಕ ವ್ಯಕ್ತಪಡಿಸಿದ ಕೋಟ್ಯಾಂತರ ಮುಸ್ಲಿಮರು ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ತಕ್ಷಣಕ್ಕೆ ಕಾಯ್ದೆ ಜಾರಿಗೊಳಿಸದ ಕೇಂದ್ರ ಸರ್ಕಾರ, ಚುನಾವಣೆ ಹತ್ತಿರ ಬರುವಾಗ ಕಾಯ್ದೆಯ ನಿಯಮಗಳನ್ನು ಪ್ರಕಟಿಸಿದೆ.

ಎನ್‌ಪಿಆರ್ ಅಂದರೆ ಏನು? 

ಜನಗಣತಿಯ ವೆಬ್‌ಸೈಟ್‌ನಲ್ಲಿ ಹೇಳಿದಂತೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಸಾಮಾನ್ಯವಾಗಿ ಹಳ್ಳಿ ಅಥವಾ ಗ್ರಾಮೀಣ ಪ್ರದೇಶ, ಪಟ್ಟಣ ಅಥವಾ ವಾರ್ಡ್, ಪಟ್ಟಣ ಅಥವಾ ನಗರ ಪ್ರದೇಶದ ವಾರ್ಡ್‌ನೊಳಗೆ ಗುರುತಿಸಲಾದ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರುವ ನೋಂದಣಿಯಾಗಿದೆ. ಎನ್‌ಪಿಆರ್ ಅನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ಇದನ್ನು 1995ರ ಪೌರತ್ವ ಕಾಯ್ದೆಯಡಿ ಬರುವ ನಿಯಮ 3 ರ ಪೌರತ್ವ (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು- 2003, ಉಪ ನಿಯಮ (4) ಅಡಿ 2015ರಲ್ಲಿ ನವೀಕರಿಸಲಾಗಿದೆ. ನವೀಕರಣದಡಿ ಮುಂದಿನ ಗಣತಿಯಲ್ಲಿ ಜನನ, ಮರಣ, ವಲಸೆಯ ಬದಲಾವಣೆಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ದೇಶದ ಸಾಮಾನ್ಯ ನಿವಾಸಿಗಳ ಸಮಗ್ರ ಡೇಟಾಬೇಸ್ ಅನ್ನು ರಚಿಸುವುದು ಎನ್‌ಪಿಆರ್‌ನ ಉದ್ದೇಶವಾಗಿದೆ. ಎನ್‌ಪಿಆರ್ ಅಡಿ ಗಣತಿ ಮಾಡುವಾಗ ಯಾವುದೇ ದಾಖಲೆ ಸಂಗ್ರಹಿಸುವುದಿಲ್ಲ.

ಇದನ್ನೂ ಓದಿ : ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...