Homeಮುಖಪುಟಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ಗ್ರಾಹಕರ ಅನುಮತಿ ಪಡೆಯದೆ ವಿಮಾ ಯೋಜನೆಗಳಿಗೆ ಸೇರ್ಪಡೆ, ಖಾತೆಯಿಂದ ಹಣ ಕಡಿತ!

- Advertisement -
- Advertisement -

ಮೋದಿ ಸರ್ಕಾರದ ಪ್ರಧಾನ ಮಂತ್ರಿ ‘ಜೀವನ ಜ್ಯೋತಿ ಭೀಮಾ ಯೋಜನೆ’ ಸೇರಿದಂತೆ ಇನ್ನಿತರ ಹಲವು ವಿಮಾ ಯೋಜನೆಗಳಿಗೆ ಜನರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್‌ಗಳು ಅವರನ್ನು ಸೇರಿಸಿ ಖಾತೆಗಳಿಂದ ಪ್ರೀಮಿಯಂ ಮೊತ್ತ ಕಡಿತ ಮಾಡುತ್ತಿರುವುದು ಬಯಲಾಗಿದೆ. ಯೋಜನೆಗಳಿಗೆ ಜನರನ್ನು ಸೇರಿಸುವಾಗ ಬೇಕಿರುವ ದಾಖಲೆಗಳನ್ನು ಮತ್ತು ಮಾಹಿತಿಗಳನ್ನು ಬ್ಯಾಂಕ್‌ಗಳೇ ಸೃಷ್ಟಿಸುತ್ತಿವೆ ಎಂದು artical-14.com ನ ತನಿಖಾ ವರದಿ ತಿಳಿಸಿದೆ.

ಮಾಧ್ಯಮ ವರದಿಗಳು ಮತ್ತು ಸಾರ್ವಜನಿಕರ ದೂರುಗಳ ಹೊರತಾಗಿಯೂ, ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಕಡಿಮೆ ವೆಚ್ಚದ ಜೀವ ವಿಮೆ ಮತ್ತು ಅಪಘಾತ ವಿಮೆ ಯೋಜನೆಗಳಿಗೆ ಗ್ರಾಹಕರನ್ನು ನೋಂದಾಯಿಸಲು ಬ್ಯಾಂಕ್‌ಗಳು ಅವರ ಖಾತೆಗಳಿಂದ ಅನುಮತಿಯಿಲ್ಲದೆ ಹಣ ಕಡಿತ ಮಾಡುತ್ತಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ ಗುರಿ ಪೂರೈಸಲು ಬ್ಯಾಂಕ್‌ಗಳು ಗ್ರಾಹಕರ ಖಾತೆಗಳಿಂದ ಸಾಮೂಹಿಕವಾಗಿ ಹಣ ಕಡಿತ ಮಾಡುತ್ತಿವೆ. ಕೆಲ ಸಂದರ್ಭಗಳಲ್ಲಿ ಗ್ರಾಹಕರ ಒಪ್ಪಿಗೆಯನ್ನು ನಕಲಿಸುವುದು ಮತ್ತು ಅದನ್ನು ಮರೆಮಾಚಲು ಸ್ಥಳೀಯ ಕಚೇರಿಗಳಿಗೆ ಸೂಚಿಸುವುದು ಮಾಡುತ್ತಿದೆ ಎಂದು ತನಿಖಾ ವರದಿ ಹೇಳಿದೆ.

ಬ್ಯಾಂಕ್‌ಗಳು ಮೋದಿ ಸರ್ಕಾರದ ವಿಮಾ ಯೋಜನೆಗಳಿಗಾಗಿ ತಮ್ಮ ಖಾತೆಗಳಿಂದ ಹಣ ಕಡಿತಗೊಳಿಸುವುದರ ವಿರುದ್ಧ ಹೆಚ್ಚಿನ ಗ್ರಾಹಕರು ಆಕ್ರೋಶಗೊಂಡಿದ್ದಾರೆ. ಬ್ಯಾಂಕ್ ಶಾಖೆಗಳಿಗೆ ತೆರಳಿ ದಬಾಯಿಸಿದ್ದಾರೆ. ಇಂತಹ ಕೆಲವು ಗ್ರಾಹಕರಿಂದ ಕಡಿತ ಮಾಡಿದ್ದ ಹಣವನ್ನು ಬ್ಯಾಂಕ್‌ಗಳು ಹಿಂದಿರುಗಿಸಿವೆ. ಇನ್ನೂ ಕೆಲವರು ನ್ಯಾಯಾಲಯಗಳ ಮೆಟ್ಟಿಲೇರಿದ್ದಾರೆ. ಅವರೊಂದಿಗೆ ರಾಜಿ ಸಂಧಾನಕ್ಕಾಗಿ ಬ್ಯಾಂಕ್‌ಗಳು ಅಲವತ್ತುಕೊಂಡಿವೆ. ಇದಕ್ಕೆ ಕ್ಯಾರೇ ಎನ್ನದ ಗ್ರಾಹಕರು. “ಇದು ಕೇವಲ ಹಣದ ಪ್ರಶ್ನೆಯಲ್ಲ, ಇದು ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಮಾಡುತ್ತಿರುವ ವಂಚನೆಯಾಗಿದೆ. ಇದನ್ನು ನಿಲ್ಲಿಸಲೇಬೇಕಿದೆ” ಎಂದು ಕಾನೂನು ಸಮರ ಮುಂದುರೆಸಿದ್ದಾರೆ.

ಬಿಹಾರದ ಸರನ್ ಜಿಲ್ಲೆಯ ಇಂಜಿನಿಯರಿಂಗ್ ಪದವೀಧರ ಕುಂದನ್ ಕುಮಾರ್ ಕಳೆದೊಂದು ವರ್ಷದಿಂದಲೂ ತಾನು ಖರೀದಿಸದ ವಿಮಾ ಪಾಲಿಸಿಯಿಂದ ಹೊರ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು artical-14.com ತಿಳಿಸಿದೆ.

ಕುಮಾರ್ ಅವರ ಅನುಮತಿಯಿಲ್ಲದೇ ಅವರ ಖಾತೆಯಿಂದ ಬ್ಯಾಂಕ್‌ ಹಣವನ್ನು ಕಡಿತಗೊಳಿಸಿದೆ. ಅವರ ಹೆಸರನ್ನು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (ಪಿಎಂಜೆಜೆಬಿವೈ)ಗೆ ಸೇರಿಸಿದೆ.

ಕುಮಾರ್ ಅವರು ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ನಲ್ಲಿ ಖಾತೆ ಹೊಂದಿದ್ದು, 2022 ಡಿಸೆಂಬರ್‌ 29ರಂದು ಬ್ಯಾಂಕ್‌ ಅವರ ಖಾತೆಯಿಂದ ಹಣ ಕಡಿತಗೊಳಿಸಿದೆ. ದಿನಗಳ ಬಳಿಕ ಈ ಕುರಿತು ಅರಿವಾದಾಗ, ಕುಮಾರ್ ಮಾಹಿತಿ ಹಕ್ಕು ಕಾಯ್ದೆಯಡಿ(ಆರ್‌ಟಿಐ) ಬ್ಯಾಂಕ್‌ನಿಂದ ವಿಮಾ ಪಾಲಿಸಿಗೆ ತನ್ನ ಅರ್ಜಿಯ ಪ್ರತಿಯನ್ನು ಕೋರಿದ್ದರು. ಸದ್ರಿ ವಿಮೆಗಾಗಿ ಯಾವುದೇ ಅರ್ಜಿಯು ಕಂಡು ಬಂದಿಲ್ಲ ಎಂದು ಬ್ಯಾಂಕ್‌ 2023, ಫೆ.2ರಂದು ನೀಡಿದ್ದ ಉತ್ತರದಲ್ಲಿ ತಿಳಿಸಿತ್ತು.

ಬ್ಯಾಂಕ್‌ಗಳು ಇತರ ವಿಮಾ ಯೋಜನೆಗಳಿಗೂ ಗ್ರಾಹಕರ ಅನುಮತಿ ಇಲ್ಲದೆ ಸೇರಿಸುತ್ತಿದೆ. “ನನ್ನ ಖಾತೆಯಿಂದ ಕಡಿತಗೊಳಿಸಿರುವ ಹಣವನ್ನು ಬ್ಯಾಂಕ್ ವಾಪಸ್ ಕೊಟ್ಟಿಲ್ಲ. ಈ ಕೊಳಕು ವ್ಯವಸ್ಥೆಯಿಂದ ಹೊರ ಬರಲು ನಾನು ಮಾರ್ಗ ಹುಡುಕುತ್ತಿದ್ದೇನೆ” ಎಂದು artical-14.com ಗೆ ಕುಮಾರ್ ಹೇಳಿದ್ದಾರೆ.

ಜೀವ ವಿಮೆಯಲ್ಲದೆ ಬ್ಯಾಂಕ್‌ಗಳು ಗ್ರಾಹಕರ ಅನುಮತಿಯಿಲ್ಲದೆ ಅವರನ್ನು ಅಪಘಾತ ವಿಮೆಯಾಗಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (ಪಿಎಂಎಸ್ಬಿವೈ), ಅಟಲ್ ಪಿಂಚಣಿ ಯೋಜನೆ (ಎಪಿವೈ)ಗೂ ಸೇರಿಸಿ ಖಾತೆಗಳಿಂದ ಹಣ ಕಡಿತಗೊಳಿಸುತ್ತಿವೆ.

ಕುಮಾರ್ ಒಪ್ಪಿಗೆಯಿಲ್ಲದೆ ಅವರನ್ನು ಪಿಎಂಜೆಜೆಬಿವೈಗೆ ಸೇರಿಸಿದ್ದರೆ, ಅವರ ತಾಯಿಯ ಹೆಸರನ್ನು ಒಪ್ಪಿಗೆ ಪಡೆಯದೇ ಎಪಿವೈಗೆ ಸೇರಿಸಲಾಗಿದೆ. ಪಿಎಂಜೆಜೆಬಿವೈಗೆ ವಾರ್ಷಿಕ ಪ್ರೀಮಿಯಂ 436 ರೂ.ಗಳಾಗಿದ್ದರೆ ಪಿಎಂಎಸ್‌ಬಿವೈಗೆ 20 ರೂ.ಗಳಾಗಿವೆ. ಗ್ರಾಹಕರು ಒಮ್ಮೆ ಈ ಯೋಜನೆಗಳಿಗೆ ಚಂದಾದಾರರಾದರೆ ಪ್ರತಿ ವರ್ಷ ಅವರ ಖಾತೆಯಿಂದ ಹಣ ಕಡಿತವಾಗುತ್ತಲೇ ಇರುತ್ತದೆ.

ಪಿಎಂಜೆಜೆಬಿವೈ ಯಾವುದೇ ಕಾರಣದಿಂದ ಸಾವು ಸಂಭವಿಸಿದರೆ ಪಾಲಿಸಿದಾರನ ನಾಮಿನಿಗೆ 2 ಲಕ್ಷ ರೂ.ಗಳ ವಿಮೆ ಹಣವನ್ನು ನೀಡುತ್ತದೆ. ಪಿಎಂಎಸ್‌ಬಿವೈ ಅಪಘಾತದಿಂದ ಸಾವು ಸಂಭವಿಸಿದರೆ 2 ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡರೆ 1 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸುತ್ತದೆ. ಎಪಿವೈ 60 ವರ್ಷ ವಯಸ್ಸಿನ ಬಳಿಕ 5,000 ರೂ.ವರೆಗೂ ಮಾಸಿಕ ಪಿಂಚಣಿಯನ್ನು ನೀಡುತ್ತದೆ. ಇದು ಮಾಸಿಕ ಶುಲ್ಕವು ಆಯ್ಕೆ ಮಾಡಿದ ಪಿಂಚಣಿ ಪ್ಲಾನ್ ಅನ್ನು ಅವಲಂಬಿಸಿರುತ್ತದೆ.

ಹೆಚ್ಚಿನ ಸಂದರ್ಭಗಳಲ್ಲಿ ಅನುಮತಿಯಿಲ್ಲದೆ ಯೋಜನೆಗಳಿಗೆ ನೋಂದಾಯಿತರಾದವರಿಗೆ ತಾವು ವಿಮಾ ರಕ್ಷಣೆಗಾಗಿ ಪ್ರೀಮಿಯಂ ನೀಡುತ್ತಿದ್ದೇವೆ ಎನ್ನುವುದೂ ಗೊತ್ತಿರುವುದಿಲ್ಲ. ಇದು ದುರಂತ ಸಂಭವಿಸಿದ ಸಂದರ್ಭಗಳಲ್ಲಿ ಕುಟುಂಬದ ಸದಸ್ಯರು ಯೋಜನೆಯ ಲಾಭಗಳನ್ನು ಪಡೆಯುವುದನ್ನು ತಡೆಯುತ್ತದೆ ಮತ್ತು ಅನುಮತಿಯಿಲ್ಲದೆ ಕಡಿತಗೊಂಡ ಪ್ರೀಮಿಯಂ ಹಣವೂ ವ್ಯರ್ಥವಾಗುತ್ತದೆ.

ಪಾಲಿಸಿದಾರರ/ಖಾತೆದಾರರ ಒಪ್ಪಿಗೆಯಿಲ್ಲದೆ ವಿಮೆ ಯೋಜನೆಗಳನ್ನು ಸಕ್ರಿಯಗೊಳಿಸುವಾಗ ಸುಳ್ಳು ಮಾಹಿತಿಗಳನ್ನು ನಮೂದಿಸಲಾಗುತ್ತದೆ ಎಂದು ಬ್ಯಾಂಕ್ ಉದ್ಯೋಗಿಗಳೇ ಒಪ್ಪಿಕೊಂಡಿದ್ದಾರೆ.

artical-14.comಗೆ ಲಭ್ಯವಾಗಿರುವ ಇಂತಹ ಗ್ರಾಹಕರ ಪಾಲಿಸಿಗಳು ಬೋಗಸ್ ನಾಮಿನಿಗಳನ್ನು ತೋರಿಸಿವೆ. ಇದು ಯೋಜನೆಯ ಲಾಭಗಳನ್ನು ಪಡೆದುಕೊಳ್ಳಲು ಪಾಲಿಸಿದಾರನ ಕುಟುಂಬಕ್ಕೆ ನಿರ್ಬಂಧವನ್ನೂ ಒಡ್ಡುತ್ತದೆ.

ಬ್ಯಾಂಕ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸಂಘಗಳು ಈ ಯೋಜನೆಗಳಿಗಾಗಿ ಗ್ರಾಹಕರ ಖಾತೆಗಳಿಂದ ಅನಧಿಕೃತವಾಗಿ ಹಣವನ್ನು ಕಡಿತಗೊಳಿಸುವ ಅವ್ಯವಹಾರವನ್ನು ವಿರೋಧಿಸಿವೆ. ಆದರೆ, ಬ್ಯಾಂಕ್‌ಗಳು ಇದಕ್ಕೆ ಸೊಪ್ಪು ಹಾಕುತ್ತಿಲ್ಲ.

ಈ ಅವ್ಯವಹಾರವನ್ನು ಸಾಂಸ್ಥಿಕಗೊಳಿಸಲಾಗಿದೆ ಮತ್ತು ಬ್ಯಾಂಕ್‌ಗಳ ಪ್ರಾದೇಶಿಕ, ವಲಯ ಮತ್ತು ಮುಖ್ಯ ಕಚೇರಿಗಳು ಸಹ ಈ ವಂಚನೆಗಳನ್ನು ಕಾರ್ಯಗತಗೊಳಿಸುತ್ತಿವೆ. ಅದನ್ನು ಮರೆಮಾಚುವಂತೆ ಶಾಖೆಗಳನ್ನು ಒತ್ತಾಯಿಸುತ್ತವೆ ಎನ್ನುವುದನ್ನು ಹೊಸ ಸಾಕ್ಷ್ಯಾಧಾರಗಳು ಬಹಿರಂಗಗೊಳಿಸಿವೆ ಎಂದು artical-14 ವರದಿಯಲ್ಲಿ ತಿಳಿಸಿದೆ.

ಬಡವರಿಗೆ ಆರ್ಥಿಕ ಭದ್ರತೆ ಒದಗಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಡಿಮೆ ವೆಚ್ಚದ ಕಲ್ಯಾಣ ಯೋಜನೆಗಳನ್ನು ಮೇ 2015 ರಲ್ಲಿ ಪ್ರಾರಂಭಿಸಿದರು. ಸರ್ಕಾರದ ಒತ್ತಡದ ಕಾರಣ ಮೊದಲಿನಿಂದಲೂ, ಬ್ಯಾಂಕ್‌ಗಳು ಈ ಯೋಜನೆಗಳಿಗೆ ಗ್ರಾಹಕರನ್ನು ಮೋಸದ ಮಾರ್ಗಗಳ ಮೂಲಕ ಸೇರಿಸುತ್ತಿರುವ ಆರೋಪ ಕೇಳಿ ಬಂದಿದೆ.

ಈ ವರದಿಯಲ್ಲಿ artical-14 ಉಲ್ಲೇಖಿಸಿದ ಬಿಹಾರದ ಒಬ್ಬ ವ್ಯಕ್ತಿಯ ಉದಾಹರಣೆಯನ್ನು ಮಾತ್ರ ವಿವರಿಸಿದ್ದೇವೆ. artical-14 ವರದಿಯಲ್ಲಿ ವಂಚನೆಗೊಳಗಾದ ಇನ್ನಷ್ಟು ಗ್ರಾಹಕ ಸಮಸ್ಯೆಗಳನ್ನು ವಿಸ್ಕೃತವಾಗಿ ಬಿಚ್ಚಿಡಲಾಗಿದೆ.

ಬ್ಯಾಂಕ್‌ಗಳು ಮಾಹಿತಿ ನೀಡದೆ ವಿಮಾ ಯೋಜನೆಗಳಿಗೆ ಗ್ರಾಹಕರನ್ನು ಸೇರಿಸಿ, ಅವರ ಖಾತೆಗಳಿಂದ ಹಣ ಕಡಿತಗೊಳಿಸಿರುವ ಕುರಿತು ಅನೇಕ ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. artical-14 ಪ್ರಕಾರ, ಬ್ಯಾಂಕ್‌ ಹೇಳದೆ ಕೇಳದೆ ಯುವ ಜನರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮತ್ತು ಮಧ್ಯಮ ವರ್ಗದ ಗ್ರಾಹಕರ ಖಾತೆಗಳಿಂದ ಹಣ ಕಡಿತ ಮಾಡುತ್ತಿದೆ. ಕೆಲವರಿಗೆ ಕಡಿತವಾಗುವ ಹಣ ಬಹಳ ಕಡಿಮೆ ಇದೆಯಲ್ಲವೇ ಎಂದನಿಸಿದರೂ, ಬಡ-ಮಧ್ಯಮ ವರ್ಗದವರಿಗೆ ಅದೊಂದು ದೊಡ್ಡ ಮೊತ್ತವಾಗಿದೆ. ಒಂದೊಂದು ರೂಪಾಯಿಯೂ ಅವರಿಗೆ ಅಮೂಲ್ಯವಾದ್ದದ್ದು. ಹಣ ಕಡಿತದ ಹೊರತಾಗಿಯೂ ಬ್ಯಾಂಕ್‌ಗಳು ಮಾಹಿತಿ ನೀಡದೆ ವಿಮಾ ಯೋಜನೆಗೆ ನೋಂದಣಿ ಮಾಡುವುದು ದೊಡ್ಡ ವಂಚನೆ.

ಕೃಪೆ : artical-14.com

ಇದನ್ನೂ ಓದಿ : ಬ್ಲೂಮ್‌ಬರ್ಗ್ ವರದಿಗೆ ತಡೆ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಪೆಟ್ಟು ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...