Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....