Homeಚಳವಳಿಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ...

ಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆಯಾಗಿ ಮೂರು ವರ್ಷಗಳ ನಂತರವೂ, ಆತನ ತಾಯಿ ಫಾತಿಮಾ ನಫೀಸ್ ತನ್ನ ಮಗನ ಹುಡುಕಾಟವನ್ನು ಮುಂದುವರೆಸಿದ್ದಾರೆ. ಪತ್ರಿಭಟನೆಯ ಅಂಗವಾಗಿ ತನ್ನ ಮಗ ಕಳೆದುಹೋದ ದಿನವಾದ ಅಕ್ಟೋಬರ್ 15 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬುಲಂದ್‌ಶಹರ್‌ನಲ್ಲಿ ಜನಸಮೂಹದಿಂದ ಕೊಲ್ಲಲ್ಪಟ್ಟ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ರಜನಿ ಸಿಂಗ್ ಸಹ ಹೆಜ್ಜೆ ಹಾಕಲಿದ್ದಾರೆ.

ನಾಗರಿಕ ಹಕ್ಕುಗಳ ಸಂಘಟನೆಯಾದ ಯುನೈಟೆಡ್ ಎಗೇನ್ಸ್ಟ್ ಹೇಟ್ (ಯುಎಹೆಚ್) ನ ಕಾರ್ಯಕರ್ತ ನದೀಮ್ ಖಾನ್ ಮಾತನಾಡಿ ಈ ವರ್ಷದ ಜೂನ್‌ನಲ್ಲಿ ಜಾರ್ಖಂಡ್‌ನಲ್ಲಿ ಹತ್ಯೆಗೀಡಾದ ತಬ್ರೆಜ್ ಅನ್ಸಾರಿ ಅವರ ಕುಟುಂಬ ಮತ್ತು 2017ರ ಸೆಪ್ಟೆಂಬರ್‌ನಲ್ಲಿ ಕೊಲೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಂಬಂಧಿಕರೂ ಮೆರವಣಿಗೆಯಲ್ಲಿ ಜೊತೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಜೀಬ್‌ ತಾಯಿ ಫಾತಿಮಾ ನಫೀಸ್

ನವದೆಹಲಿಯ ಪತ್ರಿಕಾ ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಜೀಬ್‌ ತಾಯಿ ಫಾತಿಮಾ  “ನನ್ನ ಎಲ್ಲಾ ಹಣಕಾಸಿನ ಉಳಿತಾಯಗಳು ಬರಿದಾಗಿವೆ, ಆದರೆ ನನ್ನ ಮಗ ಇನ್ನೋ ನನಗೆ ಸಿಕ್ಕಿಲ್ಲ” ಎಂದು ನೊಂದು ನುಡಿದಿದ್ದಾರೆ. ತನ್ನ ಮಗನಿಗಾಗಿ ಮೂರು ವರ್ಷದಿಂದ ಫಾತಿಮಾ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಹೈಕೋರ್ಟ್‌ನ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದಾಗ ದೆಹಲಿ ಪೊಲೀಸರಿಂದ 2017ರ ಅಕ್ಟೋಬರ್‌ನಲ್ಲಿ ಬಂಧನಕ್ಕೂ ಒಳಗಾಗಿದ್ದರು.

ತನ್ನ ಮಗನ ಪ್ರಕರಣವನ್ನು ಪೊಲೀಸರು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ, ಮೊದಲ ದಿನದಿಂದ ಪೊಲೀಸರು ನಮಗೆ ಮೋಸ ಮಾಡಿದ್ದಾರೆ ಎಂದು  ನಜೀಬ್ ಅವರ ತಾಯಿ ಫಾತಿಮಾ ಆರೋಪಿಸಿದ್ದಾರೆ.

ತಬ್ರೇಜ್ ಅನ್ಸಾರಿ ಕುಟುಂಬ

ನಜೀಬ್ ನಾಪತ್ತೆಯಾಗುವ ಒಂದು ದಿನದ ಮೊದಲು ರಾತ್ರಿ ವೇಳೆ ಅವನಿಗೂ ಮತ್ತು ಎಬಿವಿಪಿ ಸದಸ್ಯರ ನಡುವೆ ಜಗಳವಾಗಿತ್ತು. ತರುವಾಯ, ಜೆಎನ್‌ಯುವಿನ ಎ.ಪಿ.ದಿಮ್ರಿಯವರು ಎಬಿವಿಪಿ ವಿದ್ಯಾರ್ಥಿಗಳು ನಜೀಬ್‌ ಮೇಲೆ ಹಲ್ಲೆ ಮಾಡಿದ್ದನ್ನು ದೃಢಪಡಿಸಿದ್ದರು.

ಆತನನ್ನು ಒಂಬತ್ತು ಎಬಿವಿಪಿ ವಿದ್ಯಾರ್ಥಿಗಳು ಅಪಹರಿಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಆದರೆ ಅವರು ತನಿಖೆಯಲ್ಲಿ ವಿಫಲವಾದ ನಂತರ, ದೆಹಲಿ ಹೈಕೋರ್ಟ್ ಈ ಪ್ರಕರಣವನ್ನು ಮೇ 2017 ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಮಾರು ಒಂದೂವರೆ ವರ್ಷದ ನಂತರ, ಕೇಂದ್ರ ತನಿಖಾ ಸಂಸ್ಥೆ ಕೂಡ ಯಾವುದೇ ಪುರಾವೆಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಜೊತೆಗೆ ಅಕ್ಟೋಬರ್ 2018 ರಲ್ಲಿ ಪ್ರಕರಣವನ್ನು ಮುಚ್ಚುವ ವರದಿಯನ್ನು ಸಲ್ಲಿಸಿದೆ.

ಸುಭೋದ್‌ ಕುಮಾರ್‌ ಕುಟುಂಬ

“ಸಿಬಿಐನಿಂದ ಈ ಮಟ್ಟದ ಆಘಾತವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮಾನವ ಹಕ್ಕುಗಳ ಕಾನೂನು ಜಾಲದ ಸಂಸ್ಥಾಪಕ, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದ್ದಾರೆ. ಯುಎಹೆಚ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಅವರು ಹಲವು ತಿಂಗಳುಗಳ ನಂತರ ದೆಹಲಿ ಹೈಕೋರ್ಟ್‌ಗೆ ಬಂದು ಅಪರಾಧಿಗಳು ನಮಗೆ ಗೊತ್ತಿಲ್ಲ ಎಂದು ಹೇಳುವುದು ನಾಚಿಗೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕೆಂದು ಹೈಕೋರ್ಟ್ ಆದೇಶಿಸದಿರುವುದು ಹೆಚ್ಚು ದುಃಖಕರವಾಗಿದೆ” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ

ಗೌರಿ ಲಂಕೇಶ್ ಕುಟುಂಬ

ಸುದ್ದಿ ಮಾಧ್ಯಮ ಮತ್ತು ಬಿಜೆಪಿಯ ಕಪಿಲ್ ಮಿಶ್ರಾ ವಿರುದ್ಧವೂ ಪ್ರಕರಣ ದಾಖಲಿಸಲಿದೆ

ನಜೀಬ್‌ಗೆ ಐಸಿಸ್‌ನೊಂದಿಗೆ ಸಂಪರ್ಕವಿದೆ, ಅಥವಾ ಭಯೋತ್ಪಾದಕ ಸಂಘಟನೆಯಿಂದ ಪ್ರಭಾವಿತವಾಗಿದೆ ಎಂದು ಹಲವಾರು ಮಾಧ್ಯಮ ಸಂಸ್ಥೆಗಳು ಮಾರ್ಚ್ 2017 ರಲ್ಲಿ ಆರೋಪಿಸಿದ್ದವು. ಅಂತಹ ಆರೋಪಗಳನ್ನು ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟವಾಗಿ ನಿರಾಕರಿಸಿದ್ದರು. ಇದರಿಂದ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಫಾತಿಮಾರವರು ಪರಿಶೀಲನೆ ಮಾಡದೇ ಮಾಹಿತಿಯನ್ನು ವರದಿ ಮಾಡಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕ್ಷಮೆಯಾಚನೆ ಮತ್ತು ಪರಿಹಾರವನ್ನು ಕೇಳಿದ್ದಾರೆ.

ಮಾರ್ಚ್ 2019 ರಲ್ಲಿ ತಡವಾಗಿಯಾದರೂ ನಜೀಬ್ ಐಸಿಸ್‌ಗೆ ಸೇರ್ಪಡೆಗೊಂಡಿದ್ದಾನೆ ಎಂಬ ಫೇಕ್‌ ನ್ಯೂಸ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ವಾಸ್ತವವಾಗಿ, ಪೊಲೀಸರು ಇಂತಹ ಎಲ್ಲಾ ವರದಿಗಳನ್ನು ತಳ್ಳಿಹಾಕಿದರೂ, ಬಿಜೆಪಿಯ ಕಪಿಲ್ ಮಿಶ್ರಾ ಕಳೆದ ವಾರ ನಜೀಬ್ ಐಸಿಸ್ ಗೆ ಸೇರಿದ್ದಾರೆ ಎಂಬ ‘ವದಂತಿಗಳಿವೆ’ ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ದೆಹಲಿ ವಕ್ಫ್ ಮಂಡಳಿಯು ನಜೀಬ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಿದ ಪ್ರತಿಕ್ರಿಯೆಯಾಗಿ ಮಿಶ್ರಾ ಮತ್ತೆ ಕೆಟ್ಟದಾಗಿ ಟ್ವೀಟ್ ಮಾಡಿದ್ದರು.

“ನಜೀಬ್ ಐಸಿಸ್ ಸೇರಿಕೊಂಡಿದ್ದಾನೆ ಎಂದು ವದಂತಿಗಳು ಹೇಳುತ್ತವೆ.  ಆದರೂ “ಕಾಣೆಯಾದ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅವರ ಕುಟುಂಬಕ್ಕೆ ಕೇಜ್ರಿವಾಲ್ 5 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗವನ್ನು ನೀಡಿದ್ದಾರೆ.” ದೆಹಲಿಯಲ್ಲಿ ಪ್ರತಿ ವರ್ಷ 8,000 ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರು ಹಿಂದೂಗಳಾಗಿದ್ದರಿಂದ ಅವರಿಗೆ ಮಾತ್ರ ಪರಿಹಾರ ಹಣ ಸಿಗುತ್ತಿಲ್ಲ. ಅವರ ಹೆತ್ತವರು ಮಾಡಿದ ತಪ್ಪು ಏನು? ಕೇಜ್ರಿವಾಲ್ ಜಿಹಾದಿ ಮತ್ತು ನಕ್ಸಲರಿಗೆ ಮಾತ್ರ ಹಣವನ್ನು ನೀಡುತ್ತಾರೆಯೇ? ” ಎಂದು ಕಪಿಲ್‌ ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಅವರು ಶೀಘ್ರದಲ್ಲೇ ಕ್ಷಮೆಯಾಚಿಸದಿದ್ದರೆ ಫಾತಿಮಾ ಅವರು ಮಿಶ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸಿದ್ದಾರೆ.

ಸತ್ಯ ಏನೇಂದರೆ ದೆಹಲಿಯ ಅರವಿಂದ್‌ ಕೇಜ್ರಿವಾಲ್‌ರವರು ಮುಸ್ಲಿಂ ಕುಟುಂಬಗಳಿಗೆ ಮಾತ್ರವಲ್ಲದೇ ಅನಾಹುತ, ಅಪಘಾತಗಳಲ್ಲಿ ಮರಣ ಹೊಂದಿದೆ ಎಲ್ಲಾ ಧರ್ಮದ ಕುಟುಂಬಗಳಿಗೆ ಪರಿಹಾರ ಹಣ ನೀಡಿದ್ದರ ಬಗ್ಗೆ ಸಾಕ್ಷಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಆದರೂ ಬಿಜೆಪಿಯವರು ಕೇವಲ ರಾಜಕೀಯ ಮಾಡುವುದಕ್ಕಾಗಿ ಮುಸ್ಲಿಂರನ್ನು ಗುರಿಮಾಡುತ್ತಿದ್ದಾರೆ ಎಂದು ಆ ಸಂದರ್ಭದಲ್ಲಿ ಧೃವ್‌ರಾಠೀ ಸೇರಿದಂತೆ ಇತರರು ವಾದ ಮಾಡಿದ್ದರು.

ಆಧಾರ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...