Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....