Homeಕರ್ನಾಟಕಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

- Advertisement -
- Advertisement -

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. 40 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ. ಆದರೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಒಬ್ಬ ಸಾಮಾನ್ಯ ವ್ಯಕ್ತಿ ಮೇಲೆ ಸೋತ ವ್ಯಕ್ತಿಗೆ, ಟ್ಯೂಷನ್ ಟೀಚರ್ ವಿರುದ್ಧ ಸೋತ ವ್ಯಕ್ತಿಗೆ ಏಕೆ ಟಿಕೆಟ್ ನೀಡಿದರು ಎನ್ನುವುದೇ ಆಶ್ವರ್ಯ. ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಸಹಾಯ ಮಾಡಿರುವ ಕಾರಣ ಟಿಕೆಟ್ ದೊರೆತಿದೆ. ಹಿರಿಯ ನಾಯಕರಿಗೆ ಸೂರ್ಯ ನಮಸ್ಕಾರ, ಶವಾಸನ, ಕಪಾಲಿಪಾತಿ, ಧೀರ್ಘ ದಂಡ ನಮಸ್ಕಾರ ಈ ರೀತಿಯ ಸೇವೆಯನ್ನು ಮಾಡಿರುವ ಕಾರಣ ಟಿಕೆಟ್ ಸಿಕ್ಕಿರಬಹುದು ಎಂದು ಹೇಳಿದ್ದಾರೆ.

ಸಾಮಾನ್ಯ ಮನುಷ್ಯನಾದ ನಾನು ನನ್ನ ಎಲ್ಲಾ ವ್ಯವಹಾರ, ಗಳಿಕೆ, ಖರ್ಚು ಸೇರಿದಂತೆ ನನ್ನ ಸಂಪೂರ್ಣ ಆದಾಯದ ಬಗ್ಗೆ ನಾಳೆಯೇ ಲೆಕ್ಕ ನೀಡಲು ಸಿದ್ದನಿದ್ದೇನೆ. ನೀವು ನನ್ನ ಮೇಲೆ ಐಟಿ, ಇಡಿ ಬಿಡುವ ಪ್ರಮೇಯವೇ ಬೇಡ. ನೀವು ಪ್ರಾಮಾಣಿಕರಾಗಿದ್ದರೆ ನಿಮ್ಮ ಆದಾಯದ ಮೂಲವನ್ನು ಘೋಷಣೆ ಮಾಡುತ್ತೀರಾ. ನಿಮಗೆ ಆ ಧೈರ್ಯ ಇದೆಯೇ? ಸಂಸತ್ತು ಘನತೆಯನ್ನು ಹೊಂದಿರುವ ಸ್ಥಳ, ಅಲ್ಲಿಗೆ ನಿಮ್ಮನ್ನು ನಾವು ಹೋಗಲು ಬಿಡುವುದಿಲ್ಲ. ಇಡೀ ಕೇಂದ್ರ ಸರ್ಕಾರವೇ ಬಂದು ನಿಂತುಕೊಂಡರೂ ಸುಧಾಕರ್ ಅವರು ಸಂಸತ್ತಿನ ಮೆಟ್ಟಿಲನ್ನು ತುಳಿಯಲು ಬಿಡುವುದಿಲ್ಲ. ಇದು ಆಕ್ರೋಶದ ಮಾತಲ್ಲ ಮಧ್ಯಮ ವರ್ಗದ ಹುಡುಗನೊಬ್ಬನ ಮಾತು. ಸಾರ್ವಜನಿಕ ಜೀವನದಲ್ಲಿ ನಿಮ್ಮನ್ನು ನೂರಾರು ಜನ ತೆಗಳುತ್ತಾರೆ, ಹೊಗಳುತ್ತಾರೆ ಆದನ್ನು ಸ್ವೀಕರಿಸುವ ಮನೋಭಾವ ಇರಬೇಕು. ನನಗೂ ಸಹ ಅನೇಕ ಜನ ಕೆಟ್ಟದಾಗಿ ಬೈಯ್ಯುತ್ತಾರೆ. ಆದರೆ ನಾನು ಅದನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಮೇಲೆ 22 ಪ್ರಕರಣ ದಾಖಲಿಸಿದರು. 10 ಸಾವಿರ ಜನ ಬಂದು ನನ್ನನ್ನು ಬಿಡುಗಡೆ ಮಾಡಿಸಿದರು. ನನ್ನ ಮೇಲೆ ಇಲ್ಲ ಸಲ್ಲದ ಕೇಸ್ಗಳನ್ನು ಹಾಕಿಸಿದರು. ನಾನು ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಮಾಡಿ ಬೇಲ್ ದೊರೆಯುವಂತೆ ಮಾಡಿಕೊಳ್ಳುತ್ತೇನೆ. ಕಾನೂನನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ವ್ಯಕ್ತಿ ಅಚಾನಕ್ ಆಗಿ ಗೆದ್ದರೆ ಎಂದು ಸಾಂದರ್ಬಿಕವಾಗಿ ಹೇಳುತ್ತಿದ್ದೇನೆ. ಈ ವ್ಯಕ್ತಿ ಗೆಲ್ಲಲ್ಲ, ಗೆಲ್ಲಬಾರದು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಗೆದ್ದರೆ ಕೇಂದ್ರದ ಬಿಜೆಪಿಯ ಮಂತ್ರಿಗಳಿಗೂ ಇವರು ಒಂದಷ್ಟು ಆಸನಗಳನ್ನು ಕಲಿಸುತ್ತಾರೆ. ಒಂದಷ್ಟು ಜನರ ಆತ್ಮ ಸಂತೋಷ, ಆತ್ಮ ತೃಪ್ತಿಗೆ ಕೆಲಸ ಮಾಡುತ್ತಾರೆ. ಇದಾದ ನಂತರ ರಾಜ್ಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರೂ ಇರುವುದಿಲ್ಲ. ಸುಧಾಕರ್ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಅದಕ್ಕೆ ನಾನು ಹೇಳಿದೆ ಮಾನ ಇದ್ದವರು ನಷ್ಟವಾಗಿದೆ ಎಂದು ಕೇಸ್ ಹಾಕಬೇಕು ಇವರು ಏಕೆ ಹಾಕಿದರು? ಅವರಿಗೆ ಮಾನ ಇದೆ ಎಂದು ಸಾಬೀತು ಮಾಡಲಿ ನಾನು ಹೇಳಿದಂತೆ ಕೇಳುತ್ತೇನೆ.

ಕೆ. ಸುಧಾಕರ್ ವಿಚಿತ್ರವಾದ ರಾಜಕಾರಣಿ. ಬಿಜೆಪಿಯ ಕೆಲವು ನಾಯಕರು ಹೇಳಿದರು ಸುಧಾಕರ್ ತುಂಬಾ ಕ್ರಿಮಿನಲ್ ಮನುಷ್ಯ ನಿನ್ನ ಅವನು ಬಿಡುವುದಿಲ್ಲ ಎಂದು, ಆದರೆ ನಾನೇ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದೇನೆ. ಸುಧಾಕರ್ ಅವರು ಮಾಡಿದ ಭ್ರಷ್ಟಾಚಾರದ ವಿರುದ್ದ ನನ್ನ ಹೋರಾಟ. ಒಂದೇ ಒಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳದ ವ್ಯಕ್ತಿ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗದ ಯುವಕರು, ಜನತೆ ನನ್ನ ಮಾತನ್ನು ಗಮನವಿಟ್ಟು ಕೇಳಬೇಕು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರು ನೀವು ಬೆಂಬಲ ನೀಡಬೇಕು. ಸುಧಾಕರ್ ಗೆದ್ದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಆತ ಭ್ರಷ್ಟಾಚಾರಿ ಎಂದು ಅವರ ಪಕ್ಷದ ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಅವರ ಅಹಂಕಾರದ ಬಗ್ಗೆ ಅವರ ಪಕ್ಷದ ಜನರೇ ಮಾತನಾಡುತ್ತಾರೆ. ನೀವು ನನ್ನ ವಿರುದ್ದ ಧೈರ್ಯವಾಗಿ ಮಾತನಾಡಿ ನಾನು ಕೋರ್ಟಿಗೆ ಹೋಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸಹಿಸಿಕೊಳ್ಳುವ ಶಕ್ತಿ ಇದ್ದರೆ ಮಾತ್ರ ರಾಜಕಾರಣಕ್ಕೆ ಬರಬೇಕು. ಮೆಡಿಕಲ್ ಕಾಲೇಜು, ಕ್ರಷರ್ ಸೇರಿದಂತೆ ಅನೇಕ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪವಿದೆ. ನೀವು ಸಾರ್ವಜನಿಕ ಚರ್ಚೆಗೆ ಬರುವಿರಾ?ನಾನು 10 ಆಂಬ್ಯುಲೆನ್ಸ್ ಗಳನ್ನು ಉಚಿತವಾಗಿ ಜನರ ಸೇವೆಗೆ ಬಿಟ್ಟಿದ್ದೇನೆ. ತಾವು ಆರೋಗ್ಯ ಸಚಿವರಾಗಿದ್ದವರು ಏನು ಕೆಲಸ ಮಾಡಿದ್ದೀರಾ ಹೇಳಿ? ಉತ್ಸವ ಮಾಡಿ ಎಲ್ಲಾ ಸೂಪರ್ ಸ್ಟಾರ್ಗಳನ್ನು ಕರೆದುಕೊಂಡು ಬಂದಿರಿ, ಆದರೆ ಸಾಮಾನ್ಯ ಹುಡುಗನ ವಿರುದ್ದ ಸೋತು ಹೋದಿರಿ. ಸೆಲೆಬ್ರಿಟಿ ಬಂದರೆ ಮತ ಹಾಕುವ ಕಾಲ ಹೋಯಿತು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಕುರಿ ಮೇಯಲಿ ಎಂದು ಬಿಟ್ಟಿದ್ದೇನೆ, ಅಲ್ಲಿಯ ತನಕ ನಾವು ಕಡಲೇಕಾಯಿ ತಿನ್ನುತ್ತಾ ಕುಳಿತಿರುತ್ತೇವೆಯೇ? ಕೊರೋನಾ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳಲು ಯಾರ, ಯಾರ ಕಾಲಿಗೆ ಬಿದ್ದು ಕಾಪಾಡಿ ಎಂದು ಕೇಳಿಕೊಂಡಿದ್ದೀರಿ ನೆನಪಿದೆಯೇ? ನೀವು ನನಗೆ ತೊಂದರೆ ನೀಡಿದಾಗ ಎದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಭಾದೆ, ನೋವು, ಕಣ್ಣೀರು ಹೊರಗೆ ಬಂದ ಕಾರಣ ನಾನು ಶಾಸಕನಾದೆ. ಸುಧಾಕರ್ ಕಾಂಗ್ರೆಸ್‌ಗೆ ತೊಂದರೆಯಲ್ಲ, ಬಿಜೆಪಿಗೆ ತೊಂದರೆ, ಇವರು ಕೋವಿಡ್ ಹಗರಣ ಮಾಡಿದ ಕಾರಣ ಬಿಜೆಪಿ ಸೋಲು ಕಂಡಿತು. 40 ರೂಪಾಯಿ ಮಾಸ್ಕ್‌ನ್ನು 400 ರೂಪಾಯಿಗೆ ಬಿಲ್ ಮಾಡಿದ ವ್ಯಕ್ತಿ ಈತ. ಒಂದಲ್ಲ ಒಂದು ದಿನ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸುತ್ತೀರಾ ಎಂದು ನನಗೆ ಗೊತ್ತಿದೆ. ಒಂದೇ ಒಂದು ರೂಪಾಯಿ ಲಂಚ ತೆಗೆದುಕೊಂಡಿಲ್ಲ ಎಂದು ಭೋಗನಂದೀಶ್ವರ ದೇವಸ್ಥಾನದಲ್ಲಿ ಆಣೆ ಮಾಡುತ್ತೇನೆ. ಅವರು ಕೊರೋನಾ ಸಮಯದಲ್ಲಿ ಲಂಚ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ. ಆಗ ನಿಮ್ಮ ವಿರುದ್ದ ಮಾತನಾಡುವುದನ್ನೇ ನಿಲ್ಲಿಸುತ್ತೇನೆ. ಆದಾಯದ ಮೂಲ ಕೇಳಿದರೆ ಎಲ್ಲರಿಗೂ ಬೈಯ್ಯುತ್ತಾರೆ. ಜ್ಯೋತಿಷಿಗಳು ಅವರಿಗೆ ಹೇಳಿದ್ದಾರಂತೆ ಮೂರು ಬಾರಿ ಸೋಲುತ್ತೀರಿ ಎಂದು. ಈಗ ಒಂದು ಬಾರಿ ಮುಂದೆ ನನ್ನ ಮೇಲೆ ಎರಡು ಬಾರಿ ಸೋಲುತ್ತಾರೆ. ಇನ್ನು ಒಂದು ತಿಂಗಳು ನನಗೂ, ಸುಧಾಕರ್ ಅವರಿಗೆ ನಿರಂತರ ಯುದ್ದ ನಡೆಯುತ್ತದೆ. ನಾವು ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಎಂದಿಗೂ ನಾಯಕ ಎಂದು ಒಪ್ಪಿಕೊಂಡಿಲ್ಲ. ದಯವಿಟ್ಟು ಗೀತಾ ಶಿವರಾಜ್ ಕುಮಾರ್ ಅವರ ಬಗ್ಗೆ ಮಾತನಾಡಬೇಡಿ. ನೀವು ನಾಯಕರಾಗಿದ್ದರೆ ನಿಮಗೆ ಮತ್ತು ಮಗನಿಗೆ ಟಿಕೆಟ್ ತಪ್ಪಿಸುತ್ತಿರಲಿಲ್ಲ. ಇಂಡಿಯಾದಲ್ಲಿ ಇರುವ ಅನೇಕ ಮೂಲಭೂತ ಸೌಕರ್ಯಗಳನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಆಸ್ಪತ್ರೆ, ಸರ್ಕಾರಿ ಶಾಲೆ, ರಸ್ತೆ ಎಲ್ಲಾ ತಂದಿದ್ದು ಕಾಂಗ್ರೆಸ್. ಕೇವಲ ತಾರಸಿ ಹಾಕಿ 10 ವರ್ಷದಲ್ಲಿ ನಾವೇ ಮಾಡಿದ್ದೇವೆ ಎಂದು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿ ಅವರನ್ನು ದುರ್ಗೆ ಎಂದು ಕರೆದಿದ್ದಾರೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಮಲ ಭಾರತ್ ಅಭಿಯಾನ ತಂದರೆ ಬಿಜೆಪಿಯವರು ಅದನ್ನೇ ಸ್ವಚ್ಚ ಭಾರತ್ ಎನ್ನುತ್ತಾರೆ. ಭೇಟಿ ಬಚಾವೋ, ನಗರ ಮನೆ ನಿರ್ಮಾಣ ಯೋಜನೆ, ಜನೌಷಧಿ ಯೋಜನೆ, ಈ- ಆಡಳಿತ ಯೋಜನೆಗಳನ್ನು ಹೆಸರು ಬದಲಾಯಿಸಿ ಜನರ ಮುಂದೆ ತಂದಿದ್ದಾರೆ. 60 ಲಕ್ಷ ಸಣ್ಣ ಕೈಗಾರಿಕೆಗಳನ್ನು ಮುಚ್ಚಿ ಹಾಕಿದ್ದು ಬಿಜೆಪಿ. ಬಿಜೆಪಿಯವರು ಯಾವುದೇ ಚರ್ಚೆಗೆ ಬರುವುದಿಲ್ಲ, ಕಷ್ಟಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...