Homeಮುಖಪುಟಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ಗ್ರಾಹಕರ ಅನುಮತಿ ಪಡೆಯದೆ ವಿಮಾ ಯೋಜನೆಗಳಿಗೆ ಸೇರ್ಪಡೆ, ಖಾತೆಯಿಂದ ಹಣ ಕಡಿತ!

- Advertisement -
- Advertisement -

ಮೋದಿ ಸರ್ಕಾರದ ಪ್ರಧಾನ ಮಂತ್ರಿ ‘ಜೀವನ ಜ್ಯೋತಿ ಭೀಮಾ ಯೋಜನೆ’ ಸೇರಿದಂತೆ ಇನ್ನಿತರ ಹಲವು ವಿಮಾ ಯೋಜನೆಗಳಿಗೆ ಜನರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್‌ಗಳು ಅವರನ್ನು ಸೇರಿಸಿ ಖಾತೆಗಳಿಂದ ಪ್ರೀಮಿಯಂ ಮೊತ್ತ ಕಡಿತ ಮಾಡುತ್ತಿರುವುದು ಬಯಲಾಗಿದೆ. ಯೋಜನೆಗಳಿಗೆ ಜನರನ್ನು ಸೇರಿಸುವಾಗ ಬೇಕಿರುವ ದಾಖಲೆಗಳನ್ನು ಮತ್ತು ಮಾಹಿತಿಗಳನ್ನು ಬ್ಯಾಂಕ್‌ಗಳೇ ಸೃಷ್ಟಿಸುತ್ತಿವೆ ಎಂದು artical-14.com ನ ತನಿಖಾ ವರದಿ ತಿಳಿಸಿದೆ.

ಮಾಧ್ಯಮ ವರದಿಗಳು ಮತ್ತು ಸಾರ್ವಜನಿಕರ ದೂರುಗಳ ಹೊರತಾಗಿಯೂ, ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಕಡಿಮೆ ವೆಚ್ಚದ ಜೀವ ವಿಮೆ ಮತ್ತು ಅಪಘಾತ ವಿಮೆ ಯೋಜನೆಗಳಿಗೆ ಗ್ರಾಹಕರನ್ನು ನೋಂದಾಯಿಸಲು ಬ್ಯಾಂಕ್‌ಗಳು ಅವರ ಖಾತೆಗಳಿಂದ ಅನುಮತಿಯಿಲ್ಲದೆ ಹಣ ಕಡಿತ ಮಾಡುತ್ತಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ ಗುರಿ ಪೂರೈಸಲು ಬ್ಯಾಂಕ್‌ಗಳು ಗ್ರಾಹಕರ ಖಾತೆಗಳಿಂದ ಸಾಮೂಹಿಕವಾಗಿ ಹಣ ಕಡಿತ ಮಾಡುತ್ತಿವೆ. ಕೆಲ ಸಂದರ್ಭಗಳಲ್ಲಿ ಗ್ರಾಹಕರ ಒಪ್ಪಿಗೆಯನ್ನು ನಕಲಿಸುವುದು ಮತ್ತು ಅದನ್ನು ಮರೆಮಾಚಲು ಸ್ಥಳೀಯ ಕಚೇರಿಗಳಿಗೆ ಸೂಚಿಸುವುದು ಮಾಡುತ್ತಿದೆ ಎಂದು ತನಿಖಾ ವರದಿ ಹೇಳಿದೆ.

ಬ್ಯಾಂಕ್‌ಗಳು ಮೋದಿ ಸರ್ಕಾರದ ವಿಮಾ ಯೋಜನೆಗಳಿಗಾಗಿ ತಮ್ಮ ಖಾತೆಗಳಿಂದ ಹಣ ಕಡಿತಗೊಳಿಸುವುದರ ವಿರುದ್ಧ ಹೆಚ್ಚಿನ ಗ್ರಾಹಕರು ಆಕ್ರೋಶಗೊಂಡಿದ್ದಾರೆ. ಬ್ಯಾಂಕ್ ಶಾಖೆಗಳಿಗೆ ತೆರಳಿ ದಬಾಯಿಸಿದ್ದಾರೆ. ಇಂತಹ ಕೆಲವು ಗ್ರಾಹಕರಿಂದ ಕಡಿತ ಮಾಡಿದ್ದ ಹಣವನ್ನು ಬ್ಯಾಂಕ್‌ಗಳು ಹಿಂದಿರುಗಿಸಿವೆ. ಇನ್ನೂ ಕೆಲವರು ನ್ಯಾಯಾಲಯಗಳ ಮೆಟ್ಟಿಲೇರಿದ್ದಾರೆ. ಅವರೊಂದಿಗೆ ರಾಜಿ ಸಂಧಾನಕ್ಕಾಗಿ ಬ್ಯಾಂಕ್‌ಗಳು ಅಲವತ್ತುಕೊಂಡಿವೆ. ಇದಕ್ಕೆ ಕ್ಯಾರೇ ಎನ್ನದ ಗ್ರಾಹಕರು. “ಇದು ಕೇವಲ ಹಣದ ಪ್ರಶ್ನೆಯಲ್ಲ, ಇದು ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಮಾಡುತ್ತಿರುವ ವಂಚನೆಯಾಗಿದೆ. ಇದನ್ನು ನಿಲ್ಲಿಸಲೇಬೇಕಿದೆ” ಎಂದು ಕಾನೂನು ಸಮರ ಮುಂದುರೆಸಿದ್ದಾರೆ.

ಬಿಹಾರದ ಸರನ್ ಜಿಲ್ಲೆಯ ಇಂಜಿನಿಯರಿಂಗ್ ಪದವೀಧರ ಕುಂದನ್ ಕುಮಾರ್ ಕಳೆದೊಂದು ವರ್ಷದಿಂದಲೂ ತಾನು ಖರೀದಿಸದ ವಿಮಾ ಪಾಲಿಸಿಯಿಂದ ಹೊರ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು artical-14.com ತಿಳಿಸಿದೆ.

ಕುಮಾರ್ ಅವರ ಅನುಮತಿಯಿಲ್ಲದೇ ಅವರ ಖಾತೆಯಿಂದ ಬ್ಯಾಂಕ್‌ ಹಣವನ್ನು ಕಡಿತಗೊಳಿಸಿದೆ. ಅವರ ಹೆಸರನ್ನು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (ಪಿಎಂಜೆಜೆಬಿವೈ)ಗೆ ಸೇರಿಸಿದೆ.

ಕುಮಾರ್ ಅವರು ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ನಲ್ಲಿ ಖಾತೆ ಹೊಂದಿದ್ದು, 2022 ಡಿಸೆಂಬರ್‌ 29ರಂದು ಬ್ಯಾಂಕ್‌ ಅವರ ಖಾತೆಯಿಂದ ಹಣ ಕಡಿತಗೊಳಿಸಿದೆ. ದಿನಗಳ ಬಳಿಕ ಈ ಕುರಿತು ಅರಿವಾದಾಗ, ಕುಮಾರ್ ಮಾಹಿತಿ ಹಕ್ಕು ಕಾಯ್ದೆಯಡಿ(ಆರ್‌ಟಿಐ) ಬ್ಯಾಂಕ್‌ನಿಂದ ವಿಮಾ ಪಾಲಿಸಿಗೆ ತನ್ನ ಅರ್ಜಿಯ ಪ್ರತಿಯನ್ನು ಕೋರಿದ್ದರು. ಸದ್ರಿ ವಿಮೆಗಾಗಿ ಯಾವುದೇ ಅರ್ಜಿಯು ಕಂಡು ಬಂದಿಲ್ಲ ಎಂದು ಬ್ಯಾಂಕ್‌ 2023, ಫೆ.2ರಂದು ನೀಡಿದ್ದ ಉತ್ತರದಲ್ಲಿ ತಿಳಿಸಿತ್ತು.

ಬ್ಯಾಂಕ್‌ಗಳು ಇತರ ವಿಮಾ ಯೋಜನೆಗಳಿಗೂ ಗ್ರಾಹಕರ ಅನುಮತಿ ಇಲ್ಲದೆ ಸೇರಿಸುತ್ತಿದೆ. “ನನ್ನ ಖಾತೆಯಿಂದ ಕಡಿತಗೊಳಿಸಿರುವ ಹಣವನ್ನು ಬ್ಯಾಂಕ್ ವಾಪಸ್ ಕೊಟ್ಟಿಲ್ಲ. ಈ ಕೊಳಕು ವ್ಯವಸ್ಥೆಯಿಂದ ಹೊರ ಬರಲು ನಾನು ಮಾರ್ಗ ಹುಡುಕುತ್ತಿದ್ದೇನೆ” ಎಂದು artical-14.com ಗೆ ಕುಮಾರ್ ಹೇಳಿದ್ದಾರೆ.

ಜೀವ ವಿಮೆಯಲ್ಲದೆ ಬ್ಯಾಂಕ್‌ಗಳು ಗ್ರಾಹಕರ ಅನುಮತಿಯಿಲ್ಲದೆ ಅವರನ್ನು ಅಪಘಾತ ವಿಮೆಯಾಗಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (ಪಿಎಂಎಸ್ಬಿವೈ), ಅಟಲ್ ಪಿಂಚಣಿ ಯೋಜನೆ (ಎಪಿವೈ)ಗೂ ಸೇರಿಸಿ ಖಾತೆಗಳಿಂದ ಹಣ ಕಡಿತಗೊಳಿಸುತ್ತಿವೆ.

ಕುಮಾರ್ ಒಪ್ಪಿಗೆಯಿಲ್ಲದೆ ಅವರನ್ನು ಪಿಎಂಜೆಜೆಬಿವೈಗೆ ಸೇರಿಸಿದ್ದರೆ, ಅವರ ತಾಯಿಯ ಹೆಸರನ್ನು ಒಪ್ಪಿಗೆ ಪಡೆಯದೇ ಎಪಿವೈಗೆ ಸೇರಿಸಲಾಗಿದೆ. ಪಿಎಂಜೆಜೆಬಿವೈಗೆ ವಾರ್ಷಿಕ ಪ್ರೀಮಿಯಂ 436 ರೂ.ಗಳಾಗಿದ್ದರೆ ಪಿಎಂಎಸ್‌ಬಿವೈಗೆ 20 ರೂ.ಗಳಾಗಿವೆ. ಗ್ರಾಹಕರು ಒಮ್ಮೆ ಈ ಯೋಜನೆಗಳಿಗೆ ಚಂದಾದಾರರಾದರೆ ಪ್ರತಿ ವರ್ಷ ಅವರ ಖಾತೆಯಿಂದ ಹಣ ಕಡಿತವಾಗುತ್ತಲೇ ಇರುತ್ತದೆ.

ಪಿಎಂಜೆಜೆಬಿವೈ ಯಾವುದೇ ಕಾರಣದಿಂದ ಸಾವು ಸಂಭವಿಸಿದರೆ ಪಾಲಿಸಿದಾರನ ನಾಮಿನಿಗೆ 2 ಲಕ್ಷ ರೂ.ಗಳ ವಿಮೆ ಹಣವನ್ನು ನೀಡುತ್ತದೆ. ಪಿಎಂಎಸ್‌ಬಿವೈ ಅಪಘಾತದಿಂದ ಸಾವು ಸಂಭವಿಸಿದರೆ 2 ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡರೆ 1 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸುತ್ತದೆ. ಎಪಿವೈ 60 ವರ್ಷ ವಯಸ್ಸಿನ ಬಳಿಕ 5,000 ರೂ.ವರೆಗೂ ಮಾಸಿಕ ಪಿಂಚಣಿಯನ್ನು ನೀಡುತ್ತದೆ. ಇದು ಮಾಸಿಕ ಶುಲ್ಕವು ಆಯ್ಕೆ ಮಾಡಿದ ಪಿಂಚಣಿ ಪ್ಲಾನ್ ಅನ್ನು ಅವಲಂಬಿಸಿರುತ್ತದೆ.

ಹೆಚ್ಚಿನ ಸಂದರ್ಭಗಳಲ್ಲಿ ಅನುಮತಿಯಿಲ್ಲದೆ ಯೋಜನೆಗಳಿಗೆ ನೋಂದಾಯಿತರಾದವರಿಗೆ ತಾವು ವಿಮಾ ರಕ್ಷಣೆಗಾಗಿ ಪ್ರೀಮಿಯಂ ನೀಡುತ್ತಿದ್ದೇವೆ ಎನ್ನುವುದೂ ಗೊತ್ತಿರುವುದಿಲ್ಲ. ಇದು ದುರಂತ ಸಂಭವಿಸಿದ ಸಂದರ್ಭಗಳಲ್ಲಿ ಕುಟುಂಬದ ಸದಸ್ಯರು ಯೋಜನೆಯ ಲಾಭಗಳನ್ನು ಪಡೆಯುವುದನ್ನು ತಡೆಯುತ್ತದೆ ಮತ್ತು ಅನುಮತಿಯಿಲ್ಲದೆ ಕಡಿತಗೊಂಡ ಪ್ರೀಮಿಯಂ ಹಣವೂ ವ್ಯರ್ಥವಾಗುತ್ತದೆ.

ಪಾಲಿಸಿದಾರರ/ಖಾತೆದಾರರ ಒಪ್ಪಿಗೆಯಿಲ್ಲದೆ ವಿಮೆ ಯೋಜನೆಗಳನ್ನು ಸಕ್ರಿಯಗೊಳಿಸುವಾಗ ಸುಳ್ಳು ಮಾಹಿತಿಗಳನ್ನು ನಮೂದಿಸಲಾಗುತ್ತದೆ ಎಂದು ಬ್ಯಾಂಕ್ ಉದ್ಯೋಗಿಗಳೇ ಒಪ್ಪಿಕೊಂಡಿದ್ದಾರೆ.

artical-14.comಗೆ ಲಭ್ಯವಾಗಿರುವ ಇಂತಹ ಗ್ರಾಹಕರ ಪಾಲಿಸಿಗಳು ಬೋಗಸ್ ನಾಮಿನಿಗಳನ್ನು ತೋರಿಸಿವೆ. ಇದು ಯೋಜನೆಯ ಲಾಭಗಳನ್ನು ಪಡೆದುಕೊಳ್ಳಲು ಪಾಲಿಸಿದಾರನ ಕುಟುಂಬಕ್ಕೆ ನಿರ್ಬಂಧವನ್ನೂ ಒಡ್ಡುತ್ತದೆ.

ಬ್ಯಾಂಕ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸಂಘಗಳು ಈ ಯೋಜನೆಗಳಿಗಾಗಿ ಗ್ರಾಹಕರ ಖಾತೆಗಳಿಂದ ಅನಧಿಕೃತವಾಗಿ ಹಣವನ್ನು ಕಡಿತಗೊಳಿಸುವ ಅವ್ಯವಹಾರವನ್ನು ವಿರೋಧಿಸಿವೆ. ಆದರೆ, ಬ್ಯಾಂಕ್‌ಗಳು ಇದಕ್ಕೆ ಸೊಪ್ಪು ಹಾಕುತ್ತಿಲ್ಲ.

ಈ ಅವ್ಯವಹಾರವನ್ನು ಸಾಂಸ್ಥಿಕಗೊಳಿಸಲಾಗಿದೆ ಮತ್ತು ಬ್ಯಾಂಕ್‌ಗಳ ಪ್ರಾದೇಶಿಕ, ವಲಯ ಮತ್ತು ಮುಖ್ಯ ಕಚೇರಿಗಳು ಸಹ ಈ ವಂಚನೆಗಳನ್ನು ಕಾರ್ಯಗತಗೊಳಿಸುತ್ತಿವೆ. ಅದನ್ನು ಮರೆಮಾಚುವಂತೆ ಶಾಖೆಗಳನ್ನು ಒತ್ತಾಯಿಸುತ್ತವೆ ಎನ್ನುವುದನ್ನು ಹೊಸ ಸಾಕ್ಷ್ಯಾಧಾರಗಳು ಬಹಿರಂಗಗೊಳಿಸಿವೆ ಎಂದು artical-14 ವರದಿಯಲ್ಲಿ ತಿಳಿಸಿದೆ.

ಬಡವರಿಗೆ ಆರ್ಥಿಕ ಭದ್ರತೆ ಒದಗಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಡಿಮೆ ವೆಚ್ಚದ ಕಲ್ಯಾಣ ಯೋಜನೆಗಳನ್ನು ಮೇ 2015 ರಲ್ಲಿ ಪ್ರಾರಂಭಿಸಿದರು. ಸರ್ಕಾರದ ಒತ್ತಡದ ಕಾರಣ ಮೊದಲಿನಿಂದಲೂ, ಬ್ಯಾಂಕ್‌ಗಳು ಈ ಯೋಜನೆಗಳಿಗೆ ಗ್ರಾಹಕರನ್ನು ಮೋಸದ ಮಾರ್ಗಗಳ ಮೂಲಕ ಸೇರಿಸುತ್ತಿರುವ ಆರೋಪ ಕೇಳಿ ಬಂದಿದೆ.

ಈ ವರದಿಯಲ್ಲಿ artical-14 ಉಲ್ಲೇಖಿಸಿದ ಬಿಹಾರದ ಒಬ್ಬ ವ್ಯಕ್ತಿಯ ಉದಾಹರಣೆಯನ್ನು ಮಾತ್ರ ವಿವರಿಸಿದ್ದೇವೆ. artical-14 ವರದಿಯಲ್ಲಿ ವಂಚನೆಗೊಳಗಾದ ಇನ್ನಷ್ಟು ಗ್ರಾಹಕ ಸಮಸ್ಯೆಗಳನ್ನು ವಿಸ್ಕೃತವಾಗಿ ಬಿಚ್ಚಿಡಲಾಗಿದೆ.

ಬ್ಯಾಂಕ್‌ಗಳು ಮಾಹಿತಿ ನೀಡದೆ ವಿಮಾ ಯೋಜನೆಗಳಿಗೆ ಗ್ರಾಹಕರನ್ನು ಸೇರಿಸಿ, ಅವರ ಖಾತೆಗಳಿಂದ ಹಣ ಕಡಿತಗೊಳಿಸಿರುವ ಕುರಿತು ಅನೇಕ ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. artical-14 ಪ್ರಕಾರ, ಬ್ಯಾಂಕ್‌ ಹೇಳದೆ ಕೇಳದೆ ಯುವ ಜನರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮತ್ತು ಮಧ್ಯಮ ವರ್ಗದ ಗ್ರಾಹಕರ ಖಾತೆಗಳಿಂದ ಹಣ ಕಡಿತ ಮಾಡುತ್ತಿದೆ. ಕೆಲವರಿಗೆ ಕಡಿತವಾಗುವ ಹಣ ಬಹಳ ಕಡಿಮೆ ಇದೆಯಲ್ಲವೇ ಎಂದನಿಸಿದರೂ, ಬಡ-ಮಧ್ಯಮ ವರ್ಗದವರಿಗೆ ಅದೊಂದು ದೊಡ್ಡ ಮೊತ್ತವಾಗಿದೆ. ಒಂದೊಂದು ರೂಪಾಯಿಯೂ ಅವರಿಗೆ ಅಮೂಲ್ಯವಾದ್ದದ್ದು. ಹಣ ಕಡಿತದ ಹೊರತಾಗಿಯೂ ಬ್ಯಾಂಕ್‌ಗಳು ಮಾಹಿತಿ ನೀಡದೆ ವಿಮಾ ಯೋಜನೆಗೆ ನೋಂದಣಿ ಮಾಡುವುದು ದೊಡ್ಡ ವಂಚನೆ.

ಕೃಪೆ : artical-14.com

ಇದನ್ನೂ ಓದಿ : ಬ್ಲೂಮ್‌ಬರ್ಗ್ ವರದಿಗೆ ತಡೆ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಪೆಟ್ಟು ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...