Homeಮುಖಪುಟಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಡಾಖ್‌ಗೆ ರಾಜ್ಯ ಸ್ಥಾನಮಾನವನ್ನು ನೀಡಬೇಕು ಮತ್ತು ಬುಡಕಟ್ಟು ಪ್ರದೇಶಗಳನ್ನು ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ  ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 20ನೇ ದಿನಕ್ಕೆ ಕಾಲಿಟ್ಟಿದೆ.

ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರಕಾರವು ಸ್ಪಂದಿಸದಿರುವುದಕ್ಕೆ ನಿರಾಶೆಯನ್ನು ವ್ಯಕ್ತಪಡಿಸಿದ್ದು, ತಾನು ದಣಿದಿರುವಂತೆ ಭಾಸವಾಗುತ್ತಿದೆ ಮತ್ತು ತನ್ನ ಶರೀರವು ನೋವನ್ನು ಅನುಭವಿಸುತ್ತಿದೆ, ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ ಕೇವಲ ನೀರು ಮತ್ತು ಉಪ್ಪು ಸೇವಿಸುವ ಮೂಲಕ ತಾನು ಬದುಕಿದ್ದೇನೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಸಾಮಾನ್ಯ ನಾಗರಿಕರ ಕೃತಜ್ಞತೆಗಳು, ತಾನಿನ್ನೂ ನಂಬಿಕೆಯನ್ನು ಕಳೆದುಕೊಂಡಿಲ್ಲ. ಲಡಾಖ್‌ಗೆ ಇಂತಹ ಬೆಂಬಲವನ್ನು ನೀಡುತ್ತಿರುವ, ಸ್ವತಃ ಮಾಧ್ಯಮಗಳಾಗಿ ನಮ್ಮ ಮಾತುಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ತಲುಪಿಸುತ್ತಿರುವ ಎಲ್ಲ ಅಧಿಕಾರರಹಿತ ನಾಗರಿಕರಿಗೆ ಕೃತಜ್ಞತೆಗಳು. ಇದು ನಮ್ಮ ಪ್ರಧಾನಿ ಮತ್ತು ಗೃಹಸಚಿವರು ಹಾಗೂ ಗೌರವಾನ್ವಿತ ರಾಷ್ಟ್ರಪತಿಗಳಿಗೂ ತಲುಪುತ್ತದೆ ಎನ್ನುವ ನಂಬಿಕೆ ನನಗಿದೆ. ಅವರು ಶೀಘ್ರದಲ್ಲಿಯೇ ವಾಸ್ತವವನ್ನು ಅರ್ಥ ಮಾಡಿಕೊಳ್ಳುತ್ತಾರೆ ಮತ್ತು ನ್ಯಾಯವನ್ನು ನೀಡುತ್ತಾರೆ ಎಂಬ ನಂಬಿಕೆಯು ಈಗಲೂ ನನ್ನಲ್ಲಿದೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್ ನ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು 3,000 ಜನರು ತನ್ನೊಂದಿಗೆ ಉಪವಾಸವನ್ನು ಮುಂದುವರಿಸಿದ್ದಾರೆ. ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳ ಪ್ರತ್ಯೇಕ ಲೋಕಸಭಾ ಸ್ಥಾನಗಳು, ವಿಶೇಷ ಭೂಮಿ ಮತ್ತು ಉದ್ಯೋಗ ಹಕ್ಕುಗಳು ಮತ್ತು ಲೋಕಸೇವಾ ಆಯೋಗದ ಸ್ಥಾಪನೆಯನ್ನೂ ಅವರು ಕೋರಿದ್ದಾರೆ. ಪ್ರಸ್ತುತ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನದಡಿ ಕೈಗಾರಿಕಾ ಶೋಷಣೆಯಿಂದಾಗಿ ಲಡಾಖ್‌ ಪರಿಸರ ವ್ಯವಸ್ಥೆ ಶಿಥಿಲಗೊಳ್ಳುವ ಬಗ್ಗೆಯೂ ಅವರು ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಇಲ್ಲಿ ವಾಂಗ್ಚುಕ್ ಜೊತೆ ಸೇರಿಕೊಂಡ 5,000 ಜನರು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದರು, ಈ ಪೈಕಿ 300 ಜನರು ಮೂರು ದಿನಗಳಿಂದ ಹತ್ತು ದಿನಗಳವರೆಗೆ ಉಪವಾಸವನ್ನು ಮುಂದುವರಿಸಲು ಸಂಕಲ್ಪ ಮಾಡಿದ್ದಾರೆ. ಜೊತೆಗೆ ದೇಶಾದ್ಯಂತ 40 ನಗರಗಳಲ್ಲಿ ಫ್ರೆಂಡ್ಸ್ ಆಫ್ ಲಡಾಖ್  ಕಾರ್ಯಕ್ರಮಗಳು ನಡೆದಿದೆ.

ವಾಂಗ್ಚುಕ್ ಅವರು 10,000 ಲಡಾಕಿ ಕುರುಬರು ಮತ್ತು ರೈತರ ಜೊತೆ ಗಡಿಯುದ್ದಕ್ಕೂ ಮೆರವಣಿಗೆಯನ್ನು ನಡೆಸುವುದಾಗಿ ಈ ಹಿಂದೆ ಹೇಳಿದ್ದರು, ಮೆರವಣಿಗೆ ಮೂಲಕ ನೆಲದ ವಾಸ್ತವತೆಯನ್ನು ತಿಳಿಸಲು ಬಯಸುವುದಾಗಿ ಹೇಳಿದ್ದರು.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...