Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....